Homeಮುಖಪುಟಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

- Advertisement -
- Advertisement -

ಬಿಡಿ ಬಿಡಿಯಾಗಿ ಅಮೆರಿಕದ ಜನಪ್ರತಿನಿಧಿಗಳು ರೈತ ಪ್ರತಿಭಟನೆಯ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಟೀಕಿಸಿದ್ದಾರೆ. ಅಮೆರಿಕ ಆಡಳಿತ ಕೂಡ ಶಾಂತಿಯುತ ಪ್ರತಿಭಟನೆ ಬೆಂಬಲಿಸಿದೆ, ಅದರೆ ಅದು ’ಮಾರುಕಟ್ಟೆ’ ದೃಷ್ಟಿಯಿಂದ ಕೃಷಿ ಕಾನೂನುಗಳ ಪರವಿದೆ!

ಸರ್ವಾಧಿಕಾರಿಯ ಪಡಿಯಚ್ಚಿನಂತಿದ್ದ ಡೊನಾಲ್ಡ್ ಟ್ರಂಪ್ ಮನೆಗೆ ಹೋಗಿದ್ದಾರೆ. ಉದಾರವಾದಿ ನಿಲುವಿನ, ಸಾಪೇಕ್ಷವಾಗಿ ಹೆಚ್ಚು ಪ್ರಜಾಪ್ರಭುತ್ವವಾದಿಯಾಗಿರುವ ಡೆಮಾಕ್ರಟ್ಸ್ ಅಧಿಕಾರಕ್ಕೆ ಬಂದಿದ್ದಾರೆ. ಇಷ್ಟಾದರೆ ಒಟ್ಟೂ ಅಮೆರಿಕ ಆಡಳಿತದ ನಿಲುವಿನಲ್ಲಿ ಏನಾದರೂ ಬದಲಾವಣೆ ಆಗಬಹುದೇ ಎಂಬ ನಿರೀಕ್ಷೆಗಳಿರುವುದು ಸಹಜ. ಆದರೆ ಅದನ್ನು ಈಗಲೇ ನಿರ್ಧರಿಸಲಾಗದು.

ಭಾರತದ ರೈತ ಹೋರಾಟ ಕುರಿತಂತೆ ಅಲ್ಲಿನ ಅನೇಕ ಚುನಾಯಿತ ಜನಪ್ರತಿನಿಧಿಗಳು ಬೆಂಬಲ ಸೂಚಿಸಿದ್ದಾರೆ. ಆದರೆ ಅಮೆರಿಕ ಆಡಳಿತದ ನಿಲುವುಗಳಲ್ಲಿ ದ್ವಂದ್ವ ಇದೆ ಎಂಬುದಕ್ಕೆ ಮತ್ತು ಅದು ಉದ್ದೇಶಿತ ದ್ವಂದ್ವ ಎಂಬುದಕ್ಕೆ ಸ್ಟೇಟ್ ಡಿಪಾರ್ಟಮೆಂಟ್ ವಕ್ತಾರರ ಅಭಿಪ್ರಾಯಗಳೇ ಸಾಕು.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ಶಾಂತಿಯುತ ಪ್ರತಿಭಟನೆಗಳು, ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ಗುರುತಿಸಿದ ಅಮೆರಿಕ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಬುಧವಾರ ಹೇಳಿದೆ.

ಅಂದರೆ, ಅವರ ಬಂಡವಾಳಶಾಹಿಗಳಿಗೆ ಇಲ್ಲಿನ ಮಾರುಕಟ್ಟೆ ಒದಗಿಸುವ ತುಡಿತವೂ ಇದೆ, ಶಂತಿಯುತ ಪ್ರತಿಬಟನೆಗಳು ಡೆಮಾಕ್ರಸಿಯ ಲಕ್ಷಣ ಎಂಬ ಭಾವವೂ ಇದೆ.

“ಸಾಮಾನ್ಯವಾಗಿ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಅಮೆರಿಕ ಸ್ವಾಗತಿಸುತ್ತದೆ” ಎಂದು ವಕ್ತಾರ ಸ್ಟೀವನ್ಸ್ ಹೇಳಿದ್ದಾರೆ. ಹೊಸ ಕಾಯ್ದೆಗಳು ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತವೆ ಮತ್ತು ರೈತರಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶವನ್ನು ಒದಗಿಸುತ್ತವೆ ಎಂದು ಭಾರತ ಸರ್ಕಾರ ’ಬಿಂಬಿಸುತ್ತಿರುವ’ ವಿದ್ಯಮಾನವನ್ನು ಅಮೆರಿಕ ವಾಸ್ತವ ಎಂದು ಒಪ್ಪಿಕೊಂಡಿದೆ. ಇದು ಏನನ್ನು ಸೂಚಿಸುತ್ತದೆ? ಹೊಸ ಬಿಡೆನ್ ಆಡಳಿತವು ಕೃಷಿ ವಲಯವನ್ನು ಸುಧಾರಿಸುವ ಭಾರತ ಸರ್ಕಾರದ ಕ್ರಮವನ್ನು ಬೆಂಬಲಿಸುತ್ತದೆ ಎಂಬುದನ್ನೇ ಅಲ್ಲವೇ?

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟೇಟ್ಸ್ ಡಿಪಾರ್ಟ್‌ಮೆಂಟ್ ವಕ್ತಾರ, ಪಕ್ಷಗಳ (ಸರ್ಕಾರ ಮತ್ತು ರೈತ ಸಂಘಟನೆಗಳು) ನಡುವಿನ ಯಾವುದೇ ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಬೇಕೆಂದು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಈಗ ಪ್ರತಿಭಟನೆಯ ಸುತ್ತ ಭದ್ರಕೋಟೆ ಕಟ್ಟಿ, ನೀರು-ವಿದ್ಯುತ್-ಇಂಟರ್‌ನೆಟ್ ಸ್ತಗಿತಗೊಳಿಸಿದ ಮೇಲೂ ಭಾರತ ಸರ್ಕಾರ ’ಮಾತುಕತೆ’ ಬಗ್ಗೆ ಮಾತಾಡುತ್ತಲೇ ಇದೆಯಲ್ಲವೆ?

“ಶಾಂತಿಯುತ ಪ್ರತಿಭಟನೆಗಳು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವೆಂದು ನಾವು ಗುರುತಿಸುತ್ತೇವೆ ಮತ್ತು ಭಾರತೀಯ ಸುಪ್ರೀಂ ಕೋರ್ಟ್ ಇದನ್ನೇ ಹೇಳಿದೆ ಎಂದು ಗಮನಿಸಿ” ಎಂದು ವಕ್ತಾರರು ಹೇಳಿದ್ದಾರೆ.

ಏತನ್ಮಧ್ಯೆ, ಹಲವಾರು ಅಮೆರಿಕದ ಶಾಸಕರು (ಅಲ್ಲಿನ ಚುನಾಯಿತ ಜನಪ್ರತಿನಿಧಿಗಳು), ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. “ಭಾರತದಲ್ಲಿ ಹೊಸ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸುತ್ತಿರುವ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ವರದಿಯಾದ ಕ್ರಮಗಳಿಂದ ನಾನು ಕಳವಳಗೊಂಡಿದ್ದೇನೆ” ಎಂದು ಕಾಂಗ್ರೆಸ್- ವುಮನ್ ಹ್ಯಾಲೆ ಸ್ಟೀವನ್ಸ್ ಹೇಳಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ನೀಡಿರುವ ಭೂಮಿಯೂ ವಿವಾದದ ಸುಳಿಯಲ್ಲಿ: ಕಾರಣ ಏನು?

ಅವರು ಹೇಳಿಕೆಯಲ್ಲಿ, ನರೇಂದ್ರ ಮೋದಿ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಫಲಪ್ರದ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಪೇಕ್ಷಿಸಿದ್ದಾರೆ.

ನಾನು ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇನೆ. ಈ ವಿಷಯದ ಬಗ್ಗೆ ಜಿಲ್ಲೆಯಾದ್ಯಂತ ಭಾಗಿದಾರರೊಂದಿಗೆ ತೊಡಗಿಸಿಕೊಳ್ಳುವುದು ವಿಶೇಷವಾಗಿ ಮೌಲ್ಯಯುತವಾಗಿದೆ. ಇಂತಹ ಕ್ರಮಗಳಿಗೆ ನನ್ನ ಮೆಚ್ಚುಗೆಯಿದೆ ಎಂದು ಸ್ಟೀವನ್ಸ್ ಹೇಳಿದ್ದಾರೆ.

ಇನ್ನೊಬ್ಬ ಕಾಂಗ್ರೆಸ್-ವುಮನ್ ಇಲ್ಹಾನ್ ಒಮರ್ ಅವರು, ಭಾರತದಾದ್ಯಂತ ತಮ್ಮ ಜೀವನೋಪಾಯಕ್ಕಾಗಿ ಪ್ರತಿಭಟಿಸುತ್ತಿರುವ ಎಲ್ಲ ರೈತರ ಪರ ಐಕ್ಯಮತವನ್ನು ವ್ಯಕ್ತಪಡಿಸಿದ್ದಾರೆ. “ಭಾರತವು ತನ್ನ ಮೂಲಭೂತ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು, ಮಾಹಿತಿಯ ಮುಕ್ತ ಹರಿವನ್ನು ಅನುಮತಿಸಬೇಕು. ಇಂಟರ್ನೆಟ್ ಸೌಲಭ್ಯವನ್ನು ಪುನಃ ಸ್ಥಾಪಿಸಬೇಕು ಮತ್ತು ಪ್ರತಿಭಟನೆಗಳನ್ನು ವರದಿ ಮಾಡಿ ಬಂಧನಕ್ಕೊಳಗಾದ ಎಲ್ಲ ಪತ್ರಕರ್ತರನ್ನು ಬಿಡುಗಡೆ ಮಾಡಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ಯು.ಎಸ್. ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ, ಡೆಮಾಕ್ರಟ್ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ್ದ ಹ್ಯಾಶ್‌ಟ್ಯಾಗ್ #FarmersProtest ಅನ್ನು ಬಳಸಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು” ಎಂದು ಟ್ವೀಟ್ ಮಾಡಿದ್ದರು.

ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿ, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸಂಬಂಧಿ, ವಕೀಲೆ ಮೀನಾ ಹ್ಯಾರಿಸ್, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಆಕ್ರಮಣದಲ್ಲಿದೆ ಎಂದು ಆರೋಪಿಸಿದ್ದಾರೆ.

ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ಒಂದು ತಿಂಗಳ ಹಿಂದಿನಿಂದಲೇ ದಾಳಿ ನಡೆದಿರುವುದು ಕಾಕತಾಳೀಯವಲ್ಲ. ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಹಿಂಸಾಚಾರದಿಂದ ನಾವು ಎಲ್ಲರೂ ಆಕ್ರೋಶಗೊಳ್ಳಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...