Homeಅಂತರಾಷ್ಟ್ರೀಯಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ 'ಹ್ಯಾಂಡ್ಸ್ ಆಫ್' ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು.

ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ ವರದಿಗಳಿಲ್ಲದೆ ರ್‍ಯಾಲಿಗಳು ಶಾಂತಿಯುತವಾಗಿ ನಡೆಯುತ್ತಿವೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಿಂದ ಅಲಾಸ್ಕಾದ ಆಂಕಾರೇಜ್‌ವರೆಗೆ ಪ್ರತಿಭಟನಾಕಾರರು ಜಮಾಯಿಸಿದರು. ಸರ್ಕಾರದ ಉದ್ಯೋಗ ಕಡಿತ, ಆರ್ಥಿಕತೆ, ವಲಸೆ ಮತ್ತು ಮಾನವ ಹಕ್ಕುಗಳ ಕುರಿತು ಟ್ರಂಪ್ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರ ಕ್ರಮಗಳನ್ನು ಟೀಕಿಸುತ್ತಾ ಅನೇಕ ರಾಜ್ಯ ರಾಜಧಾನಿಗಳಲ್ಲಿ ಸೇರಿದಂತೆ ಪ್ರತಿಭಟನಾಕಾರರು ಜಮಾಯಿಸಿದರು.

ಪ್ರತಿಭಟನಾಕಾರರಲ್ಲಿ ಒಬ್ಬರಾದ, ಓಹಿಯೋದ ಡೆಲವೇರ್ ಕೌಂಟಿಯಿಂದ ನಿವೃತ್ತರಾದ 66 ವರ್ಷದ ರೋಜರ್ ಬ್ರೂಮ್, “ತಾವು ರೇಗನ್ ರಿಪಬ್ಲಿಕನ್ ಆಗಿದ್ದೆ. ಆದರೆ, ಟ್ರಂಪ್ ಅವರಿಂದ ದೂರವಾಗಿದ್ದೇನೆ” ಎಂದು ಹೇಳಿದರು. “ಅವರು (ಟ್ರಂಪ್) ಈ ದೇಶವನ್ನು ಹರಿದು ಹಾಕುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇದು ಕುಂದುಕೊರತೆಗಳ ಆಡಳಿತ

ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ, ಪ್ರತಿಭಟನಾಕಾರರು “ಒಲಿಗಾರ್ಕಿ ವಿರುದ್ಧ ಹೋರಾಡಿ” ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು. ಪೋರ್ಟ್ಲ್ಯಾಂಡ್, ಒರೆಗಾನ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಅಲ್ಲಿ ಅವರು ಪರ್ಶಿಂಗ್ ಸ್ಕ್ವೇರ್‌ನಿಂದ ಸಿಟಿ ಹಾಲ್‌ಗೆ ಮೆರವಣಿಗೆ ನಡೆಸಿದರು.

ಫೆಡರಲ್ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವುದು, ಸಂಪೂರ್ಣ ಏಜೆನ್ಸಿಗಳನ್ನು ಮುಚ್ಚುವುದು, ಟ್ರಾನ್ಸ್‌ಜೆಂಡರ್ ಜನರಿಗೆ ರಕ್ಷಣೆಯನ್ನು ಕಡಿಮೆ ಮಾಡುವುದು, ಆರೋಗ್ಯ ನಿಧಿಯನ್ನು ಕಡಿತಗೊಳಿಸುವುದು, ಸಾಮಾಜಿಕ ಭದ್ರತಾ ಆಡಳಿತ ಕ್ಷೇತ್ರ ಕಚೇರಿಗಳನ್ನು ಮುಚ್ಚುವುದು ಸೇರಿದಂತೆ ಟ್ರಂಪ್ ಆಡಳಿತದ ನಿರ್ಧಾರವನ್ನು ವಿರೋಧಿಸುವುದು ಪ್ರತಿಭಟನೆಗಳ ಮುಖ್ಯ ಗುರಿಯಾಗಿತ್ತು.

ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಶ್ವೇತಭವನವು, “ಅಧ್ಯಕ್ಷ ಟ್ರಂಪ್ ಅವರ ನಿಲುವು ಸ್ಪಷ್ಟವಾಗಿದೆ; ಅವರು ಯಾವಾಗಲೂ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ, ಮೆಡಿಕೇರ್ ಮತ್ತು ಮೆಡಿಕೈಡ್ ಅನ್ನು ರಕ್ಷಿಸುತ್ತಾರೆ” ಎಂದು ಹೇಳಿದೆ.

“ಈ ಮಧ್ಯೆ, ಡೆಮೋಕ್ರಾಟ್‌ಗಳ ನಿಲುವು ಅಕ್ರಮ ವಲಸಿಗರಿಗೆ ಸಾಮಾಜಿಕ ಭದ್ರತೆ, ಮೆಡಿಕೈಡ್ ಮತ್ತು ಮೆಡಿಕೇರ್ ಪ್ರಯೋಜನಗಳನ್ನು ನೀಡುತ್ತಿದೆ, ಇದು ಈ ಕಾರ್ಯಕ್ರಮಗಳನ್ನು ದಿವಾಳಿ ಮಾಡುತ್ತದೆ ಮತ್ತು ಅಮೇರಿಕನ್ ಹಿರಿಯ ನಾಗರಿಕರನ್ನು ಹತ್ತಿಕ್ಕುತ್ತದೆ” ಎಂದು ಹೇಳಿಕೆ ನೀಡುತ್ತಾ ಡೆಮೋಕ್ರಾಟ್‌ಗಳನ್ನು ನೇರವಾಗಿ ಟೀಕಿಸಲಾಗಿದೆ.

ಈ ಎಲ್ಲ ಪ್ರತಿಭಟನೆಗಳ ನಡುವೆ ಅಧ್ಯಕ್ಷರು ಟ್ರಂಪ್ ಶನಿವಾರ ಫ್ಲೋರಿಡಾದಲ್ಲಿ ಗಾಲ್ಫ್ ಆಡಿದರು. ಭಾನುವಾರ ಕೂಡ ಮತ್ತೆ ಹಾಗೇ ಮಾಡಲು ಯೋಜಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮೊದಲ ಅವಧಿಯಲ್ಲಿ, ಟ್ರಂಪ್ 2017 ರಲ್ಲಿ ಮಹಿಳಾ ಮಾರ್ಚ್‌ನೊಂದಿಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿದರು. ಇದು ಸಾವಿರಾರು ಮಹಿಳೆಯರನ್ನು ವಾಷಿಂಗ್ಟನ್‌ಗೆ ಕರೆತಂದಿತು. 2020 ರಲ್ಲಿ ಮಿನ್ನಿಯಾಪೋಲಿಸ್‌ನಲ್ಲಿ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕೊಂದ ನಂತರ ನಡೆದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ರದರ್ಶನಗಳು ಸಹ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಎದುರಿಸಿದ ಪ್ರಮುಖ ವಿರೋಧಗಳಲ್ಲಿ ಸೇರಿವೆ.

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...