Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...