Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು

- Advertisement -
- Advertisement -

ಮೋದಿ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಐತಿಹಾಸಿಕ ರೈತ ಹೋರಾಟ 6 ತಿಂಗಳುಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ರೈತರ ಹೋರಾಟಕ್ಕೆ ಅಮೆರಿಕಾದ ಕೃಷಿಕರು, ತಜ್ಞರು ಮತ್ತು ರಾಜಕಾರಣಿಗಳು ಬೆಂಬಲ ವ್ಯಕ್ತಪಡಿಸಿದ್ದು ಮೋದಿ ಸರ್ಕಾರದ ನಡೆಯನ್ನು ಅಂತ್ಯಂತ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂದರೆ ಮೇ 26 ರಂದು ದೇಶವ್ಯಾಪಿ ಕರಾಳ ದಿನಾಚರಣೆಗೆ ಕರೆ ನೀಡುವ ಮೂಲಕ ರೈತರ ಪಾಲಿಗೆ ಮರಣ ಶಾಸನದಂತಿರುವ ಕರಾಳ ಕಾನೂನುಗಳನ್ನು ಹಿಂಪಡೆಯುವ ವರೆಗೂ ಹೋರಾಟ ನಿಲ್ಲಿಸುವ ಮಾತಿಲ್ಲ ಎಂದು ಹೋರಾಟ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಭಾರತದ ರೈತರ ಐತಿಹಾಸಿಕ ಹೋರಾಟ ಕೇವಲ ನಮ್ಮ ನೆಲದಲ್ಲಿ ಮಾತ್ರವಲ್ಲದೆ ದೂರದ ಅಮೇರಿಕಾದಲ್ಲೂ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹಿಂದೆ ರಿಹಾನ್ನಾ, ಗ್ರೆಟಾ ಥನ್​ ಬರ್ಗ್​ ಸೇರಿದಂತೆ ವಿದೇಶಿ ತಾರೆಯರು ನಮ್ಮ ರೈತ ಹೋರಾಟದ ಪರ ದನಿ ಎತ್ತುವ ಮೂಲಕ ಇಲ್ಲಿನ ಅನ್ನದಾತರ ಹೊರಾಟಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದು ಕೊಟ್ಟಿದ್ದರು.

ಇದೀಗ ಮತ್ತೊಮ್ಮೆ ಭಾರತೀಯ ರೈತರ ಹೋರಾಟದ ಬಗ್ಗೆ ದಿ ವೈರ್​ ಜಾಲತಾಣದ ಮಿಥಾಲಿ ಮುಖರ್ಜಿ, ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರೊಂದಿಗೆ ಸಂದರ್ಶನವೊಂದನ್ನು ನಡೆಸಿದ್ದು, ಭಾರತದ ರೈತರ ಹೋರಾಟ ಮತ್ತು ಇಲ್ಲಿನ ಸರ್ಕಾರ ಜಾರಿಗೆ ತರಲು ಹೊರಟಿರುವ ವಿವಾದಾತ್ಮಕ ಕಾನೂನುಗಳ ಬಗ್ಗೆ ಅಮೇರಿಕನ್ನರ ಅಭಿಪ್ರಾಯ ಕಲೆ ಹಾಕಿದ್ದಾರೆ.

ಮಿತಾಲಿ ಜೊತೆಗಿನ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಮೆರಿಕಾದ ಮಿಸೌರಿ ಸ್ಟೇಟ್​ನ 45ನೇ ಲೆಫ್ಟಿನೆಂಟ್​​ ಗವರ್ನರ್​​ ಜೋಯ್​ ಮ್ಯಾಕ್ಸ್​ವೆಲ್​, ನ್ಯಾಷನಲ್​ ಫ್ಯಾಮಿಲಿ ಫಾರ್ಮ್​ ಕೋಎಲಿಷನ್​ನ ಮಾಜಿ ಅಧ್ಯಕ್ಷ ​ಜೋರ್ಜ್​ ನೇಯ್ಲರ್​​ ಹಾಗೂ ನಾಸಾದ ಮಾಜಿ ವಿಜ್ಞಾನಿ ಡಾ. ಬೆಡಬ್ರತಾ ಒಕ್ಕೋರಲಾಗಿ ಭಾರತದ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ.

“ಭಾರತದಲ್ಲಿ ಮೋದಿ ಸರ್ಕಾರದ ಕರಾಳ ಕಾನೂನುಗಳು ಜಾರಿಗೆ ಬಂದಿದ್ದೆ ಆದಲ್ಲಿ ಇಲ್ಲಿನ ಸಣ್ಣ ಭೂ ಹಿಡುವಳಿದಾರರು ಹಾಗೂ ಕೃಷಿಯನ್ನೇ ನಂಬಿಕೊಂಡಿರುವ ಗ್ರಾಮೀಣ ಸಮುದಾಯ ಸಂಪೂರ್ಣ ನಾಶವಾಗಲಿದೆ ಎಂದು ಅಮೇರಿಕಾದ ಕೃಷಿ ತಜ್ಞರು ಭವಿಷ್ಯ ನುಡಿದಿದ್ದಾರೆ.

“ಭಾರತೀಯ ರೈತರ ಹೋರಾಟ ಅಮೇರಿಕಾದಲ್ಲಿನ ಕೃಷಿಕರ ಹಲವು ದಶಕಗಳ ಹೋರಾಟದ ಮುಂದುವರಿದ ಭಾಗ ಎಂದಿರುವ ತಜ್ಞರು, ಕೆಲ ದಶಕಗಳ ಹಿಂದೆ ಅಮೆರಿಕಾದಲ್ಲೂ ಕಾರ್ಪೋರೇಟ್​​ ಕೃಷಿ ಆರಂಭವಾದಾಗ ಇಲ್ಲಿನ ರೈತರು ಕೂಡ ಕೃಷಿ ಬಿಕ್ಕಟ್ಟನ್ನು ಎದುರಿಸಿದ್ದರು. ಆಗ ಮಿಡ್​ ವೆಸ್ಟ್​ನ ಗ್ರಾಮೀಣ ಆರ್ಥಿಕತೆ ಸಂಪೂರ್ಣ ಹದಗೆಟ್ಟಿತ್ತು. ಒಂದು ವೇಳೆ ಭಾರತದಲ್ಲೂ ಕಾರ್ಪೋರೇಟ್​​ ಕೃಷಿಯನ್ನು ಉತ್ತೇಜಿಸುವ ಕರಾಳ ಕಾನೂನುಗಳು ಜಾರಿಯಾದರೆ ಅಲ್ಲಿನ ರೈತರು ಕೂಡ ಬೀದಿಗೆ ಬೀಳಿಲಿದ್ದಾರೆ” ಎಂದು ಅಮೇರಿಕಾದ ಕೃಷಿ ತಜ್ಞರು ಹಾಗೂ ರಾಜಕೀಯ ನಾಯಕರುಗಳು ಆತಂಕ ವ್ಯಕ್ತ ಪಡಿಸಿದ್ದಾರೆ.

ಸಂದರ್ಶನದ ಪೂರ್ಣ ವಿಡಿಯೋ ನೋಡಿ

ಇತ್ತ ಭಾರತದಲ್ಲಿ ರೈತ ಹೋರಾಟ ಮತ್ತೆ ಗರಿಗೆದರುತ್ತಿದೆ. ಸುಗ್ಗಿ ಮುಗಿಸಿರುವ ರೈತರು ದೆಹಲಿ ಗಡಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡೇ ಹೋರಾಟ ಮುಂದುವರೆಸಲು ಪಣ ತೊಟ್ಟಿದ್ದಾರೆ. ಸಾಂಕ್ರಾಮಿಕದ ಕಾಲದಲ್ಲಿ ಕೃಷಿ ಕಾಯ್ದೆಗಳನ್ನು ತರುವುದಾದರೆ, ಅದೇ ಸಾಂಕ್ರಾಮಿಕ ಕಾಲದಲ್ಲಿ ಅವುಗಳನ್ನು ರದ್ದುಗೊಳಿಸಲು ಏಕೆ ಸಾಧ್ಯವಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್‌ ಮುಖಂಡ ರಾಕೇಶ್ ಟಿಕಾಯತ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆಯ ಸುದ್ದಿ ಮತ್ತು ಸಂದೇಶವನ್ನು ಗೌರಿ ಪತ್ರಿಕೆಯು ನೀಡುತ್ತಿರುವುದು

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...