Homeಮುಖಪುಟಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

- Advertisement -
- Advertisement -

ಬಿಡಿ ಬಿಡಿಯಾಗಿ ಅಮೆರಿಕದ ಜನಪ್ರತಿನಿಧಿಗಳು ರೈತ ಪ್ರತಿಭಟನೆಯ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಟೀಕಿಸಿದ್ದಾರೆ. ಅಮೆರಿಕ ಆಡಳಿತ ಕೂಡ ಶಾಂತಿಯುತ ಪ್ರತಿಭಟನೆ ಬೆಂಬಲಿಸಿದೆ, ಅದರೆ ಅದು ’ಮಾರುಕಟ್ಟೆ’ ದೃಷ್ಟಿಯಿಂದ ಕೃಷಿ ಕಾನೂನುಗಳ ಪರವಿದೆ!

ಸರ್ವಾಧಿಕಾರಿಯ ಪಡಿಯಚ್ಚಿನಂತಿದ್ದ ಡೊನಾಲ್ಡ್ ಟ್ರಂಪ್ ಮನೆಗೆ ಹೋಗಿದ್ದಾರೆ. ಉದಾರವಾದಿ ನಿಲುವಿನ, ಸಾಪೇಕ್ಷವಾಗಿ ಹೆಚ್ಚು ಪ್ರಜಾಪ್ರಭುತ್ವವಾದಿಯಾಗಿರುವ ಡೆಮಾಕ್ರಟ್ಸ್ ಅಧಿಕಾರಕ್ಕೆ ಬಂದಿದ್ದಾರೆ. ಇಷ್ಟಾದರೆ ಒಟ್ಟೂ ಅಮೆರಿಕ ಆಡಳಿತದ ನಿಲುವಿನಲ್ಲಿ ಏನಾದರೂ ಬದಲಾವಣೆ ಆಗಬಹುದೇ ಎಂಬ ನಿರೀಕ್ಷೆಗಳಿರುವುದು ಸಹಜ. ಆದರೆ ಅದನ್ನು ಈಗಲೇ ನಿರ್ಧರಿಸಲಾಗದು.

ಭಾರತದ ರೈತ ಹೋರಾಟ ಕುರಿತಂತೆ ಅಲ್ಲಿನ ಅನೇಕ ಚುನಾಯಿತ ಜನಪ್ರತಿನಿಧಿಗಳು ಬೆಂಬಲ ಸೂಚಿಸಿದ್ದಾರೆ. ಆದರೆ ಅಮೆರಿಕ ಆಡಳಿತದ ನಿಲುವುಗಳಲ್ಲಿ ದ್ವಂದ್ವ ಇದೆ ಎಂಬುದಕ್ಕೆ ಮತ್ತು ಅದು ಉದ್ದೇಶಿತ ದ್ವಂದ್ವ ಎಂಬುದಕ್ಕೆ ಸ್ಟೇಟ್ ಡಿಪಾರ್ಟಮೆಂಟ್ ವಕ್ತಾರರ ಅಭಿಪ್ರಾಯಗಳೇ ಸಾಕು.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ಶಾಂತಿಯುತ ಪ್ರತಿಭಟನೆಗಳು, ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ಗುರುತಿಸಿದ ಅಮೆರಿಕ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಬುಧವಾರ ಹೇಳಿದೆ.

ಅಂದರೆ, ಅವರ ಬಂಡವಾಳಶಾಹಿಗಳಿಗೆ ಇಲ್ಲಿನ ಮಾರುಕಟ್ಟೆ ಒದಗಿಸುವ ತುಡಿತವೂ ಇದೆ, ಶಂತಿಯುತ ಪ್ರತಿಬಟನೆಗಳು ಡೆಮಾಕ್ರಸಿಯ ಲಕ್ಷಣ ಎಂಬ ಭಾವವೂ ಇದೆ.

“ಸಾಮಾನ್ಯವಾಗಿ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಅಮೆರಿಕ ಸ್ವಾಗತಿಸುತ್ತದೆ” ಎಂದು ವಕ್ತಾರ ಸ್ಟೀವನ್ಸ್ ಹೇಳಿದ್ದಾರೆ. ಹೊಸ ಕಾಯ್ದೆಗಳು ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತವೆ ಮತ್ತು ರೈತರಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶವನ್ನು ಒದಗಿಸುತ್ತವೆ ಎಂದು ಭಾರತ ಸರ್ಕಾರ ’ಬಿಂಬಿಸುತ್ತಿರುವ’ ವಿದ್ಯಮಾನವನ್ನು ಅಮೆರಿಕ ವಾಸ್ತವ ಎಂದು ಒಪ್ಪಿಕೊಂಡಿದೆ. ಇದು ಏನನ್ನು ಸೂಚಿಸುತ್ತದೆ? ಹೊಸ ಬಿಡೆನ್ ಆಡಳಿತವು ಕೃಷಿ ವಲಯವನ್ನು ಸುಧಾರಿಸುವ ಭಾರತ ಸರ್ಕಾರದ ಕ್ರಮವನ್ನು ಬೆಂಬಲಿಸುತ್ತದೆ ಎಂಬುದನ್ನೇ ಅಲ್ಲವೇ?

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟೇಟ್ಸ್ ಡಿಪಾರ್ಟ್‌ಮೆಂಟ್ ವಕ್ತಾರ, ಪಕ್ಷಗಳ (ಸರ್ಕಾರ ಮತ್ತು ರೈತ ಸಂಘಟನೆಗಳು) ನಡುವಿನ ಯಾವುದೇ ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಬೇಕೆಂದು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಈಗ ಪ್ರತಿಭಟನೆಯ ಸುತ್ತ ಭದ್ರಕೋಟೆ ಕಟ್ಟಿ, ನೀರು-ವಿದ್ಯುತ್-ಇಂಟರ್‌ನೆಟ್ ಸ್ತಗಿತಗೊಳಿಸಿದ ಮೇಲೂ ಭಾರತ ಸರ್ಕಾರ ’ಮಾತುಕತೆ’ ಬಗ್ಗೆ ಮಾತಾಡುತ್ತಲೇ ಇದೆಯಲ್ಲವೆ?

“ಶಾಂತಿಯುತ ಪ್ರತಿಭಟನೆಗಳು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವೆಂದು ನಾವು ಗುರುತಿಸುತ್ತೇವೆ ಮತ್ತು ಭಾರತೀಯ ಸುಪ್ರೀಂ ಕೋರ್ಟ್ ಇದನ್ನೇ ಹೇಳಿದೆ ಎಂದು ಗಮನಿಸಿ” ಎಂದು ವಕ್ತಾರರು ಹೇಳಿದ್ದಾರೆ.

ಏತನ್ಮಧ್ಯೆ, ಹಲವಾರು ಅಮೆರಿಕದ ಶಾಸಕರು (ಅಲ್ಲಿನ ಚುನಾಯಿತ ಜನಪ್ರತಿನಿಧಿಗಳು), ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. “ಭಾರತದಲ್ಲಿ ಹೊಸ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸುತ್ತಿರುವ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ವರದಿಯಾದ ಕ್ರಮಗಳಿಂದ ನಾನು ಕಳವಳಗೊಂಡಿದ್ದೇನೆ” ಎಂದು ಕಾಂಗ್ರೆಸ್- ವುಮನ್ ಹ್ಯಾಲೆ ಸ್ಟೀವನ್ಸ್ ಹೇಳಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ನೀಡಿರುವ ಭೂಮಿಯೂ ವಿವಾದದ ಸುಳಿಯಲ್ಲಿ: ಕಾರಣ ಏನು?

ಅವರು ಹೇಳಿಕೆಯಲ್ಲಿ, ನರೇಂದ್ರ ಮೋದಿ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಫಲಪ್ರದ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಪೇಕ್ಷಿಸಿದ್ದಾರೆ.

ನಾನು ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇನೆ. ಈ ವಿಷಯದ ಬಗ್ಗೆ ಜಿಲ್ಲೆಯಾದ್ಯಂತ ಭಾಗಿದಾರರೊಂದಿಗೆ ತೊಡಗಿಸಿಕೊಳ್ಳುವುದು ವಿಶೇಷವಾಗಿ ಮೌಲ್ಯಯುತವಾಗಿದೆ. ಇಂತಹ ಕ್ರಮಗಳಿಗೆ ನನ್ನ ಮೆಚ್ಚುಗೆಯಿದೆ ಎಂದು ಸ್ಟೀವನ್ಸ್ ಹೇಳಿದ್ದಾರೆ.

ಇನ್ನೊಬ್ಬ ಕಾಂಗ್ರೆಸ್-ವುಮನ್ ಇಲ್ಹಾನ್ ಒಮರ್ ಅವರು, ಭಾರತದಾದ್ಯಂತ ತಮ್ಮ ಜೀವನೋಪಾಯಕ್ಕಾಗಿ ಪ್ರತಿಭಟಿಸುತ್ತಿರುವ ಎಲ್ಲ ರೈತರ ಪರ ಐಕ್ಯಮತವನ್ನು ವ್ಯಕ್ತಪಡಿಸಿದ್ದಾರೆ. “ಭಾರತವು ತನ್ನ ಮೂಲಭೂತ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು, ಮಾಹಿತಿಯ ಮುಕ್ತ ಹರಿವನ್ನು ಅನುಮತಿಸಬೇಕು. ಇಂಟರ್ನೆಟ್ ಸೌಲಭ್ಯವನ್ನು ಪುನಃ ಸ್ಥಾಪಿಸಬೇಕು ಮತ್ತು ಪ್ರತಿಭಟನೆಗಳನ್ನು ವರದಿ ಮಾಡಿ ಬಂಧನಕ್ಕೊಳಗಾದ ಎಲ್ಲ ಪತ್ರಕರ್ತರನ್ನು ಬಿಡುಗಡೆ ಮಾಡಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ಯು.ಎಸ್. ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ, ಡೆಮಾಕ್ರಟ್ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ್ದ ಹ್ಯಾಶ್‌ಟ್ಯಾಗ್ #FarmersProtest ಅನ್ನು ಬಳಸಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು” ಎಂದು ಟ್ವೀಟ್ ಮಾಡಿದ್ದರು.

ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿ, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸಂಬಂಧಿ, ವಕೀಲೆ ಮೀನಾ ಹ್ಯಾರಿಸ್, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಆಕ್ರಮಣದಲ್ಲಿದೆ ಎಂದು ಆರೋಪಿಸಿದ್ದಾರೆ.

ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ಒಂದು ತಿಂಗಳ ಹಿಂದಿನಿಂದಲೇ ದಾಳಿ ನಡೆದಿರುವುದು ಕಾಕತಾಳೀಯವಲ್ಲ. ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಹಿಂಸಾಚಾರದಿಂದ ನಾವು ಎಲ್ಲರೂ ಆಕ್ರೋಶಗೊಳ್ಳಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...