Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...