Homeಅಂತರಾಷ್ಟ್ರೀಯಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

ಅಮೆರಿಕಾಕ್ಕೆ ಮಲೇರಿಯಾ ಔಷಧಿ ಪೂರೈಸದಿದ್ದರೆ ಪ್ರತಿಕಾರ: ಭಾರತದ ಉತ್ತರ?

- Advertisement -
- Advertisement -

ಪ್ರಪಂಚದೆಲ್ಲೆಡೆ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಸದ್ಯಕ್ಕೆ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೊರೊನಾ ಸೋಂಕಿತರಿಗೂ ನೀಡಲಾಗುತ್ತದೆ. ಹಾಗಾಗಿ ಭಾರತ ಮಲೇರಿಯಾ ನಿರೋಧಕ ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲಿನ ರಫ್ತು ನಿರ್ಬಂಧವನ್ನು ತೆರವುಗೊಳಿಸದಿದ್ದರೆ ಪ್ರತಿಕಾರ ಅನಿವಾರ್ಯ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಧಮಕಿ ಹಾಕಿದ್ದಾರೆ.

ವೈಟ್‌ಹೌಸ್‌ನಲ್ಲಿ ಮಾತನಾಡಿದ ಅವರು “ಕೊರೊನಾ ಹಿನ್ನೆಲೆಯಲ್ಲಿ ಮಲೇರಿಯಾ ನಿರೋಧಕವನ್ನು ಕಳಿಸಿಕೊಡುವಂತೆ ಭಾರತರವನ್ನು ಕೋರಲಾಗಿದೆ. ಆದರೂ ಅವರು ಅದರ ಮೇಲಿನ ರಫ್ತುನಿರ್ಬಂದವನ್ನು ತೆರವುಗೊಳಿಸದಿರುವುದು ಏಕೆಂದು ತಿಳಿಯುತ್ತಿಲ್ಲ. ಹಾಗೇನಾದರೂ ಅವರು ನಮ್ಮ ಮನವಿಯನ್ನು ತಿರಸ್ಕರಿಸಿ ಔಷಧಿ ಪೂರೈಸದಿದ್ದರೆ ಪ್ರತಿಕಾರವಂತೂ ಇದ್ದೇ ಇರುತ್ತದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಭಾರತದಲ್ಲಿಯೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದ ಮಾರ್ಚ್‌ 25ರಂದು ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್ ಮೇಲೆ ರಫ್ತು ನಿರ್ಬಂಧವನ್ನು ಹೇರಿತ್ತು. ಆದರೆ ಟ್ರಂಪ್‌ ಮೋದಿಯವರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕಳಿಸುವಂತೆ ಇತ್ತೀಚೆಗೆ ಮನವಿ ಮಾಡಿದ್ದರು. ಆದರೆ ಭಾರತದಲ್ಲಿಯೂ ಕೊರೊನಾ ಉಲ್ಬಣಗೊಳ್ಳುತ್ತಿರುವ ಕಾರಣದಿಂದ ಭಾರತ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನವನ್ನು ತೆಗೆದುಕೊಂಡಿರಲಿಲ್ಲ.

ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಪ್ರತೀಕಾರದ” ಬೆದರಿಕೆಗೆ ಗುರಿಯಾಗಲು ಭಾರತವು ನಿರಾಕರಿಸಿದ್ದು, ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧವನ್ನು ಭಾರತ ಭಾಗಶಃ ಸಡಿಲಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಮಾನವೀಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿರುವ ನಮ್ಮ ಎಲ್ಲಾ ನೆರೆಯ ರಾಷ್ಟ್ರಗಳಿಗೆ ಭಾರತವು ಪ್ಯಾರಸಿಟಮಾಲ್ ಮತ್ತು ಹೈಡ್ರಾಕ್ಸಿಕ್ಲೋರೊಕ್ವಿನ್‌ ರಫ್ತಿಗೆ ಸೂಕ್ತ ಪ್ರಮಾಣದಲ್ಲಿ ಪರವಾನಗಿ ನೀಡಲಿದೆ ಎಂದು ನಿರ್ಧರಿಸಲಾಗಿದೆ. ನಾವು ಈ ಅಗತ್ಯ ಔಷಧಿಗಳನ್ನು ಸಾಂಕ್ರಾಮಿಕ ರೋಗದಿಂದ ವಿಶೇಷವಾಗಿ ಕೆಟ್ಟ ಪರಿಣಾಮ ಬೀರಿದ ಕೆಲವು ರಾಷ್ಟ್ರಗಳಿಗೆ ಪೂರೈಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.

ಎಲ್ಲಾ ದೇಶೀಯ ಅವಶ್ಯಕತೆಗಳನ್ನು ಪೂರೈಸಿದ ನಂತರವೇ ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್‌ ಮಾತ್ರೆಗಳನ್ನು ಇತರ ದೇಶಗಳಿಗೆ ರಫ್ತು ಮಾಡಲಾಗುವುದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಪಂಚದೆಲ್ಲಿಯೇ ಹೈಡ್ರಾಕ್ಸಿಕ್ಲೋರೊಕ್ವಿನ್ ಉತ್ಪಾದಿಸುವಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಆರಂಭದಲ್ಲಿ ದೇಶೀಯ ಸರಬರಾಜನ್ನು ಖಚಿತಪಡಿಸಿಕೊಳ್ಳಲು ಮಾರ್ಚ್ 25 ರಂದು ಭಾರತವು ರಫ್ತು ಮಾಡುವುದನ್ನು ನಿಷೇಧಿಸಿತು. ನಂತರ ಏಪ್ರಿಲ್ 4 ರಂದು ನಿಯಮಗಳನ್ನು ಬಿಗಿಗೊಳಿಸಲಾಯಿತು.

ಈ ಕುರಿತು ಶಶಿ ತರೂರ್‌ ಟ್ವೀಟ್‌ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ವಿಶ್ವ ವ್ಯವಹಾರಗಳ ನನ್ನ ದಶಕಗಳ ಅನುಭವದಲ್ಲಿ ಎಂದಿಗೂ ಯಾವುದೇ ರಾಷ್ಟ್ರದ ಮುಖ್ಯಸ್ಥರು ಅಥವಾ ಸರ್ಕಾರ ಈ ರೀತಿಯ ಇನ್ನೊಬ್ಬರಿಗೆ ಬಹಿರಂಗವಾಗಿ ಬೆದರಿಕೆ ಹಾಕುವುದನ್ನು ನಾನು ಕೇಳಿಲ್ಲ. ಮಿಸ್ಟರ್ ಪ್ರೆಸಿಡೆಂಟ್, ಭಾರತೀಯ ಹೈಡ್ರಾಕ್ಸಿಕ್ಲೋರೋಕ್ವಿನ್ ಅದು “ನಮ್ಮ ಪೂರೈಕೆ”ಯಾಗಿರುತ್ತದೆ. ಭಾರತವು ಅದನ್ನು ನಿಮಗೆ ಮಾರಾಟ ಮಾಡಲು ನಿರ್ಧರಿಸಿದಾಗ ಮಾತ್ರ ಅದು ನಿಮ್ಮ ಪೂರೈಕೆಯಾಗುತ್ತದೆ ತಿಳಿಯಿರಿ” ಎಂದು ಕಿಡಿಕಾರಿದ್ದಾರೆ.

ನರೇಂದ್ರ ಮೋದಿಯವರು ತೆರಿಗೆ ಪಾವತಿದಾರರ ಹಣವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಡೊನಾಲ್ಡ್‌ ಟ್ರಂಪ್‌ಗೆ ಭರ್ಜರಿ ಸ್ವಾಗತ ನೀಡಿದ್ದರು. ಇಂದು ಅದೇ ವ್ಯಕ್ತಿ ಭಾರತದ ವಿರುದ್ಧ ಪ್ರತೀಕಾರದ ಬಗ್ಗೆ ಮಾತನಾಡುತ್ತಾನೆ. ಭಾರತವು ಪ್ರತಿ ದೇಶಕ್ಕೂ ಎಲ್ಲ ರೀತಿಯಿಂದಲೂ ಸಹಾಯ ಮಾಡಬೇಕು ಆದರೆ ಮೊದಲು ಅದು ತನ್ನ ನಾಗರಿಕರ ಅಗತ್ಯಗಳನ್ನು ಪೂರೈಸಿರಬೇಕು ಎಂದು ಆಲ್ಟ್‌ನ್ಯೂಸ್‌ ಸ್ಥಾಪಕ ಪ್ರತೀಕ್‌ ಸಿನ್ಹಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...