Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...