Homeಅಂತರಾಷ್ಟ್ರೀಯಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ 'ಹ್ಯಾಂಡ್ಸ್ ಆಫ್' ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು.

ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ ವರದಿಗಳಿಲ್ಲದೆ ರ್‍ಯಾಲಿಗಳು ಶಾಂತಿಯುತವಾಗಿ ನಡೆಯುತ್ತಿವೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಿಂದ ಅಲಾಸ್ಕಾದ ಆಂಕಾರೇಜ್‌ವರೆಗೆ ಪ್ರತಿಭಟನಾಕಾರರು ಜಮಾಯಿಸಿದರು. ಸರ್ಕಾರದ ಉದ್ಯೋಗ ಕಡಿತ, ಆರ್ಥಿಕತೆ, ವಲಸೆ ಮತ್ತು ಮಾನವ ಹಕ್ಕುಗಳ ಕುರಿತು ಟ್ರಂಪ್ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರ ಕ್ರಮಗಳನ್ನು ಟೀಕಿಸುತ್ತಾ ಅನೇಕ ರಾಜ್ಯ ರಾಜಧಾನಿಗಳಲ್ಲಿ ಸೇರಿದಂತೆ ಪ್ರತಿಭಟನಾಕಾರರು ಜಮಾಯಿಸಿದರು.

ಪ್ರತಿಭಟನಾಕಾರರಲ್ಲಿ ಒಬ್ಬರಾದ, ಓಹಿಯೋದ ಡೆಲವೇರ್ ಕೌಂಟಿಯಿಂದ ನಿವೃತ್ತರಾದ 66 ವರ್ಷದ ರೋಜರ್ ಬ್ರೂಮ್, “ತಾವು ರೇಗನ್ ರಿಪಬ್ಲಿಕನ್ ಆಗಿದ್ದೆ. ಆದರೆ, ಟ್ರಂಪ್ ಅವರಿಂದ ದೂರವಾಗಿದ್ದೇನೆ” ಎಂದು ಹೇಳಿದರು. “ಅವರು (ಟ್ರಂಪ್) ಈ ದೇಶವನ್ನು ಹರಿದು ಹಾಕುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇದು ಕುಂದುಕೊರತೆಗಳ ಆಡಳಿತ

ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ, ಪ್ರತಿಭಟನಾಕಾರರು “ಒಲಿಗಾರ್ಕಿ ವಿರುದ್ಧ ಹೋರಾಡಿ” ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು. ಪೋರ್ಟ್ಲ್ಯಾಂಡ್, ಒರೆಗಾನ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಅಲ್ಲಿ ಅವರು ಪರ್ಶಿಂಗ್ ಸ್ಕ್ವೇರ್‌ನಿಂದ ಸಿಟಿ ಹಾಲ್‌ಗೆ ಮೆರವಣಿಗೆ ನಡೆಸಿದರು.

ಫೆಡರಲ್ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವುದು, ಸಂಪೂರ್ಣ ಏಜೆನ್ಸಿಗಳನ್ನು ಮುಚ್ಚುವುದು, ಟ್ರಾನ್ಸ್‌ಜೆಂಡರ್ ಜನರಿಗೆ ರಕ್ಷಣೆಯನ್ನು ಕಡಿಮೆ ಮಾಡುವುದು, ಆರೋಗ್ಯ ನಿಧಿಯನ್ನು ಕಡಿತಗೊಳಿಸುವುದು, ಸಾಮಾಜಿಕ ಭದ್ರತಾ ಆಡಳಿತ ಕ್ಷೇತ್ರ ಕಚೇರಿಗಳನ್ನು ಮುಚ್ಚುವುದು ಸೇರಿದಂತೆ ಟ್ರಂಪ್ ಆಡಳಿತದ ನಿರ್ಧಾರವನ್ನು ವಿರೋಧಿಸುವುದು ಪ್ರತಿಭಟನೆಗಳ ಮುಖ್ಯ ಗುರಿಯಾಗಿತ್ತು.

ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಶ್ವೇತಭವನವು, “ಅಧ್ಯಕ್ಷ ಟ್ರಂಪ್ ಅವರ ನಿಲುವು ಸ್ಪಷ್ಟವಾಗಿದೆ; ಅವರು ಯಾವಾಗಲೂ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ, ಮೆಡಿಕೇರ್ ಮತ್ತು ಮೆಡಿಕೈಡ್ ಅನ್ನು ರಕ್ಷಿಸುತ್ತಾರೆ” ಎಂದು ಹೇಳಿದೆ.

“ಈ ಮಧ್ಯೆ, ಡೆಮೋಕ್ರಾಟ್‌ಗಳ ನಿಲುವು ಅಕ್ರಮ ವಲಸಿಗರಿಗೆ ಸಾಮಾಜಿಕ ಭದ್ರತೆ, ಮೆಡಿಕೈಡ್ ಮತ್ತು ಮೆಡಿಕೇರ್ ಪ್ರಯೋಜನಗಳನ್ನು ನೀಡುತ್ತಿದೆ, ಇದು ಈ ಕಾರ್ಯಕ್ರಮಗಳನ್ನು ದಿವಾಳಿ ಮಾಡುತ್ತದೆ ಮತ್ತು ಅಮೇರಿಕನ್ ಹಿರಿಯ ನಾಗರಿಕರನ್ನು ಹತ್ತಿಕ್ಕುತ್ತದೆ” ಎಂದು ಹೇಳಿಕೆ ನೀಡುತ್ತಾ ಡೆಮೋಕ್ರಾಟ್‌ಗಳನ್ನು ನೇರವಾಗಿ ಟೀಕಿಸಲಾಗಿದೆ.

ಈ ಎಲ್ಲ ಪ್ರತಿಭಟನೆಗಳ ನಡುವೆ ಅಧ್ಯಕ್ಷರು ಟ್ರಂಪ್ ಶನಿವಾರ ಫ್ಲೋರಿಡಾದಲ್ಲಿ ಗಾಲ್ಫ್ ಆಡಿದರು. ಭಾನುವಾರ ಕೂಡ ಮತ್ತೆ ಹಾಗೇ ಮಾಡಲು ಯೋಜಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮೊದಲ ಅವಧಿಯಲ್ಲಿ, ಟ್ರಂಪ್ 2017 ರಲ್ಲಿ ಮಹಿಳಾ ಮಾರ್ಚ್‌ನೊಂದಿಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿದರು. ಇದು ಸಾವಿರಾರು ಮಹಿಳೆಯರನ್ನು ವಾಷಿಂಗ್ಟನ್‌ಗೆ ಕರೆತಂದಿತು. 2020 ರಲ್ಲಿ ಮಿನ್ನಿಯಾಪೋಲಿಸ್‌ನಲ್ಲಿ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕೊಂದ ನಂತರ ನಡೆದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ರದರ್ಶನಗಳು ಸಹ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಎದುರಿಸಿದ ಪ್ರಮುಖ ವಿರೋಧಗಳಲ್ಲಿ ಸೇರಿವೆ.

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...