Homeಅಂತರಾಷ್ಟ್ರೀಯಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ 'ಹ್ಯಾಂಡ್ಸ್ ಆಫ್' ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು.

ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ ವರದಿಗಳಿಲ್ಲದೆ ರ್‍ಯಾಲಿಗಳು ಶಾಂತಿಯುತವಾಗಿ ನಡೆಯುತ್ತಿವೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಿಂದ ಅಲಾಸ್ಕಾದ ಆಂಕಾರೇಜ್‌ವರೆಗೆ ಪ್ರತಿಭಟನಾಕಾರರು ಜಮಾಯಿಸಿದರು. ಸರ್ಕಾರದ ಉದ್ಯೋಗ ಕಡಿತ, ಆರ್ಥಿಕತೆ, ವಲಸೆ ಮತ್ತು ಮಾನವ ಹಕ್ಕುಗಳ ಕುರಿತು ಟ್ರಂಪ್ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರ ಕ್ರಮಗಳನ್ನು ಟೀಕಿಸುತ್ತಾ ಅನೇಕ ರಾಜ್ಯ ರಾಜಧಾನಿಗಳಲ್ಲಿ ಸೇರಿದಂತೆ ಪ್ರತಿಭಟನಾಕಾರರು ಜಮಾಯಿಸಿದರು.

ಪ್ರತಿಭಟನಾಕಾರರಲ್ಲಿ ಒಬ್ಬರಾದ, ಓಹಿಯೋದ ಡೆಲವೇರ್ ಕೌಂಟಿಯಿಂದ ನಿವೃತ್ತರಾದ 66 ವರ್ಷದ ರೋಜರ್ ಬ್ರೂಮ್, “ತಾವು ರೇಗನ್ ರಿಪಬ್ಲಿಕನ್ ಆಗಿದ್ದೆ. ಆದರೆ, ಟ್ರಂಪ್ ಅವರಿಂದ ದೂರವಾಗಿದ್ದೇನೆ” ಎಂದು ಹೇಳಿದರು. “ಅವರು (ಟ್ರಂಪ್) ಈ ದೇಶವನ್ನು ಹರಿದು ಹಾಕುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇದು ಕುಂದುಕೊರತೆಗಳ ಆಡಳಿತ

ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ, ಪ್ರತಿಭಟನಾಕಾರರು “ಒಲಿಗಾರ್ಕಿ ವಿರುದ್ಧ ಹೋರಾಡಿ” ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು. ಪೋರ್ಟ್ಲ್ಯಾಂಡ್, ಒರೆಗಾನ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಅಲ್ಲಿ ಅವರು ಪರ್ಶಿಂಗ್ ಸ್ಕ್ವೇರ್‌ನಿಂದ ಸಿಟಿ ಹಾಲ್‌ಗೆ ಮೆರವಣಿಗೆ ನಡೆಸಿದರು.

ಫೆಡರಲ್ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವುದು, ಸಂಪೂರ್ಣ ಏಜೆನ್ಸಿಗಳನ್ನು ಮುಚ್ಚುವುದು, ಟ್ರಾನ್ಸ್‌ಜೆಂಡರ್ ಜನರಿಗೆ ರಕ್ಷಣೆಯನ್ನು ಕಡಿಮೆ ಮಾಡುವುದು, ಆರೋಗ್ಯ ನಿಧಿಯನ್ನು ಕಡಿತಗೊಳಿಸುವುದು, ಸಾಮಾಜಿಕ ಭದ್ರತಾ ಆಡಳಿತ ಕ್ಷೇತ್ರ ಕಚೇರಿಗಳನ್ನು ಮುಚ್ಚುವುದು ಸೇರಿದಂತೆ ಟ್ರಂಪ್ ಆಡಳಿತದ ನಿರ್ಧಾರವನ್ನು ವಿರೋಧಿಸುವುದು ಪ್ರತಿಭಟನೆಗಳ ಮುಖ್ಯ ಗುರಿಯಾಗಿತ್ತು.

ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಶ್ವೇತಭವನವು, “ಅಧ್ಯಕ್ಷ ಟ್ರಂಪ್ ಅವರ ನಿಲುವು ಸ್ಪಷ್ಟವಾಗಿದೆ; ಅವರು ಯಾವಾಗಲೂ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ, ಮೆಡಿಕೇರ್ ಮತ್ತು ಮೆಡಿಕೈಡ್ ಅನ್ನು ರಕ್ಷಿಸುತ್ತಾರೆ” ಎಂದು ಹೇಳಿದೆ.

“ಈ ಮಧ್ಯೆ, ಡೆಮೋಕ್ರಾಟ್‌ಗಳ ನಿಲುವು ಅಕ್ರಮ ವಲಸಿಗರಿಗೆ ಸಾಮಾಜಿಕ ಭದ್ರತೆ, ಮೆಡಿಕೈಡ್ ಮತ್ತು ಮೆಡಿಕೇರ್ ಪ್ರಯೋಜನಗಳನ್ನು ನೀಡುತ್ತಿದೆ, ಇದು ಈ ಕಾರ್ಯಕ್ರಮಗಳನ್ನು ದಿವಾಳಿ ಮಾಡುತ್ತದೆ ಮತ್ತು ಅಮೇರಿಕನ್ ಹಿರಿಯ ನಾಗರಿಕರನ್ನು ಹತ್ತಿಕ್ಕುತ್ತದೆ” ಎಂದು ಹೇಳಿಕೆ ನೀಡುತ್ತಾ ಡೆಮೋಕ್ರಾಟ್‌ಗಳನ್ನು ನೇರವಾಗಿ ಟೀಕಿಸಲಾಗಿದೆ.

ಈ ಎಲ್ಲ ಪ್ರತಿಭಟನೆಗಳ ನಡುವೆ ಅಧ್ಯಕ್ಷರು ಟ್ರಂಪ್ ಶನಿವಾರ ಫ್ಲೋರಿಡಾದಲ್ಲಿ ಗಾಲ್ಫ್ ಆಡಿದರು. ಭಾನುವಾರ ಕೂಡ ಮತ್ತೆ ಹಾಗೇ ಮಾಡಲು ಯೋಜಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮೊದಲ ಅವಧಿಯಲ್ಲಿ, ಟ್ರಂಪ್ 2017 ರಲ್ಲಿ ಮಹಿಳಾ ಮಾರ್ಚ್‌ನೊಂದಿಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿದರು. ಇದು ಸಾವಿರಾರು ಮಹಿಳೆಯರನ್ನು ವಾಷಿಂಗ್ಟನ್‌ಗೆ ಕರೆತಂದಿತು. 2020 ರಲ್ಲಿ ಮಿನ್ನಿಯಾಪೋಲಿಸ್‌ನಲ್ಲಿ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕೊಂದ ನಂತರ ನಡೆದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ರದರ್ಶನಗಳು ಸಹ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಎದುರಿಸಿದ ಪ್ರಮುಖ ವಿರೋಧಗಳಲ್ಲಿ ಸೇರಿವೆ.

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...