Homeಅಂತರಾಷ್ಟ್ರೀಯಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

- Advertisement -
- Advertisement -

ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನಿರಾಕರಿಸಿ, ಹೆಚ್ಚುವರಿ ಡೇಟಾವನ್ನು ಕೇಳಿದೆ.

ಮಾನ್ಯತೆ ನೀಡಲು ಹೆಚ್ಚುವರಿ ಕ್ಲಿನಿಕಲ್ ಪ್ರಯೋಗಗಳಿಂದ ಡೇಟಾ ಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಕೊವ್ಯಾಕ್ಸಿನ್ ಇನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸದ ಕಾರಣಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದಕ್ಕೆ ಮಾನ್ಯತೆ ನೀಡಿಲ್ಲ.

ಜನವರಿ 16ರಿಂದ ಭಾರತದಲ್ಲಿ ಶುರುವಾದ ಲಸಿಕಾ ಅಭಿಯಾನದಲ್ಲಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಯ ಲಸಿಕೆ ಎಂದು ಭಾರತೀಯರಿಗೆ ನೀಡಲಾಗುತ್ತಿದೆ. ಬೇರೆಲ್ಲ ಕಡೆ ಮಾನ್ಯತೆ ಇಲ್ಲದಿರುವ ಲಸಿಕೆಯನ್ನು ನಮ್ಮ ದೇಹಕ್ಕೆ ಏಕೆ ಸೇರಿಸಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತದ ಲಸಿಕಾ ಅಭಿಯಾನಕ್ಕೆ ಅನುಮೋದಿಸಿದ ವಿದೇಶಿ ಲಸಿಕೆಗಳ ಬ್ರಿಡ್ಜಿಂಗ್‍ ಟ್ರಯಲ್ಸ್ ಅಗತ್ಯವಿಲ್ಲ ಎಂದು ಭಾರತದ ಔಷಧ ಮಂಡಳಿ ಹೇಳಿದೆ. ಅಂದರೆ ಪ್ರಾದೇಶಿಕವಾಗಿ ಯಾವುದೇ ಟ್ರಯಲ್ಸ್ ಇಲ್ಲದೇ ಈ ಲಸಿಕೆಗಳೂ ನಮ್ಮ ದೇಹ ಹೊಕ್ಕಲಿವೆ.

ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಸ್ಥಳೀಯ ಜನಸಂಖ್ಯೆಯಲ್ಲಿ ಸುರಕ್ಷತೆ ಮತ್ತು ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ಭಾರತೀಯರನ್ನು ಒಳಗೊಂಡಿರುವ ಸ್ಥಳೀಯ ಕ್ಲಿನಿಕಲ್ ಪ್ರಯೋಗಗಳು ಅಥವಾ ಬ್ರಿಡ್ಜ್ ಅಧ್ಯಯನಗಳನ್ನು ಸರ್ಕಾರ ಈ ಮೊದಲು ಬಯಸಿತ್ತು. ಆದರೆ ಈಗ ಅದಕ್ಕೆ ಬೈ ಬೈ ಹೇಳಿದೆ.

ಜುಲೈ ಮತ್ತು ಅಕ್ಟೋಬರ್ ನಡುವೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧವಾಗಿರುವ ಫಿಜರ್, ಯಾವುದೇ ತೀವ್ರ ಅಡ್ಡಪರಿಣಾಮಗಳಿಗೆ ಪರಿಹಾರ ನೀಡಲಾಗದು ಎಂಬ ಷರತ್ತು ಹಾಕಿದೆ. ಇಲ್ಲಿ ಕೊವ್ಯಾಕ್ಸಿನ್ ಅನ್ನು ದೇಸಿ ಲಸಿಕೆ ಕರೆದ ಸರ್ಕಾರ ಅದನ್ನು ನಮ್ಮ ದೇಹಕ್ಕೆ ಸೇರಿಸುತ್ತಿದೆ. ಅಭಿಯಾನ ಶುರುವಾಗಿ 5 ತಿಂಗಳಾದರೂ ಅದಿನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸಿಲ್ಲ ಎನ್ನಲಾಗಿದೆ.

ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನೂ ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಈ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ. ವಿದೇಶಕ್ಕೆ ತೆರಳುವ ಸಾವಿರಾರು ಜನರು ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು  ಕೊವ್ಯಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

ಕೊವಾಕ್ಸಿನ್‍ ಉತ್ಪಾದಿಸುತ್ತಿರುವ ಭಾರತ್‍ ಬಯೋಟೆಕ್‍ ಕಂಪನಿ ಮೂರನೇ ಕ್ಲಿನಿಕಲ್‍ ಟ್ರಯಲ್ಸ್ ವಿವರಗಳನ್ನು ಹಾಗೂ ಅದರ ಲಸಿಕೆಯ ಸಾಮರ್ಥ್ಯದ ಬಗೆಗಿನ ಪುರಾವೆಗಳನ್ನು 2021ರ ಜುಲೈ ತನಕ ಕೊಡಲು ಸಾಧ್ಯವಾಗುವುದಿಲ್ಲವೆಂದು ಹೇಳಿದೆ. ಅದಕ್ಕಾಗಿಯೇ ಈ ಕೊವ್ಯಾಕ್ಸಿನ್‍ಗೆ  ಈವರೆಗೆ WHO ಪರವಾನಗಿಯೂ ಸಿಕ್ಕಿಲ್ಲ.

ಆರಂಭದಲ್ಲೇ ಭಾರತ್‍ ಬಯೋಟೆಕ್‍ಗೆ ಮೆಲಿಂದಾ ಗೇಟ್ಸ್ ಫೌಂಡೇಷನ್‍ ಅಪಾರ ಧನಸಹಾಯ ಮಾಡಿದೆ. ನಮ್ಮದೇ ದೇಶದ, ಪುಣೆಯ ಸರ್ಕಾರಿ ಸಂಸ್ಥೆ ವೈರಾಲಿಜಿಕಲ್‍ ಇನ್‍ಸ್ಟಿಟ್ಯೂಟ್‍ ಮತ್ತು ಐಸಿಎಂಆರ್ ತಾಂತ್ರಿಕ ಮತ್ತು ವೈದ್ಯಕೀಯ ನೆರವು ನೀಡಿವೆ. ಭಾರತ ಸರ್ಕಾರ ಭಾರತ್‍ ಬಯೋಟೆಕ್‍ಗೆ  1,500 ಕೋಟಿ ರೂ ನೀಡಿದೆ. ಇಷ್ಟಾದ ಮೇಲೂ ವಿಶ್ವದಲ್ಲೇ ಅತಿ ದುಬಾರಿ ಲಸಿಕೆ ಅಂದರೆ ಅದು ಕೊವ್ಯಾಕ್ಸಿನ್!

ಪಿ.ಕೆ. ಮಲ್ಲನಗೌಡರ್

ನವಂಬರ್ 9, 2020ರಂದು ಕೊವಾಕ್ಸಿನ್ ಮೂರನೇ ಹಂತವು ‘ಕ್ಲಿನಿಕಲ್  ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿತು!


ಇದನ್ನೂ ಓದಿ; ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...