Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...