Homeಮುಖಪುಟಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

ಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

- Advertisement -
- Advertisement -

ಏಮ್ಸ್ ಕೊಠಡಿ ಅಂದ ತಕ್ಷಣ, ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಯಾವುದೋ ಒಂದು ಕೊಠಡಿ ಬಗ್ಗೆ ಇರಬಹುದೇ? ಆ ಕೊಠಡಿ ಒಳಗೆ ಏನಿರಬಹುದು? ಯಾಕಿರಬಹುದು? ಅಂತೆಲ್ಲಾ ಊಹಿಸಿದಿರಾ! ಇದು ದೆಹಲಿಯ ಏಮ್ಸ್ ಕೊಠಡಿಯ ಬಗ್ಗೆ ಅಲ್ಲ. ಆದರೂ ಇದು ಏಮ್ಸ್ ಕೊಠಡಿ!

ಈ ಮೇಲಿನ ಎರಡು ಚಿತ್ರಗಳನ್ನು ಗಮನಿಸಿ. ಏನನ್ನಿಸಿತು? ಚಿತ್ರ (1)ರಲ್ಲಿ ಪುರುಷನು ಮಹಿಳೆಗಿಂತ ಎತ್ತರವಾಗಿದ್ದಾರೆ, ಅದೇ ಚಿತ್ರ (2)ರಲ್ಲಿ ಮಹಿಳೆ ಪುರುಷನಿಗಿಂತ ಎತ್ತರವಾಗಿದ್ದಾರೆ ಅಲ್ಲವೇ? ಆದರೆ, ಚಿತ್ರ (1) ಮತ್ತು (2)ಕ್ಕಿರುವ ಬದಲಾವಣೆಯೆಂದರೆ, ಇಬ್ಬರೂ ತಮ್ಮ ತಮ್ಮ ಸ್ಥಾನಗಳನ್ನು ಬದಲಾಯಿಸಿರುವರು ಅಷ್ಟೇ! ಅದೇ ಕೊಠಡಿ, ಅದೇ ಸ್ಥಳ! ಮತ್ತೊಮ್ಮೆ ಸೂಕ್ಷ್ಮವಾಗಿ ಚಿತ್ರಗಳನ್ನು ಗಮನಿಸಿ.

ಮೇಲಿನ ಚಿತ್ರಗಳಲ್ಲಿರುವ ಕೊಠಡಿಯು ಸಾಮಾನ್ಯ ಕೊಠಡಿಯಂತೆಯೇ ಕಾಣುತ್ತಿದೆ. ಹೇಳಿಕೊಳ್ಳುವಂತಹ ಯಾವ ಬದಲಾವಣೆಗಳೂ ಗೋಚರಿಸುತ್ತಿಲ್ಲ. ಅಲ್ಲದೆ, ವೀಕ್ಷಕರಿಂದ ಇಬ್ಬರೂ ಒಂದೇ ಅಂತರದಲ್ಲಿ ನಿಂತಿದ್ದಾರೆ. ಆದರೆ, ಒಂದು ಬದಿಯಲ್ಲಿ ನಿಂತಿರುವರು ಎತ್ತರವಾಗಿದ್ದಾರೆ. ಅವರೇ ಮತ್ತೊಂದು ಬದಿಗೆ ಹೋದರೆ ಅವರ ಎತ್ತರ ಕಡಿಮೆಯಾಗುತ್ತಿದೆ. ಅವರು ಒಂದು ಬದಿಯಿಂದ ಇನ್ನೊಂದು ಬದಿಗೆ ನಡೆದುಕೊಂಡು ಹೊಗುವ ವಿಡಿಯೋವನ್ನು ನೀವು ನೋಡಿದರೆ, ಎತ್ತರಗಳು ವ್ಯತ್ಯಾಸವಾಗುವುದನ್ನು ಗಮನಿಸಬಹುದು. ವಿಡಿಯೋ ನೋಡಲು QR ಕೋಡ್ ಸ್ಕ್ಯಾನ್ ಮಾಡಿ.

ಅರೆ, ಏನಿದು, ನಮ್ಮ ಕಣ್ಣಿಗೆ ಹೀಗೇಕೆ ಮೋಸವಾಗುತ್ತಿದೆ? ಇಂತಹ ಮೋಸಮಾಡುವ ಪ್ರಕ್ರಿಯೆಗಳನ್ನು ವೈಜ್ಞಾನಿಕವಾಗಿ ಭ್ರಮೆ (Illusion) ಎಂದು ಕರೆಯುತ್ತೇವೆ. ಮೇಲಿನ ಚಿತ್ರದಲ್ಲಿರುವ ಕೊಠಡಿಯು ಸಹ ಅಂತಹ ದೃಷ್ಟಿಭ್ರಮೆಗೆ ಒಂದು ಉದಾಹರಣೆ (Optical Illusion).

ಅಮೆರಿಕಾದ ಅಡೆಲ್ಬರ್ಟ್ ಏಮ್ಸ್ ಎಂಬ ಹೆಸರಿತ ನೇತ್ರ ತಜ್ಞ ಮೊದಲ ಬಾರಿಗೆ ಇಂತಹ ಕೊಠಡಿಯನ್ನು ವಿನ್ಯಾಸ ಮಾಡಿದರು. ಖ್ಯಾತ ಭೌತವಿಜ್ಞಾನಿಯಾದ ಹರ್ಮನ್ ಹೆಲ್ಮೋಲ್ಟ್ಸ್ (Hermann Helmholtz) ಅವರು ಮೊದಲ ಬಾರಿಗೆ ಇಂತಹ ಕೊಠಡಿಯ ಪರಿಕಲ್ಪನೆಯನ್ನು ವಿವರಿಸಿದ್ದರೂ, ಅದನ್ನು ಮೊಟ್ಟಮೊದಲ ಬಾರಿಗೆ ನಿರ್ಮಿಸಿದ್ದು ನೇತ್ರ ತಜ್ಞ ಏಮ್ಸ್. ಈ ಕೊಠಡಿಯಲ್ಲಿನ ವಿಶೇಷವೆಂದರೆ, ವಸ್ತುವು ನೋಡುಗರಿಂದ ಒಂದೇ ದೂರದಲ್ಲಿದ್ದರೂ, ಅದನ್ನು ಒಂದು ಬದಿಯಲ್ಲಿಟ್ಟರೆ ಅದು ದೈತ್ಯವಾಗಿ, ಮತ್ತೊಂದು ಬದಿಯಲ್ಲಿಟ್ಟರೆ ಕುಬ್ಜವಾಗಿರುವಂತೆ ಕಾಣುತ್ತದೆ.

ಏಮ್ಸ್ ಕೊಠಡಿಯ ವಿನ್ಯಾಸ

ಮೇಲಿನ ಚಿತ್ರಗಳು ಏಮ್ಸ್ ಕೊಠಡಿಯ ವಿನ್ಯಾಸದ top view ಮತ್ತು side viewಗಳನ್ನು ತೋರಿಸುತ್ತವೆ. ಸಾಮಾನ್ಯವಾಗಿ ನಾವು ಕೊಠಡಿ ಎಂದಾಕ್ಷಣಾ ಛಾವಣಿ ಮತ್ತು ನೆಲವು ಸಮಾನಾಂತರವಾಗಿದ್ದು, ಗೋಡೆಗಳು ನೇರವಾಗಿರುವಂತೆ ಗ್ರಹಿಸುತ್ತೇವೆ. ಹಾಗೆಯೇ, ಏಮ್ಸ್ ಕೊಠಡಿಯನ್ನು ಹೊರಗಿನಿಂದ ಕಂಡಾಗ, ಇದೇ ರೀತಿ ಗೋಚರಿಸುವಂತೆ ವಿನ್ಯಾಸ ಮಾಡಲಾಗಿರುತ್ತದೆ. ಆ ಕೊಠಡಿಯನ್ನು ಒಂದು ವೀಕ್ಷಣಾ ಕಿಂಡಿಯಿಂದ ಕಂಡಾಗ ಮಾತ್ರ ಅದರ ಮ್ಯಾಜಿಕ್ ಅನಾವರಣಗೊಂಡು ನಮ್ಮನ್ನು ಚಕಿತಗೊಳಿಸುತ್ತದೆ.

ಏಮ್ಸ್ ಕೊಠಡಿ, ಹೊರಗಿನಿಂದ ಸಾಮಾನ್ಯ ಕೊಠಡಿಯಾಗಿದ್ದರೂ, ಅದನ್ನು trapezoidal shapeನಲ್ಲಿ (ವಿಷಮ ಸಮಾನಾಂತರ ಚತುರ್ಭುಜ) ವಿನ್ಯಾಸ ಮಾಡಿರುತ್ತಾರೆ. ಈ ಕೊಠಡಿಯಲ್ಲಿ ಯಾವ ಗೋಡೆಗಳೂ ಸಮಾನಾಂತರವಾಗಿರುವುದಿಲ್ಲ, ಎಲ್ಲವೂ ಒಂದಕ್ಕೊಂದು ಓರೆಯಾಗಿರುತ್ತದೆ. ನೆಲ ಮತ್ತು ಛಾವಣಿಯೂ ಕೂಡ ಸಮಾನಾಂತರವಾಗಿರದೆ, ಛಾವಣಿಯು ಇಳಿಜಾರಾಗಿರುತ್ತದೆ. ಏಮ್ಸ್ ಕೊಠಡಿಯ ಒಳಗೆ ವೀಕ್ಷಿಸಲು ನಿರ್ದಿಷ್ಟ ಜಾಗವನ್ನು ಅಥವಾ ವೀಕ್ಷಣಾ ಕಿಂಡಿಯನ್ನು ಕಲ್ಪಿಸಿರುತ್ತಾರೆ. ಅಲ್ಲಿಂದಲೇ ಒಳಗೆ ನಡೆಯುವ ಕ್ರಿಯೆಯನ್ನು ನೋಡಬೇಕು. ಈ ವೀಕ್ಷಣಾ ಕಿಂಡಿಯಿಂದ ನೋಡಿದಾಗ ಮಾತ್ರ ಒಂದು ಬದಿ ಹತ್ತಿರವಿರುವಂತೆ, ಮತ್ತೊಂದು ಬದಿ ದೂರವಿರುವಂತೆ ಕಾಣುತ್ತದೆ. ಮೇಲಿನ ಚಿತ್ರಗಳಲ್ಲಿ ಅದನ್ನು ನೋಡಬಹುದು. ಆದರೆ, ನೋಡುಗರಿಗೆ ಇದ್ಯಾವುದು ಗೊತ್ತಾಗದ ರೀತಿಯಲ್ಲಿ ಏಮ್ಸ್ ಕೊಠಡಿಯು ಒಳಗೆ ನೆಲ, ಛಾವಣಿ ಮತ್ತು ಗೋಡೆಗಳ ಮೇಲೆ ಚಿತ್ರ ಅಥವಾ ವಿನ್ಯಾಸಗಳನ್ನು ರಚಿಸಲಾಗಿರುತ್ತದೆ. ಈ ಚಿತ್ರಗಳು ಈ ಕೊಠಡಿ ಒಂದು ಸಾಮಾನ್ಯ ಕೊಠಡಿಯಂತೆಯೇ ಇದೆ ಎನ್ನುವ ಭ್ರಮೆಯನ್ನು ನಮ್ಮ ಕಣ್ಣಿನಲ್ಲಿ ಬಿಂಬಿಸುತ್ತಲೇ ಇರುತ್ತದೆ. ಆದರೆ, ಕೊಠಡಿಯೊಳಗೆ ಒಂದು ಬದಿಯಿಂದ ಇನ್ನೊಂದು ಬದಿಗೆ ಯಾರಾದರೂ ನಡೆದರೆ ಅಥವಾ ವಸ್ತುಗಳ ಸ್ಥಾನವನ್ನು ಬದಲಾಯಿಸಿದರೆ, ಅರೆ ಏನಿದು, ಏನಾಯಿತು, ಹೇಗೆ ಆ ವಸ್ತು ಚಿಕ್ಕದಾಯ್ತು, ದೊಡ್ಡದಾಯ್ತು ಎನ್ನುವ ಪ್ರಶ್ನೆಗಳು ಮೂಡುತ್ತವೆ. ಇದೇ ದೃಷ್ಟಿ ಭ್ರಮೆ! ಮನುಷ್ಯನ ಮೆದುಳು ವಸ್ತುವಿನ ಗಾತ್ರವನ್ನು ಹೇಗೆ ಕಂಡುಕೊಳ್ಳುತ್ತದೆ ಎನ್ನುವ ಆಂಶವನ್ನು ತಿಳಿಯಲು ಇಂತಹ ದೃಷ್ಟಿ ಭ್ರಮೆಯ ಪ್ರಯೋಗಗಳನ್ನು ಕೈಗೊಂಡು ಮನಶಾಸ್ತಜ್ಞರು ಅಧ್ಯಯನ ನಡೆಸುತ್ತಾರೆ.

ಅಂದಹಾಗೆ ಮೇಲಿನ ವಿನ್ಯಾಸದಂತೆ ಈ ಏಮ್ಸ್ ಕೊಠಡಿಯನ್ನು ನೀವು ಕಟ್ಟಿಸಬಹುದು, ಅಥವಾ ದೊಡ್ಡದಾದ ಕಾರ್ಡ್‌ಬೋರ್ಡ್‌ಗಳಲ್ಲಿ, ಗೋಡೆ, ಛಾವಣಿ ಮತ್ತು ನೆಲಹಾಸುಗಳನ್ನು ಮಾಡಿ, ಬಣ್ಣ ಬಳಿದು ಏಮ್ಸ್ ಕೊಠಡಿಯನ್ನು ಶಾಲೆ, ಕಾಲೇಜು ಅಥವಾ ಮ್ಯೂಸಿಯಂಗಳಲ್ಲಿ ನಿರ್ಮಿಸಬಹುದು. ಬೆಂಗಳೂರಿನ ಜವಾಹಾರಲಾಲ್ ನೆಹರೂ ತಾರಾಲಯದಲ್ಲಿ ದೊಡ್ಡದಾದ ಏಮ್ಸ್ ಕೊಠಡಿಯನ್ನೇ ನಿರ್ಮಿಸಿದ್ದಾರೆ. ಒಮ್ಮೆ ಅಲ್ಲಿಗೆ ಭೇಟಿ ನೀಡಿದಾಗ, ಖಗೋಳ ಪ್ರದರ್ಶನದ ಜೊತೆಗೆ, ಏಮ್ಸ್ ಕೊಠಡಿ ಒಳಗೂ ಒಂದು ವಾಕ್ ಮಾಡಿ ಬನ್ನಿ.


ಇದನ್ನೂ ಓದಿ: ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...