Homeಮುಖಪುಟಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

- Advertisement -
- Advertisement -

ಬಿಡಿ ಬಿಡಿಯಾಗಿ ಅಮೆರಿಕದ ಜನಪ್ರತಿನಿಧಿಗಳು ರೈತ ಪ್ರತಿಭಟನೆಯ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಟೀಕಿಸಿದ್ದಾರೆ. ಅಮೆರಿಕ ಆಡಳಿತ ಕೂಡ ಶಾಂತಿಯುತ ಪ್ರತಿಭಟನೆ ಬೆಂಬಲಿಸಿದೆ, ಅದರೆ ಅದು ’ಮಾರುಕಟ್ಟೆ’ ದೃಷ್ಟಿಯಿಂದ ಕೃಷಿ ಕಾನೂನುಗಳ ಪರವಿದೆ!

ಸರ್ವಾಧಿಕಾರಿಯ ಪಡಿಯಚ್ಚಿನಂತಿದ್ದ ಡೊನಾಲ್ಡ್ ಟ್ರಂಪ್ ಮನೆಗೆ ಹೋಗಿದ್ದಾರೆ. ಉದಾರವಾದಿ ನಿಲುವಿನ, ಸಾಪೇಕ್ಷವಾಗಿ ಹೆಚ್ಚು ಪ್ರಜಾಪ್ರಭುತ್ವವಾದಿಯಾಗಿರುವ ಡೆಮಾಕ್ರಟ್ಸ್ ಅಧಿಕಾರಕ್ಕೆ ಬಂದಿದ್ದಾರೆ. ಇಷ್ಟಾದರೆ ಒಟ್ಟೂ ಅಮೆರಿಕ ಆಡಳಿತದ ನಿಲುವಿನಲ್ಲಿ ಏನಾದರೂ ಬದಲಾವಣೆ ಆಗಬಹುದೇ ಎಂಬ ನಿರೀಕ್ಷೆಗಳಿರುವುದು ಸಹಜ. ಆದರೆ ಅದನ್ನು ಈಗಲೇ ನಿರ್ಧರಿಸಲಾಗದು.

ಭಾರತದ ರೈತ ಹೋರಾಟ ಕುರಿತಂತೆ ಅಲ್ಲಿನ ಅನೇಕ ಚುನಾಯಿತ ಜನಪ್ರತಿನಿಧಿಗಳು ಬೆಂಬಲ ಸೂಚಿಸಿದ್ದಾರೆ. ಆದರೆ ಅಮೆರಿಕ ಆಡಳಿತದ ನಿಲುವುಗಳಲ್ಲಿ ದ್ವಂದ್ವ ಇದೆ ಎಂಬುದಕ್ಕೆ ಮತ್ತು ಅದು ಉದ್ದೇಶಿತ ದ್ವಂದ್ವ ಎಂಬುದಕ್ಕೆ ಸ್ಟೇಟ್ ಡಿಪಾರ್ಟಮೆಂಟ್ ವಕ್ತಾರರ ಅಭಿಪ್ರಾಯಗಳೇ ಸಾಕು.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ಶಾಂತಿಯುತ ಪ್ರತಿಭಟನೆಗಳು, ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ಗುರುತಿಸಿದ ಅಮೆರಿಕ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಬುಧವಾರ ಹೇಳಿದೆ.

ಅಂದರೆ, ಅವರ ಬಂಡವಾಳಶಾಹಿಗಳಿಗೆ ಇಲ್ಲಿನ ಮಾರುಕಟ್ಟೆ ಒದಗಿಸುವ ತುಡಿತವೂ ಇದೆ, ಶಂತಿಯುತ ಪ್ರತಿಬಟನೆಗಳು ಡೆಮಾಕ್ರಸಿಯ ಲಕ್ಷಣ ಎಂಬ ಭಾವವೂ ಇದೆ.

“ಸಾಮಾನ್ಯವಾಗಿ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಅಮೆರಿಕ ಸ್ವಾಗತಿಸುತ್ತದೆ” ಎಂದು ವಕ್ತಾರ ಸ್ಟೀವನ್ಸ್ ಹೇಳಿದ್ದಾರೆ. ಹೊಸ ಕಾಯ್ದೆಗಳು ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತವೆ ಮತ್ತು ರೈತರಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶವನ್ನು ಒದಗಿಸುತ್ತವೆ ಎಂದು ಭಾರತ ಸರ್ಕಾರ ’ಬಿಂಬಿಸುತ್ತಿರುವ’ ವಿದ್ಯಮಾನವನ್ನು ಅಮೆರಿಕ ವಾಸ್ತವ ಎಂದು ಒಪ್ಪಿಕೊಂಡಿದೆ. ಇದು ಏನನ್ನು ಸೂಚಿಸುತ್ತದೆ? ಹೊಸ ಬಿಡೆನ್ ಆಡಳಿತವು ಕೃಷಿ ವಲಯವನ್ನು ಸುಧಾರಿಸುವ ಭಾರತ ಸರ್ಕಾರದ ಕ್ರಮವನ್ನು ಬೆಂಬಲಿಸುತ್ತದೆ ಎಂಬುದನ್ನೇ ಅಲ್ಲವೇ?

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟೇಟ್ಸ್ ಡಿಪಾರ್ಟ್‌ಮೆಂಟ್ ವಕ್ತಾರ, ಪಕ್ಷಗಳ (ಸರ್ಕಾರ ಮತ್ತು ರೈತ ಸಂಘಟನೆಗಳು) ನಡುವಿನ ಯಾವುದೇ ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಬೇಕೆಂದು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಈಗ ಪ್ರತಿಭಟನೆಯ ಸುತ್ತ ಭದ್ರಕೋಟೆ ಕಟ್ಟಿ, ನೀರು-ವಿದ್ಯುತ್-ಇಂಟರ್‌ನೆಟ್ ಸ್ತಗಿತಗೊಳಿಸಿದ ಮೇಲೂ ಭಾರತ ಸರ್ಕಾರ ’ಮಾತುಕತೆ’ ಬಗ್ಗೆ ಮಾತಾಡುತ್ತಲೇ ಇದೆಯಲ್ಲವೆ?

“ಶಾಂತಿಯುತ ಪ್ರತಿಭಟನೆಗಳು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವೆಂದು ನಾವು ಗುರುತಿಸುತ್ತೇವೆ ಮತ್ತು ಭಾರತೀಯ ಸುಪ್ರೀಂ ಕೋರ್ಟ್ ಇದನ್ನೇ ಹೇಳಿದೆ ಎಂದು ಗಮನಿಸಿ” ಎಂದು ವಕ್ತಾರರು ಹೇಳಿದ್ದಾರೆ.

ಏತನ್ಮಧ್ಯೆ, ಹಲವಾರು ಅಮೆರಿಕದ ಶಾಸಕರು (ಅಲ್ಲಿನ ಚುನಾಯಿತ ಜನಪ್ರತಿನಿಧಿಗಳು), ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. “ಭಾರತದಲ್ಲಿ ಹೊಸ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸುತ್ತಿರುವ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ವರದಿಯಾದ ಕ್ರಮಗಳಿಂದ ನಾನು ಕಳವಳಗೊಂಡಿದ್ದೇನೆ” ಎಂದು ಕಾಂಗ್ರೆಸ್- ವುಮನ್ ಹ್ಯಾಲೆ ಸ್ಟೀವನ್ಸ್ ಹೇಳಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ನೀಡಿರುವ ಭೂಮಿಯೂ ವಿವಾದದ ಸುಳಿಯಲ್ಲಿ: ಕಾರಣ ಏನು?

ಅವರು ಹೇಳಿಕೆಯಲ್ಲಿ, ನರೇಂದ್ರ ಮೋದಿ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಫಲಪ್ರದ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಪೇಕ್ಷಿಸಿದ್ದಾರೆ.

ನಾನು ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇನೆ. ಈ ವಿಷಯದ ಬಗ್ಗೆ ಜಿಲ್ಲೆಯಾದ್ಯಂತ ಭಾಗಿದಾರರೊಂದಿಗೆ ತೊಡಗಿಸಿಕೊಳ್ಳುವುದು ವಿಶೇಷವಾಗಿ ಮೌಲ್ಯಯುತವಾಗಿದೆ. ಇಂತಹ ಕ್ರಮಗಳಿಗೆ ನನ್ನ ಮೆಚ್ಚುಗೆಯಿದೆ ಎಂದು ಸ್ಟೀವನ್ಸ್ ಹೇಳಿದ್ದಾರೆ.

ಇನ್ನೊಬ್ಬ ಕಾಂಗ್ರೆಸ್-ವುಮನ್ ಇಲ್ಹಾನ್ ಒಮರ್ ಅವರು, ಭಾರತದಾದ್ಯಂತ ತಮ್ಮ ಜೀವನೋಪಾಯಕ್ಕಾಗಿ ಪ್ರತಿಭಟಿಸುತ್ತಿರುವ ಎಲ್ಲ ರೈತರ ಪರ ಐಕ್ಯಮತವನ್ನು ವ್ಯಕ್ತಪಡಿಸಿದ್ದಾರೆ. “ಭಾರತವು ತನ್ನ ಮೂಲಭೂತ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು, ಮಾಹಿತಿಯ ಮುಕ್ತ ಹರಿವನ್ನು ಅನುಮತಿಸಬೇಕು. ಇಂಟರ್ನೆಟ್ ಸೌಲಭ್ಯವನ್ನು ಪುನಃ ಸ್ಥಾಪಿಸಬೇಕು ಮತ್ತು ಪ್ರತಿಭಟನೆಗಳನ್ನು ವರದಿ ಮಾಡಿ ಬಂಧನಕ್ಕೊಳಗಾದ ಎಲ್ಲ ಪತ್ರಕರ್ತರನ್ನು ಬಿಡುಗಡೆ ಮಾಡಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ಯು.ಎಸ್. ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ, ಡೆಮಾಕ್ರಟ್ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ್ದ ಹ್ಯಾಶ್‌ಟ್ಯಾಗ್ #FarmersProtest ಅನ್ನು ಬಳಸಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು” ಎಂದು ಟ್ವೀಟ್ ಮಾಡಿದ್ದರು.

ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿ, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸಂಬಂಧಿ, ವಕೀಲೆ ಮೀನಾ ಹ್ಯಾರಿಸ್, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಆಕ್ರಮಣದಲ್ಲಿದೆ ಎಂದು ಆರೋಪಿಸಿದ್ದಾರೆ.

ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ಒಂದು ತಿಂಗಳ ಹಿಂದಿನಿಂದಲೇ ದಾಳಿ ನಡೆದಿರುವುದು ಕಾಕತಾಳೀಯವಲ್ಲ. ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಹಿಂಸಾಚಾರದಿಂದ ನಾವು ಎಲ್ಲರೂ ಆಕ್ರೋಶಗೊಳ್ಳಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...