Homeಅಂತರಾಷ್ಟ್ರೀಯಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ 'ಹ್ಯಾಂಡ್ಸ್ ಆಫ್' ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು.

ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ ವರದಿಗಳಿಲ್ಲದೆ ರ್‍ಯಾಲಿಗಳು ಶಾಂತಿಯುತವಾಗಿ ನಡೆಯುತ್ತಿವೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಿಂದ ಅಲಾಸ್ಕಾದ ಆಂಕಾರೇಜ್‌ವರೆಗೆ ಪ್ರತಿಭಟನಾಕಾರರು ಜಮಾಯಿಸಿದರು. ಸರ್ಕಾರದ ಉದ್ಯೋಗ ಕಡಿತ, ಆರ್ಥಿಕತೆ, ವಲಸೆ ಮತ್ತು ಮಾನವ ಹಕ್ಕುಗಳ ಕುರಿತು ಟ್ರಂಪ್ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರ ಕ್ರಮಗಳನ್ನು ಟೀಕಿಸುತ್ತಾ ಅನೇಕ ರಾಜ್ಯ ರಾಜಧಾನಿಗಳಲ್ಲಿ ಸೇರಿದಂತೆ ಪ್ರತಿಭಟನಾಕಾರರು ಜಮಾಯಿಸಿದರು.

ಪ್ರತಿಭಟನಾಕಾರರಲ್ಲಿ ಒಬ್ಬರಾದ, ಓಹಿಯೋದ ಡೆಲವೇರ್ ಕೌಂಟಿಯಿಂದ ನಿವೃತ್ತರಾದ 66 ವರ್ಷದ ರೋಜರ್ ಬ್ರೂಮ್, “ತಾವು ರೇಗನ್ ರಿಪಬ್ಲಿಕನ್ ಆಗಿದ್ದೆ. ಆದರೆ, ಟ್ರಂಪ್ ಅವರಿಂದ ದೂರವಾಗಿದ್ದೇನೆ” ಎಂದು ಹೇಳಿದರು. “ಅವರು (ಟ್ರಂಪ್) ಈ ದೇಶವನ್ನು ಹರಿದು ಹಾಕುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇದು ಕುಂದುಕೊರತೆಗಳ ಆಡಳಿತ

ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ, ಪ್ರತಿಭಟನಾಕಾರರು “ಒಲಿಗಾರ್ಕಿ ವಿರುದ್ಧ ಹೋರಾಡಿ” ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು. ಪೋರ್ಟ್ಲ್ಯಾಂಡ್, ಒರೆಗಾನ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಅಲ್ಲಿ ಅವರು ಪರ್ಶಿಂಗ್ ಸ್ಕ್ವೇರ್‌ನಿಂದ ಸಿಟಿ ಹಾಲ್‌ಗೆ ಮೆರವಣಿಗೆ ನಡೆಸಿದರು.

ಫೆಡರಲ್ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವುದು, ಸಂಪೂರ್ಣ ಏಜೆನ್ಸಿಗಳನ್ನು ಮುಚ್ಚುವುದು, ಟ್ರಾನ್ಸ್‌ಜೆಂಡರ್ ಜನರಿಗೆ ರಕ್ಷಣೆಯನ್ನು ಕಡಿಮೆ ಮಾಡುವುದು, ಆರೋಗ್ಯ ನಿಧಿಯನ್ನು ಕಡಿತಗೊಳಿಸುವುದು, ಸಾಮಾಜಿಕ ಭದ್ರತಾ ಆಡಳಿತ ಕ್ಷೇತ್ರ ಕಚೇರಿಗಳನ್ನು ಮುಚ್ಚುವುದು ಸೇರಿದಂತೆ ಟ್ರಂಪ್ ಆಡಳಿತದ ನಿರ್ಧಾರವನ್ನು ವಿರೋಧಿಸುವುದು ಪ್ರತಿಭಟನೆಗಳ ಮುಖ್ಯ ಗುರಿಯಾಗಿತ್ತು.

ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಶ್ವೇತಭವನವು, “ಅಧ್ಯಕ್ಷ ಟ್ರಂಪ್ ಅವರ ನಿಲುವು ಸ್ಪಷ್ಟವಾಗಿದೆ; ಅವರು ಯಾವಾಗಲೂ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ, ಮೆಡಿಕೇರ್ ಮತ್ತು ಮೆಡಿಕೈಡ್ ಅನ್ನು ರಕ್ಷಿಸುತ್ತಾರೆ” ಎಂದು ಹೇಳಿದೆ.

“ಈ ಮಧ್ಯೆ, ಡೆಮೋಕ್ರಾಟ್‌ಗಳ ನಿಲುವು ಅಕ್ರಮ ವಲಸಿಗರಿಗೆ ಸಾಮಾಜಿಕ ಭದ್ರತೆ, ಮೆಡಿಕೈಡ್ ಮತ್ತು ಮೆಡಿಕೇರ್ ಪ್ರಯೋಜನಗಳನ್ನು ನೀಡುತ್ತಿದೆ, ಇದು ಈ ಕಾರ್ಯಕ್ರಮಗಳನ್ನು ದಿವಾಳಿ ಮಾಡುತ್ತದೆ ಮತ್ತು ಅಮೇರಿಕನ್ ಹಿರಿಯ ನಾಗರಿಕರನ್ನು ಹತ್ತಿಕ್ಕುತ್ತದೆ” ಎಂದು ಹೇಳಿಕೆ ನೀಡುತ್ತಾ ಡೆಮೋಕ್ರಾಟ್‌ಗಳನ್ನು ನೇರವಾಗಿ ಟೀಕಿಸಲಾಗಿದೆ.

ಈ ಎಲ್ಲ ಪ್ರತಿಭಟನೆಗಳ ನಡುವೆ ಅಧ್ಯಕ್ಷರು ಟ್ರಂಪ್ ಶನಿವಾರ ಫ್ಲೋರಿಡಾದಲ್ಲಿ ಗಾಲ್ಫ್ ಆಡಿದರು. ಭಾನುವಾರ ಕೂಡ ಮತ್ತೆ ಹಾಗೇ ಮಾಡಲು ಯೋಜಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮೊದಲ ಅವಧಿಯಲ್ಲಿ, ಟ್ರಂಪ್ 2017 ರಲ್ಲಿ ಮಹಿಳಾ ಮಾರ್ಚ್‌ನೊಂದಿಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿದರು. ಇದು ಸಾವಿರಾರು ಮಹಿಳೆಯರನ್ನು ವಾಷಿಂಗ್ಟನ್‌ಗೆ ಕರೆತಂದಿತು. 2020 ರಲ್ಲಿ ಮಿನ್ನಿಯಾಪೋಲಿಸ್‌ನಲ್ಲಿ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕೊಂದ ನಂತರ ನಡೆದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ರದರ್ಶನಗಳು ಸಹ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಎದುರಿಸಿದ ಪ್ರಮುಖ ವಿರೋಧಗಳಲ್ಲಿ ಸೇರಿವೆ.

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...