Homeಅಂತರಾಷ್ಟ್ರೀಯಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

- Advertisement -
- Advertisement -

ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನಿರಾಕರಿಸಿ, ಹೆಚ್ಚುವರಿ ಡೇಟಾವನ್ನು ಕೇಳಿದೆ.

ಮಾನ್ಯತೆ ನೀಡಲು ಹೆಚ್ಚುವರಿ ಕ್ಲಿನಿಕಲ್ ಪ್ರಯೋಗಗಳಿಂದ ಡೇಟಾ ಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಕೊವ್ಯಾಕ್ಸಿನ್ ಇನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸದ ಕಾರಣಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದಕ್ಕೆ ಮಾನ್ಯತೆ ನೀಡಿಲ್ಲ.

ಜನವರಿ 16ರಿಂದ ಭಾರತದಲ್ಲಿ ಶುರುವಾದ ಲಸಿಕಾ ಅಭಿಯಾನದಲ್ಲಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಯ ಲಸಿಕೆ ಎಂದು ಭಾರತೀಯರಿಗೆ ನೀಡಲಾಗುತ್ತಿದೆ. ಬೇರೆಲ್ಲ ಕಡೆ ಮಾನ್ಯತೆ ಇಲ್ಲದಿರುವ ಲಸಿಕೆಯನ್ನು ನಮ್ಮ ದೇಹಕ್ಕೆ ಏಕೆ ಸೇರಿಸಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತದ ಲಸಿಕಾ ಅಭಿಯಾನಕ್ಕೆ ಅನುಮೋದಿಸಿದ ವಿದೇಶಿ ಲಸಿಕೆಗಳ ಬ್ರಿಡ್ಜಿಂಗ್‍ ಟ್ರಯಲ್ಸ್ ಅಗತ್ಯವಿಲ್ಲ ಎಂದು ಭಾರತದ ಔಷಧ ಮಂಡಳಿ ಹೇಳಿದೆ. ಅಂದರೆ ಪ್ರಾದೇಶಿಕವಾಗಿ ಯಾವುದೇ ಟ್ರಯಲ್ಸ್ ಇಲ್ಲದೇ ಈ ಲಸಿಕೆಗಳೂ ನಮ್ಮ ದೇಹ ಹೊಕ್ಕಲಿವೆ.

ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಸ್ಥಳೀಯ ಜನಸಂಖ್ಯೆಯಲ್ಲಿ ಸುರಕ್ಷತೆ ಮತ್ತು ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ಭಾರತೀಯರನ್ನು ಒಳಗೊಂಡಿರುವ ಸ್ಥಳೀಯ ಕ್ಲಿನಿಕಲ್ ಪ್ರಯೋಗಗಳು ಅಥವಾ ಬ್ರಿಡ್ಜ್ ಅಧ್ಯಯನಗಳನ್ನು ಸರ್ಕಾರ ಈ ಮೊದಲು ಬಯಸಿತ್ತು. ಆದರೆ ಈಗ ಅದಕ್ಕೆ ಬೈ ಬೈ ಹೇಳಿದೆ.

ಜುಲೈ ಮತ್ತು ಅಕ್ಟೋಬರ್ ನಡುವೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧವಾಗಿರುವ ಫಿಜರ್, ಯಾವುದೇ ತೀವ್ರ ಅಡ್ಡಪರಿಣಾಮಗಳಿಗೆ ಪರಿಹಾರ ನೀಡಲಾಗದು ಎಂಬ ಷರತ್ತು ಹಾಕಿದೆ. ಇಲ್ಲಿ ಕೊವ್ಯಾಕ್ಸಿನ್ ಅನ್ನು ದೇಸಿ ಲಸಿಕೆ ಕರೆದ ಸರ್ಕಾರ ಅದನ್ನು ನಮ್ಮ ದೇಹಕ್ಕೆ ಸೇರಿಸುತ್ತಿದೆ. ಅಭಿಯಾನ ಶುರುವಾಗಿ 5 ತಿಂಗಳಾದರೂ ಅದಿನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸಿಲ್ಲ ಎನ್ನಲಾಗಿದೆ.

ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನೂ ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಈ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ. ವಿದೇಶಕ್ಕೆ ತೆರಳುವ ಸಾವಿರಾರು ಜನರು ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು  ಕೊವ್ಯಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

ಕೊವಾಕ್ಸಿನ್‍ ಉತ್ಪಾದಿಸುತ್ತಿರುವ ಭಾರತ್‍ ಬಯೋಟೆಕ್‍ ಕಂಪನಿ ಮೂರನೇ ಕ್ಲಿನಿಕಲ್‍ ಟ್ರಯಲ್ಸ್ ವಿವರಗಳನ್ನು ಹಾಗೂ ಅದರ ಲಸಿಕೆಯ ಸಾಮರ್ಥ್ಯದ ಬಗೆಗಿನ ಪುರಾವೆಗಳನ್ನು 2021ರ ಜುಲೈ ತನಕ ಕೊಡಲು ಸಾಧ್ಯವಾಗುವುದಿಲ್ಲವೆಂದು ಹೇಳಿದೆ. ಅದಕ್ಕಾಗಿಯೇ ಈ ಕೊವ್ಯಾಕ್ಸಿನ್‍ಗೆ  ಈವರೆಗೆ WHO ಪರವಾನಗಿಯೂ ಸಿಕ್ಕಿಲ್ಲ.

ಆರಂಭದಲ್ಲೇ ಭಾರತ್‍ ಬಯೋಟೆಕ್‍ಗೆ ಮೆಲಿಂದಾ ಗೇಟ್ಸ್ ಫೌಂಡೇಷನ್‍ ಅಪಾರ ಧನಸಹಾಯ ಮಾಡಿದೆ. ನಮ್ಮದೇ ದೇಶದ, ಪುಣೆಯ ಸರ್ಕಾರಿ ಸಂಸ್ಥೆ ವೈರಾಲಿಜಿಕಲ್‍ ಇನ್‍ಸ್ಟಿಟ್ಯೂಟ್‍ ಮತ್ತು ಐಸಿಎಂಆರ್ ತಾಂತ್ರಿಕ ಮತ್ತು ವೈದ್ಯಕೀಯ ನೆರವು ನೀಡಿವೆ. ಭಾರತ ಸರ್ಕಾರ ಭಾರತ್‍ ಬಯೋಟೆಕ್‍ಗೆ  1,500 ಕೋಟಿ ರೂ ನೀಡಿದೆ. ಇಷ್ಟಾದ ಮೇಲೂ ವಿಶ್ವದಲ್ಲೇ ಅತಿ ದುಬಾರಿ ಲಸಿಕೆ ಅಂದರೆ ಅದು ಕೊವ್ಯಾಕ್ಸಿನ್!

ಪಿ.ಕೆ. ಮಲ್ಲನಗೌಡರ್

ನವಂಬರ್ 9, 2020ರಂದು ಕೊವಾಕ್ಸಿನ್ ಮೂರನೇ ಹಂತವು ‘ಕ್ಲಿನಿಕಲ್  ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿತು!


ಇದನ್ನೂ ಓದಿ; ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...