Homeಅಂತರಾಷ್ಟ್ರೀಯಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮೋದನೆ ನಿರಾಕರಿಸಿದ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ

- Advertisement -
- Advertisement -

ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ನಿರಾಕರಿಸಿ, ಹೆಚ್ಚುವರಿ ಡೇಟಾವನ್ನು ಕೇಳಿದೆ.

ಮಾನ್ಯತೆ ನೀಡಲು ಹೆಚ್ಚುವರಿ ಕ್ಲಿನಿಕಲ್ ಪ್ರಯೋಗಗಳಿಂದ ಡೇಟಾ ಬೇಕಾಗುತ್ತದೆ ಎಂದು ಅಮೆರಿಕ ಹೇಳಿದೆ. ಈ ಕೊವ್ಯಾಕ್ಸಿನ್ ಇನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸದ ಕಾರಣಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದಕ್ಕೆ ಮಾನ್ಯತೆ ನೀಡಿಲ್ಲ.

ಜನವರಿ 16ರಿಂದ ಭಾರತದಲ್ಲಿ ಶುರುವಾದ ಲಸಿಕಾ ಅಭಿಯಾನದಲ್ಲಿ ಕೊವ್ಯಾಕ್ಸಿನ್ ಅನ್ನು ತುರ್ತು ಬಳಕೆಯ ಲಸಿಕೆ ಎಂದು ಭಾರತೀಯರಿಗೆ ನೀಡಲಾಗುತ್ತಿದೆ. ಬೇರೆಲ್ಲ ಕಡೆ ಮಾನ್ಯತೆ ಇಲ್ಲದಿರುವ ಲಸಿಕೆಯನ್ನು ನಮ್ಮ ದೇಹಕ್ಕೆ ಏಕೆ ಸೇರಿಸಲಾಗುತ್ತಿದೆ ಎಂಬ ಪ್ರಶ್ನೆಗಳು ಎದ್ದಿವೆ.

ಭಾರತದ ಲಸಿಕಾ ಅಭಿಯಾನಕ್ಕೆ ಅನುಮೋದಿಸಿದ ವಿದೇಶಿ ಲಸಿಕೆಗಳ ಬ್ರಿಡ್ಜಿಂಗ್‍ ಟ್ರಯಲ್ಸ್ ಅಗತ್ಯವಿಲ್ಲ ಎಂದು ಭಾರತದ ಔಷಧ ಮಂಡಳಿ ಹೇಳಿದೆ. ಅಂದರೆ ಪ್ರಾದೇಶಿಕವಾಗಿ ಯಾವುದೇ ಟ್ರಯಲ್ಸ್ ಇಲ್ಲದೇ ಈ ಲಸಿಕೆಗಳೂ ನಮ್ಮ ದೇಹ ಹೊಕ್ಕಲಿವೆ.

ವಿದೇಶದಲ್ಲಿ ಅಭಿವೃದ್ಧಿಪಡಿಸಿದ ಲಸಿಕೆಗಳಿಗೆ ಸ್ಥಳೀಯ ಜನಸಂಖ್ಯೆಯಲ್ಲಿ ಸುರಕ್ಷತೆ ಮತ್ತು ರೋಗನಿರೋಧಕ ಶಕ್ತಿಯನ್ನು ನಿರ್ಣಯಿಸಲು ಭಾರತೀಯರನ್ನು ಒಳಗೊಂಡಿರುವ ಸ್ಥಳೀಯ ಕ್ಲಿನಿಕಲ್ ಪ್ರಯೋಗಗಳು ಅಥವಾ ಬ್ರಿಡ್ಜ್ ಅಧ್ಯಯನಗಳನ್ನು ಸರ್ಕಾರ ಈ ಮೊದಲು ಬಯಸಿತ್ತು. ಆದರೆ ಈಗ ಅದಕ್ಕೆ ಬೈ ಬೈ ಹೇಳಿದೆ.

ಜುಲೈ ಮತ್ತು ಅಕ್ಟೋಬರ್ ನಡುವೆ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಲು ಸಿದ್ಧವಾಗಿರುವ ಫಿಜರ್, ಯಾವುದೇ ತೀವ್ರ ಅಡ್ಡಪರಿಣಾಮಗಳಿಗೆ ಪರಿಹಾರ ನೀಡಲಾಗದು ಎಂಬ ಷರತ್ತು ಹಾಕಿದೆ. ಇಲ್ಲಿ ಕೊವ್ಯಾಕ್ಸಿನ್ ಅನ್ನು ದೇಸಿ ಲಸಿಕೆ ಕರೆದ ಸರ್ಕಾರ ಅದನ್ನು ನಮ್ಮ ದೇಹಕ್ಕೆ ಸೇರಿಸುತ್ತಿದೆ. ಅಭಿಯಾನ ಶುರುವಾಗಿ 5 ತಿಂಗಳಾದರೂ ಅದಿನ್ನೂ ಮೂರನೇ ಹಂತದ ಟ್ರಯಲ್ಸ್ ಮುಗಿಸಿಲ್ಲ ಎನ್ನಲಾಗಿದೆ.

ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನೂ ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಈ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ. ವಿದೇಶಕ್ಕೆ ತೆರಳುವ ಸಾವಿರಾರು ಜನರು ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು  ಕೊವ್ಯಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

ಕೊವಾಕ್ಸಿನ್‍ ಉತ್ಪಾದಿಸುತ್ತಿರುವ ಭಾರತ್‍ ಬಯೋಟೆಕ್‍ ಕಂಪನಿ ಮೂರನೇ ಕ್ಲಿನಿಕಲ್‍ ಟ್ರಯಲ್ಸ್ ವಿವರಗಳನ್ನು ಹಾಗೂ ಅದರ ಲಸಿಕೆಯ ಸಾಮರ್ಥ್ಯದ ಬಗೆಗಿನ ಪುರಾವೆಗಳನ್ನು 2021ರ ಜುಲೈ ತನಕ ಕೊಡಲು ಸಾಧ್ಯವಾಗುವುದಿಲ್ಲವೆಂದು ಹೇಳಿದೆ. ಅದಕ್ಕಾಗಿಯೇ ಈ ಕೊವ್ಯಾಕ್ಸಿನ್‍ಗೆ  ಈವರೆಗೆ WHO ಪರವಾನಗಿಯೂ ಸಿಕ್ಕಿಲ್ಲ.

ಆರಂಭದಲ್ಲೇ ಭಾರತ್‍ ಬಯೋಟೆಕ್‍ಗೆ ಮೆಲಿಂದಾ ಗೇಟ್ಸ್ ಫೌಂಡೇಷನ್‍ ಅಪಾರ ಧನಸಹಾಯ ಮಾಡಿದೆ. ನಮ್ಮದೇ ದೇಶದ, ಪುಣೆಯ ಸರ್ಕಾರಿ ಸಂಸ್ಥೆ ವೈರಾಲಿಜಿಕಲ್‍ ಇನ್‍ಸ್ಟಿಟ್ಯೂಟ್‍ ಮತ್ತು ಐಸಿಎಂಆರ್ ತಾಂತ್ರಿಕ ಮತ್ತು ವೈದ್ಯಕೀಯ ನೆರವು ನೀಡಿವೆ. ಭಾರತ ಸರ್ಕಾರ ಭಾರತ್‍ ಬಯೋಟೆಕ್‍ಗೆ  1,500 ಕೋಟಿ ರೂ ನೀಡಿದೆ. ಇಷ್ಟಾದ ಮೇಲೂ ವಿಶ್ವದಲ್ಲೇ ಅತಿ ದುಬಾರಿ ಲಸಿಕೆ ಅಂದರೆ ಅದು ಕೊವ್ಯಾಕ್ಸಿನ್!

ಪಿ.ಕೆ. ಮಲ್ಲನಗೌಡರ್

ನವಂಬರ್ 9, 2020ರಂದು ಕೊವಾಕ್ಸಿನ್ ಮೂರನೇ ಹಂತವು ‘ಕ್ಲಿನಿಕಲ್  ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿತು!


ಇದನ್ನೂ ಓದಿ; ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...