Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...