Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...