Homeಮುಖಪುಟಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

- Advertisement -
- Advertisement -

ಬಿಡಿ ಬಿಡಿಯಾಗಿ ಅಮೆರಿಕದ ಜನಪ್ರತಿನಿಧಿಗಳು ರೈತ ಪ್ರತಿಭಟನೆಯ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಟೀಕಿಸಿದ್ದಾರೆ. ಅಮೆರಿಕ ಆಡಳಿತ ಕೂಡ ಶಾಂತಿಯುತ ಪ್ರತಿಭಟನೆ ಬೆಂಬಲಿಸಿದೆ, ಅದರೆ ಅದು ’ಮಾರುಕಟ್ಟೆ’ ದೃಷ್ಟಿಯಿಂದ ಕೃಷಿ ಕಾನೂನುಗಳ ಪರವಿದೆ!

ಸರ್ವಾಧಿಕಾರಿಯ ಪಡಿಯಚ್ಚಿನಂತಿದ್ದ ಡೊನಾಲ್ಡ್ ಟ್ರಂಪ್ ಮನೆಗೆ ಹೋಗಿದ್ದಾರೆ. ಉದಾರವಾದಿ ನಿಲುವಿನ, ಸಾಪೇಕ್ಷವಾಗಿ ಹೆಚ್ಚು ಪ್ರಜಾಪ್ರಭುತ್ವವಾದಿಯಾಗಿರುವ ಡೆಮಾಕ್ರಟ್ಸ್ ಅಧಿಕಾರಕ್ಕೆ ಬಂದಿದ್ದಾರೆ. ಇಷ್ಟಾದರೆ ಒಟ್ಟೂ ಅಮೆರಿಕ ಆಡಳಿತದ ನಿಲುವಿನಲ್ಲಿ ಏನಾದರೂ ಬದಲಾವಣೆ ಆಗಬಹುದೇ ಎಂಬ ನಿರೀಕ್ಷೆಗಳಿರುವುದು ಸಹಜ. ಆದರೆ ಅದನ್ನು ಈಗಲೇ ನಿರ್ಧರಿಸಲಾಗದು.

ಭಾರತದ ರೈತ ಹೋರಾಟ ಕುರಿತಂತೆ ಅಲ್ಲಿನ ಅನೇಕ ಚುನಾಯಿತ ಜನಪ್ರತಿನಿಧಿಗಳು ಬೆಂಬಲ ಸೂಚಿಸಿದ್ದಾರೆ. ಆದರೆ ಅಮೆರಿಕ ಆಡಳಿತದ ನಿಲುವುಗಳಲ್ಲಿ ದ್ವಂದ್ವ ಇದೆ ಎಂಬುದಕ್ಕೆ ಮತ್ತು ಅದು ಉದ್ದೇಶಿತ ದ್ವಂದ್ವ ಎಂಬುದಕ್ಕೆ ಸ್ಟೇಟ್ ಡಿಪಾರ್ಟಮೆಂಟ್ ವಕ್ತಾರರ ಅಭಿಪ್ರಾಯಗಳೇ ಸಾಕು.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ಶಾಂತಿಯುತ ಪ್ರತಿಭಟನೆಗಳು, ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಲಕ್ಷಣವಾಗಿದೆ ಎಂದು ಗುರುತಿಸಿದ ಅಮೆರಿಕ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಸ್ವಾಗತಿಸುವುದಾಗಿ ಬುಧವಾರ ಹೇಳಿದೆ.

ಅಂದರೆ, ಅವರ ಬಂಡವಾಳಶಾಹಿಗಳಿಗೆ ಇಲ್ಲಿನ ಮಾರುಕಟ್ಟೆ ಒದಗಿಸುವ ತುಡಿತವೂ ಇದೆ, ಶಂತಿಯುತ ಪ್ರತಿಬಟನೆಗಳು ಡೆಮಾಕ್ರಸಿಯ ಲಕ್ಷಣ ಎಂಬ ಭಾವವೂ ಇದೆ.

“ಸಾಮಾನ್ಯವಾಗಿ, ಭಾರತದ ಮಾರುಕಟ್ಟೆಗಳ ದಕ್ಷತೆಯನ್ನು ಸುಧಾರಿಸುವ ಮತ್ತು ಹೆಚ್ಚಿನ ಖಾಸಗಿ ವಲಯದ ಹೂಡಿಕೆಯನ್ನು ಆಕರ್ಷಿಸುವ ಕ್ರಮಗಳನ್ನು ಅಮೆರಿಕ ಸ್ವಾಗತಿಸುತ್ತದೆ” ಎಂದು ವಕ್ತಾರ ಸ್ಟೀವನ್ಸ್ ಹೇಳಿದ್ದಾರೆ. ಹೊಸ ಕಾಯ್ದೆಗಳು ಖಾಸಗಿ ಹೂಡಿಕೆಯನ್ನು ಆಕರ್ಷಿಸುತ್ತವೆ ಮತ್ತು ರೈತರಿಗೆ ಹೆಚ್ಚಿನ ಮಾರುಕಟ್ಟೆ ಪ್ರವೇಶವನ್ನು ಒದಗಿಸುತ್ತವೆ ಎಂದು ಭಾರತ ಸರ್ಕಾರ ’ಬಿಂಬಿಸುತ್ತಿರುವ’ ವಿದ್ಯಮಾನವನ್ನು ಅಮೆರಿಕ ವಾಸ್ತವ ಎಂದು ಒಪ್ಪಿಕೊಂಡಿದೆ. ಇದು ಏನನ್ನು ಸೂಚಿಸುತ್ತದೆ? ಹೊಸ ಬಿಡೆನ್ ಆಡಳಿತವು ಕೃಷಿ ವಲಯವನ್ನು ಸುಧಾರಿಸುವ ಭಾರತ ಸರ್ಕಾರದ ಕ್ರಮವನ್ನು ಬೆಂಬಲಿಸುತ್ತದೆ ಎಂಬುದನ್ನೇ ಅಲ್ಲವೇ?

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ಟೇಟ್ಸ್ ಡಿಪಾರ್ಟ್‌ಮೆಂಟ್ ವಕ್ತಾರ, ಪಕ್ಷಗಳ (ಸರ್ಕಾರ ಮತ್ತು ರೈತ ಸಂಘಟನೆಗಳು) ನಡುವಿನ ಯಾವುದೇ ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಪರಿಹರಿಸಬೇಕೆಂದು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಳಿಯಾಳ: ಕಬ್ಬು ಬೆಳೆಗಾರರನ್ನು ಜಲ್ಲೆ ಮಾಡುತ್ತಿರುವ ’ಪ್ಯಾರಿ ಸಕ್ಕರೆ’ ದೊರೆಗಳು!

ಈಗ ಪ್ರತಿಭಟನೆಯ ಸುತ್ತ ಭದ್ರಕೋಟೆ ಕಟ್ಟಿ, ನೀರು-ವಿದ್ಯುತ್-ಇಂಟರ್‌ನೆಟ್ ಸ್ತಗಿತಗೊಳಿಸಿದ ಮೇಲೂ ಭಾರತ ಸರ್ಕಾರ ’ಮಾತುಕತೆ’ ಬಗ್ಗೆ ಮಾತಾಡುತ್ತಲೇ ಇದೆಯಲ್ಲವೆ?

“ಶಾಂತಿಯುತ ಪ್ರತಿಭಟನೆಗಳು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವೆಂದು ನಾವು ಗುರುತಿಸುತ್ತೇವೆ ಮತ್ತು ಭಾರತೀಯ ಸುಪ್ರೀಂ ಕೋರ್ಟ್ ಇದನ್ನೇ ಹೇಳಿದೆ ಎಂದು ಗಮನಿಸಿ” ಎಂದು ವಕ್ತಾರರು ಹೇಳಿದ್ದಾರೆ.

ಏತನ್ಮಧ್ಯೆ, ಹಲವಾರು ಅಮೆರಿಕದ ಶಾಸಕರು (ಅಲ್ಲಿನ ಚುನಾಯಿತ ಜನಪ್ರತಿನಿಧಿಗಳು), ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ. “ಭಾರತದಲ್ಲಿ ಹೊಸ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸುತ್ತಿರುವ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ವರದಿಯಾದ ಕ್ರಮಗಳಿಂದ ನಾನು ಕಳವಳಗೊಂಡಿದ್ದೇನೆ” ಎಂದು ಕಾಂಗ್ರೆಸ್- ವುಮನ್ ಹ್ಯಾಲೆ ಸ್ಟೀವನ್ಸ್ ಹೇಳಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ನೀಡಿರುವ ಭೂಮಿಯೂ ವಿವಾದದ ಸುಳಿಯಲ್ಲಿ: ಕಾರಣ ಏನು?

ಅವರು ಹೇಳಿಕೆಯಲ್ಲಿ, ನರೇಂದ್ರ ಮೋದಿ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳು ಫಲಪ್ರದ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಪೇಕ್ಷಿಸಿದ್ದಾರೆ.

ನಾನು ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇನೆ. ಈ ವಿಷಯದ ಬಗ್ಗೆ ಜಿಲ್ಲೆಯಾದ್ಯಂತ ಭಾಗಿದಾರರೊಂದಿಗೆ ತೊಡಗಿಸಿಕೊಳ್ಳುವುದು ವಿಶೇಷವಾಗಿ ಮೌಲ್ಯಯುತವಾಗಿದೆ. ಇಂತಹ ಕ್ರಮಗಳಿಗೆ ನನ್ನ ಮೆಚ್ಚುಗೆಯಿದೆ ಎಂದು ಸ್ಟೀವನ್ಸ್ ಹೇಳಿದ್ದಾರೆ.

ಇನ್ನೊಬ್ಬ ಕಾಂಗ್ರೆಸ್-ವುಮನ್ ಇಲ್ಹಾನ್ ಒಮರ್ ಅವರು, ಭಾರತದಾದ್ಯಂತ ತಮ್ಮ ಜೀವನೋಪಾಯಕ್ಕಾಗಿ ಪ್ರತಿಭಟಿಸುತ್ತಿರುವ ಎಲ್ಲ ರೈತರ ಪರ ಐಕ್ಯಮತವನ್ನು ವ್ಯಕ್ತಪಡಿಸಿದ್ದಾರೆ. “ಭಾರತವು ತನ್ನ ಮೂಲಭೂತ ಪ್ರಜಾಪ್ರಭುತ್ವ ಹಕ್ಕುಗಳನ್ನು ರಕ್ಷಿಸಬೇಕು, ಮಾಹಿತಿಯ ಮುಕ್ತ ಹರಿವನ್ನು ಅನುಮತಿಸಬೇಕು. ಇಂಟರ್ನೆಟ್ ಸೌಲಭ್ಯವನ್ನು ಪುನಃ ಸ್ಥಾಪಿಸಬೇಕು ಮತ್ತು ಪ್ರತಿಭಟನೆಗಳನ್ನು ವರದಿ ಮಾಡಿ ಬಂಧನಕ್ಕೊಳಗಾದ ಎಲ್ಲ ಪತ್ರಕರ್ತರನ್ನು ಬಿಡುಗಡೆ ಮಾಡಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರನ್ನು ಭೇಟಿಯಾಗಲು ಗಾಜಿಪುರ್‌ ತಲುಪಿದ ವಿರೋಧ ಪಕ್ಷ ನಾಯಕರು

ಯು.ಎಸ್. ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ, ಡೆಮಾಕ್ರಟ್ ಜಿಮ್ ಕೋಸ್ಟಾ, ರಿಹಾನ್ನಾ ಪೋಸ್ಟ್ ಮಾಡಿದ್ದ ಹ್ಯಾಶ್‌ಟ್ಯಾಗ್ #FarmersProtest ಅನ್ನು ಬಳಸಿದ್ದಾರೆ. “ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಕಿರಿಕಿರಿ ಉಂಟು ಮಾಡುತ್ತಿವೆ. ವಿದೇಶಾಂಗ ವ್ಯವಹಾರಗಳ ಸಮಿತಿಯ ಸದಸ್ಯನಾಗಿ ನಾನು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಯಾವಾಗಲೂ ಗೌರವಿಸಬೇಕು” ಎಂದು ಟ್ವೀಟ್ ಮಾಡಿದ್ದರು.

ರೈತರ ಪ್ರತಿಭಟನೆಯನ್ನು ಉಲ್ಲೇಖಿಸಿ, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸಂಬಂಧಿ, ವಕೀಲೆ ಮೀನಾ ಹ್ಯಾರಿಸ್, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ಆಕ್ರಮಣದಲ್ಲಿದೆ ಎಂದು ಆರೋಪಿಸಿದ್ದಾರೆ.

ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ಒಂದು ತಿಂಗಳ ಹಿಂದಿನಿಂದಲೇ ದಾಳಿ ನಡೆದಿರುವುದು ಕಾಕತಾಳೀಯವಲ್ಲ. ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಹಿಂಸಾಚಾರದಿಂದ ನಾವು ಎಲ್ಲರೂ ಆಕ್ರೋಶಗೊಳ್ಳಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಸಿನಿಮಾ ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಬೇಕು – ಸಿದ್ದರಾಮಯ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....