Homeಅಂತರಾಷ್ಟ್ರೀಯಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ 'ಹ್ಯಾಂಡ್ಸ್ ಆಫ್' ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

- Advertisement -
- Advertisement -

ಅಮೆರಿಕದ ಹಲವಾರು ನಗರಗಳಲ್ಲಿ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಎಲಾನ್ ಮಸ್ಕ್ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ರ್‍ಯಾಲಿ ನಡೆಸಿದರು.

ಟ್ರಂಪ್ ದೇಶವನ್ನು ನಡೆಸುತ್ತಿರುವ ರೀತಿ ವಿರೋಧಿಸಿ ಜನರು ಗುಂಪುಗೂಡಿದ್ದಾರೆ. ‘ಹ್ಯಾಂಡ್ಸ್ ಆಫ್’ ಚಳವಳಿಯನ್ನು ಅಮೆರಿಕದ 50 ರಾಜ್ಯಗಳಲ್ಲಿ 1,200 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಾಗರಿಕ ಹಕ್ಕುಗಳ ಸಂಘಟನೆಗಳು, ಕಾರ್ಮಿಕ ಸಂಘಗಳು, ಎಲ್‌ಜಿಬಿಟಿಕ್ಯೂ+, ವಕೀಲರು, ಚುನಾವಣಾ ಕಾರ್ಯಕರ್ತರು ಸೇರಿದಂತೆ 150 ಕ್ಕೂ ಹೆಚ್ಚು ಗುಂಪುಗಳು ಆಯೋಜಿಸಿದ್ದವು. ಇಲ್ಲಿಯವರೆಗೆ ಯಾವುದೇ ಬಂಧನಗಳ ವರದಿಗಳಿಲ್ಲದೆ ರ್‍ಯಾಲಿಗಳು ಶಾಂತಿಯುತವಾಗಿ ನಡೆಯುತ್ತಿವೆ.

ಮಿಡ್‌ಟೌನ್ ಮ್ಯಾನ್‌ಹ್ಯಾಟನ್‌ನಿಂದ ಅಲಾಸ್ಕಾದ ಆಂಕಾರೇಜ್‌ವರೆಗೆ ಪ್ರತಿಭಟನಾಕಾರರು ಜಮಾಯಿಸಿದರು. ಸರ್ಕಾರದ ಉದ್ಯೋಗ ಕಡಿತ, ಆರ್ಥಿಕತೆ, ವಲಸೆ ಮತ್ತು ಮಾನವ ಹಕ್ಕುಗಳ ಕುರಿತು ಟ್ರಂಪ್ ಮತ್ತು ಬಿಲಿಯನೇರ್ ಎಲಾನ್ ಮಸ್ಕ್ ಅವರ ಕ್ರಮಗಳನ್ನು ಟೀಕಿಸುತ್ತಾ ಅನೇಕ ರಾಜ್ಯ ರಾಜಧಾನಿಗಳಲ್ಲಿ ಸೇರಿದಂತೆ ಪ್ರತಿಭಟನಾಕಾರರು ಜಮಾಯಿಸಿದರು.

ಪ್ರತಿಭಟನಾಕಾರರಲ್ಲಿ ಒಬ್ಬರಾದ, ಓಹಿಯೋದ ಡೆಲವೇರ್ ಕೌಂಟಿಯಿಂದ ನಿವೃತ್ತರಾದ 66 ವರ್ಷದ ರೋಜರ್ ಬ್ರೂಮ್, “ತಾವು ರೇಗನ್ ರಿಪಬ್ಲಿಕನ್ ಆಗಿದ್ದೆ. ಆದರೆ, ಟ್ರಂಪ್ ಅವರಿಂದ ದೂರವಾಗಿದ್ದೇನೆ” ಎಂದು ಹೇಳಿದರು. “ಅವರು (ಟ್ರಂಪ್) ಈ ದೇಶವನ್ನು ಹರಿದು ಹಾಕುತ್ತಿದ್ದಾರೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಇದು ಕುಂದುಕೊರತೆಗಳ ಆಡಳಿತ

ಅಮೆರಿಕದ ಪಶ್ಚಿಮ ಕರಾವಳಿಯಲ್ಲಿ, ಪ್ರತಿಭಟನಾಕಾರರು “ಒಲಿಗಾರ್ಕಿ ವಿರುದ್ಧ ಹೋರಾಡಿ” ಎಂಬ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು. ಪೋರ್ಟ್ಲ್ಯಾಂಡ್, ಒರೆಗಾನ್ ಮತ್ತು ಲಾಸ್ ಏಂಜಲೀಸ್ ಸೇರಿದಂತೆ ಅಮೆರಿಕದ ನಗರಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದು, ಅಲ್ಲಿ ಅವರು ಪರ್ಶಿಂಗ್ ಸ್ಕ್ವೇರ್‌ನಿಂದ ಸಿಟಿ ಹಾಲ್‌ಗೆ ಮೆರವಣಿಗೆ ನಡೆಸಿದರು.

ಫೆಡರಲ್ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವುದು, ಸಂಪೂರ್ಣ ಏಜೆನ್ಸಿಗಳನ್ನು ಮುಚ್ಚುವುದು, ಟ್ರಾನ್ಸ್‌ಜೆಂಡರ್ ಜನರಿಗೆ ರಕ್ಷಣೆಯನ್ನು ಕಡಿಮೆ ಮಾಡುವುದು, ಆರೋಗ್ಯ ನಿಧಿಯನ್ನು ಕಡಿತಗೊಳಿಸುವುದು, ಸಾಮಾಜಿಕ ಭದ್ರತಾ ಆಡಳಿತ ಕ್ಷೇತ್ರ ಕಚೇರಿಗಳನ್ನು ಮುಚ್ಚುವುದು ಸೇರಿದಂತೆ ಟ್ರಂಪ್ ಆಡಳಿತದ ನಿರ್ಧಾರವನ್ನು ವಿರೋಧಿಸುವುದು ಪ್ರತಿಭಟನೆಗಳ ಮುಖ್ಯ ಗುರಿಯಾಗಿತ್ತು.

ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಶ್ವೇತಭವನವು, “ಅಧ್ಯಕ್ಷ ಟ್ರಂಪ್ ಅವರ ನಿಲುವು ಸ್ಪಷ್ಟವಾಗಿದೆ; ಅವರು ಯಾವಾಗಲೂ ಅರ್ಹ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ, ಮೆಡಿಕೇರ್ ಮತ್ತು ಮೆಡಿಕೈಡ್ ಅನ್ನು ರಕ್ಷಿಸುತ್ತಾರೆ” ಎಂದು ಹೇಳಿದೆ.

“ಈ ಮಧ್ಯೆ, ಡೆಮೋಕ್ರಾಟ್‌ಗಳ ನಿಲುವು ಅಕ್ರಮ ವಲಸಿಗರಿಗೆ ಸಾಮಾಜಿಕ ಭದ್ರತೆ, ಮೆಡಿಕೈಡ್ ಮತ್ತು ಮೆಡಿಕೇರ್ ಪ್ರಯೋಜನಗಳನ್ನು ನೀಡುತ್ತಿದೆ, ಇದು ಈ ಕಾರ್ಯಕ್ರಮಗಳನ್ನು ದಿವಾಳಿ ಮಾಡುತ್ತದೆ ಮತ್ತು ಅಮೇರಿಕನ್ ಹಿರಿಯ ನಾಗರಿಕರನ್ನು ಹತ್ತಿಕ್ಕುತ್ತದೆ” ಎಂದು ಹೇಳಿಕೆ ನೀಡುತ್ತಾ ಡೆಮೋಕ್ರಾಟ್‌ಗಳನ್ನು ನೇರವಾಗಿ ಟೀಕಿಸಲಾಗಿದೆ.

ಈ ಎಲ್ಲ ಪ್ರತಿಭಟನೆಗಳ ನಡುವೆ ಅಧ್ಯಕ್ಷರು ಟ್ರಂಪ್ ಶನಿವಾರ ಫ್ಲೋರಿಡಾದಲ್ಲಿ ಗಾಲ್ಫ್ ಆಡಿದರು. ಭಾನುವಾರ ಕೂಡ ಮತ್ತೆ ಹಾಗೇ ಮಾಡಲು ಯೋಜಿಸಿದ್ದಾರೆ ಎಂದು ಶ್ವೇತಭವನ ಹೇಳಿದೆ.

ಮೊದಲ ಅವಧಿಯಲ್ಲಿ, ಟ್ರಂಪ್ 2017 ರಲ್ಲಿ ಮಹಿಳಾ ಮಾರ್ಚ್‌ನೊಂದಿಗೆ ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿದರು. ಇದು ಸಾವಿರಾರು ಮಹಿಳೆಯರನ್ನು ವಾಷಿಂಗ್ಟನ್‌ಗೆ ಕರೆತಂದಿತು. 2020 ರಲ್ಲಿ ಮಿನ್ನಿಯಾಪೋಲಿಸ್‌ನಲ್ಲಿ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕೊಂದ ನಂತರ ನಡೆದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಪ್ರದರ್ಶನಗಳು ಸಹ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಎದುರಿಸಿದ ಪ್ರಮುಖ ವಿರೋಧಗಳಲ್ಲಿ ಸೇರಿವೆ.

ಭಾರತದ ಉತ್ಪನ್ನಗಳ ಮೇಲೆ ಶೇ. 26ರಷ್ಟು ಪ್ರತಿ ಸುಂಕ ವಿಧಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...