Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....