Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...