Homeಮುಖಪುಟಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

ಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

- Advertisement -
- Advertisement -

ಏಮ್ಸ್ ಕೊಠಡಿ ಅಂದ ತಕ್ಷಣ, ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಯಾವುದೋ ಒಂದು ಕೊಠಡಿ ಬಗ್ಗೆ ಇರಬಹುದೇ? ಆ ಕೊಠಡಿ ಒಳಗೆ ಏನಿರಬಹುದು? ಯಾಕಿರಬಹುದು? ಅಂತೆಲ್ಲಾ ಊಹಿಸಿದಿರಾ! ಇದು ದೆಹಲಿಯ ಏಮ್ಸ್ ಕೊಠಡಿಯ ಬಗ್ಗೆ ಅಲ್ಲ. ಆದರೂ ಇದು ಏಮ್ಸ್ ಕೊಠಡಿ!

ಈ ಮೇಲಿನ ಎರಡು ಚಿತ್ರಗಳನ್ನು ಗಮನಿಸಿ. ಏನನ್ನಿಸಿತು? ಚಿತ್ರ (1)ರಲ್ಲಿ ಪುರುಷನು ಮಹಿಳೆಗಿಂತ ಎತ್ತರವಾಗಿದ್ದಾರೆ, ಅದೇ ಚಿತ್ರ (2)ರಲ್ಲಿ ಮಹಿಳೆ ಪುರುಷನಿಗಿಂತ ಎತ್ತರವಾಗಿದ್ದಾರೆ ಅಲ್ಲವೇ? ಆದರೆ, ಚಿತ್ರ (1) ಮತ್ತು (2)ಕ್ಕಿರುವ ಬದಲಾವಣೆಯೆಂದರೆ, ಇಬ್ಬರೂ ತಮ್ಮ ತಮ್ಮ ಸ್ಥಾನಗಳನ್ನು ಬದಲಾಯಿಸಿರುವರು ಅಷ್ಟೇ! ಅದೇ ಕೊಠಡಿ, ಅದೇ ಸ್ಥಳ! ಮತ್ತೊಮ್ಮೆ ಸೂಕ್ಷ್ಮವಾಗಿ ಚಿತ್ರಗಳನ್ನು ಗಮನಿಸಿ.

ಮೇಲಿನ ಚಿತ್ರಗಳಲ್ಲಿರುವ ಕೊಠಡಿಯು ಸಾಮಾನ್ಯ ಕೊಠಡಿಯಂತೆಯೇ ಕಾಣುತ್ತಿದೆ. ಹೇಳಿಕೊಳ್ಳುವಂತಹ ಯಾವ ಬದಲಾವಣೆಗಳೂ ಗೋಚರಿಸುತ್ತಿಲ್ಲ. ಅಲ್ಲದೆ, ವೀಕ್ಷಕರಿಂದ ಇಬ್ಬರೂ ಒಂದೇ ಅಂತರದಲ್ಲಿ ನಿಂತಿದ್ದಾರೆ. ಆದರೆ, ಒಂದು ಬದಿಯಲ್ಲಿ ನಿಂತಿರುವರು ಎತ್ತರವಾಗಿದ್ದಾರೆ. ಅವರೇ ಮತ್ತೊಂದು ಬದಿಗೆ ಹೋದರೆ ಅವರ ಎತ್ತರ ಕಡಿಮೆಯಾಗುತ್ತಿದೆ. ಅವರು ಒಂದು ಬದಿಯಿಂದ ಇನ್ನೊಂದು ಬದಿಗೆ ನಡೆದುಕೊಂಡು ಹೊಗುವ ವಿಡಿಯೋವನ್ನು ನೀವು ನೋಡಿದರೆ, ಎತ್ತರಗಳು ವ್ಯತ್ಯಾಸವಾಗುವುದನ್ನು ಗಮನಿಸಬಹುದು. ವಿಡಿಯೋ ನೋಡಲು QR ಕೋಡ್ ಸ್ಕ್ಯಾನ್ ಮಾಡಿ.

ಅರೆ, ಏನಿದು, ನಮ್ಮ ಕಣ್ಣಿಗೆ ಹೀಗೇಕೆ ಮೋಸವಾಗುತ್ತಿದೆ? ಇಂತಹ ಮೋಸಮಾಡುವ ಪ್ರಕ್ರಿಯೆಗಳನ್ನು ವೈಜ್ಞಾನಿಕವಾಗಿ ಭ್ರಮೆ (Illusion) ಎಂದು ಕರೆಯುತ್ತೇವೆ. ಮೇಲಿನ ಚಿತ್ರದಲ್ಲಿರುವ ಕೊಠಡಿಯು ಸಹ ಅಂತಹ ದೃಷ್ಟಿಭ್ರಮೆಗೆ ಒಂದು ಉದಾಹರಣೆ (Optical Illusion).

ಅಮೆರಿಕಾದ ಅಡೆಲ್ಬರ್ಟ್ ಏಮ್ಸ್ ಎಂಬ ಹೆಸರಿತ ನೇತ್ರ ತಜ್ಞ ಮೊದಲ ಬಾರಿಗೆ ಇಂತಹ ಕೊಠಡಿಯನ್ನು ವಿನ್ಯಾಸ ಮಾಡಿದರು. ಖ್ಯಾತ ಭೌತವಿಜ್ಞಾನಿಯಾದ ಹರ್ಮನ್ ಹೆಲ್ಮೋಲ್ಟ್ಸ್ (Hermann Helmholtz) ಅವರು ಮೊದಲ ಬಾರಿಗೆ ಇಂತಹ ಕೊಠಡಿಯ ಪರಿಕಲ್ಪನೆಯನ್ನು ವಿವರಿಸಿದ್ದರೂ, ಅದನ್ನು ಮೊಟ್ಟಮೊದಲ ಬಾರಿಗೆ ನಿರ್ಮಿಸಿದ್ದು ನೇತ್ರ ತಜ್ಞ ಏಮ್ಸ್. ಈ ಕೊಠಡಿಯಲ್ಲಿನ ವಿಶೇಷವೆಂದರೆ, ವಸ್ತುವು ನೋಡುಗರಿಂದ ಒಂದೇ ದೂರದಲ್ಲಿದ್ದರೂ, ಅದನ್ನು ಒಂದು ಬದಿಯಲ್ಲಿಟ್ಟರೆ ಅದು ದೈತ್ಯವಾಗಿ, ಮತ್ತೊಂದು ಬದಿಯಲ್ಲಿಟ್ಟರೆ ಕುಬ್ಜವಾಗಿರುವಂತೆ ಕಾಣುತ್ತದೆ.

ಏಮ್ಸ್ ಕೊಠಡಿಯ ವಿನ್ಯಾಸ

ಮೇಲಿನ ಚಿತ್ರಗಳು ಏಮ್ಸ್ ಕೊಠಡಿಯ ವಿನ್ಯಾಸದ top view ಮತ್ತು side viewಗಳನ್ನು ತೋರಿಸುತ್ತವೆ. ಸಾಮಾನ್ಯವಾಗಿ ನಾವು ಕೊಠಡಿ ಎಂದಾಕ್ಷಣಾ ಛಾವಣಿ ಮತ್ತು ನೆಲವು ಸಮಾನಾಂತರವಾಗಿದ್ದು, ಗೋಡೆಗಳು ನೇರವಾಗಿರುವಂತೆ ಗ್ರಹಿಸುತ್ತೇವೆ. ಹಾಗೆಯೇ, ಏಮ್ಸ್ ಕೊಠಡಿಯನ್ನು ಹೊರಗಿನಿಂದ ಕಂಡಾಗ, ಇದೇ ರೀತಿ ಗೋಚರಿಸುವಂತೆ ವಿನ್ಯಾಸ ಮಾಡಲಾಗಿರುತ್ತದೆ. ಆ ಕೊಠಡಿಯನ್ನು ಒಂದು ವೀಕ್ಷಣಾ ಕಿಂಡಿಯಿಂದ ಕಂಡಾಗ ಮಾತ್ರ ಅದರ ಮ್ಯಾಜಿಕ್ ಅನಾವರಣಗೊಂಡು ನಮ್ಮನ್ನು ಚಕಿತಗೊಳಿಸುತ್ತದೆ.

ಏಮ್ಸ್ ಕೊಠಡಿ, ಹೊರಗಿನಿಂದ ಸಾಮಾನ್ಯ ಕೊಠಡಿಯಾಗಿದ್ದರೂ, ಅದನ್ನು trapezoidal shapeನಲ್ಲಿ (ವಿಷಮ ಸಮಾನಾಂತರ ಚತುರ್ಭುಜ) ವಿನ್ಯಾಸ ಮಾಡಿರುತ್ತಾರೆ. ಈ ಕೊಠಡಿಯಲ್ಲಿ ಯಾವ ಗೋಡೆಗಳೂ ಸಮಾನಾಂತರವಾಗಿರುವುದಿಲ್ಲ, ಎಲ್ಲವೂ ಒಂದಕ್ಕೊಂದು ಓರೆಯಾಗಿರುತ್ತದೆ. ನೆಲ ಮತ್ತು ಛಾವಣಿಯೂ ಕೂಡ ಸಮಾನಾಂತರವಾಗಿರದೆ, ಛಾವಣಿಯು ಇಳಿಜಾರಾಗಿರುತ್ತದೆ. ಏಮ್ಸ್ ಕೊಠಡಿಯ ಒಳಗೆ ವೀಕ್ಷಿಸಲು ನಿರ್ದಿಷ್ಟ ಜಾಗವನ್ನು ಅಥವಾ ವೀಕ್ಷಣಾ ಕಿಂಡಿಯನ್ನು ಕಲ್ಪಿಸಿರುತ್ತಾರೆ. ಅಲ್ಲಿಂದಲೇ ಒಳಗೆ ನಡೆಯುವ ಕ್ರಿಯೆಯನ್ನು ನೋಡಬೇಕು. ಈ ವೀಕ್ಷಣಾ ಕಿಂಡಿಯಿಂದ ನೋಡಿದಾಗ ಮಾತ್ರ ಒಂದು ಬದಿ ಹತ್ತಿರವಿರುವಂತೆ, ಮತ್ತೊಂದು ಬದಿ ದೂರವಿರುವಂತೆ ಕಾಣುತ್ತದೆ. ಮೇಲಿನ ಚಿತ್ರಗಳಲ್ಲಿ ಅದನ್ನು ನೋಡಬಹುದು. ಆದರೆ, ನೋಡುಗರಿಗೆ ಇದ್ಯಾವುದು ಗೊತ್ತಾಗದ ರೀತಿಯಲ್ಲಿ ಏಮ್ಸ್ ಕೊಠಡಿಯು ಒಳಗೆ ನೆಲ, ಛಾವಣಿ ಮತ್ತು ಗೋಡೆಗಳ ಮೇಲೆ ಚಿತ್ರ ಅಥವಾ ವಿನ್ಯಾಸಗಳನ್ನು ರಚಿಸಲಾಗಿರುತ್ತದೆ. ಈ ಚಿತ್ರಗಳು ಈ ಕೊಠಡಿ ಒಂದು ಸಾಮಾನ್ಯ ಕೊಠಡಿಯಂತೆಯೇ ಇದೆ ಎನ್ನುವ ಭ್ರಮೆಯನ್ನು ನಮ್ಮ ಕಣ್ಣಿನಲ್ಲಿ ಬಿಂಬಿಸುತ್ತಲೇ ಇರುತ್ತದೆ. ಆದರೆ, ಕೊಠಡಿಯೊಳಗೆ ಒಂದು ಬದಿಯಿಂದ ಇನ್ನೊಂದು ಬದಿಗೆ ಯಾರಾದರೂ ನಡೆದರೆ ಅಥವಾ ವಸ್ತುಗಳ ಸ್ಥಾನವನ್ನು ಬದಲಾಯಿಸಿದರೆ, ಅರೆ ಏನಿದು, ಏನಾಯಿತು, ಹೇಗೆ ಆ ವಸ್ತು ಚಿಕ್ಕದಾಯ್ತು, ದೊಡ್ಡದಾಯ್ತು ಎನ್ನುವ ಪ್ರಶ್ನೆಗಳು ಮೂಡುತ್ತವೆ. ಇದೇ ದೃಷ್ಟಿ ಭ್ರಮೆ! ಮನುಷ್ಯನ ಮೆದುಳು ವಸ್ತುವಿನ ಗಾತ್ರವನ್ನು ಹೇಗೆ ಕಂಡುಕೊಳ್ಳುತ್ತದೆ ಎನ್ನುವ ಆಂಶವನ್ನು ತಿಳಿಯಲು ಇಂತಹ ದೃಷ್ಟಿ ಭ್ರಮೆಯ ಪ್ರಯೋಗಗಳನ್ನು ಕೈಗೊಂಡು ಮನಶಾಸ್ತಜ್ಞರು ಅಧ್ಯಯನ ನಡೆಸುತ್ತಾರೆ.

ಅಂದಹಾಗೆ ಮೇಲಿನ ವಿನ್ಯಾಸದಂತೆ ಈ ಏಮ್ಸ್ ಕೊಠಡಿಯನ್ನು ನೀವು ಕಟ್ಟಿಸಬಹುದು, ಅಥವಾ ದೊಡ್ಡದಾದ ಕಾರ್ಡ್‌ಬೋರ್ಡ್‌ಗಳಲ್ಲಿ, ಗೋಡೆ, ಛಾವಣಿ ಮತ್ತು ನೆಲಹಾಸುಗಳನ್ನು ಮಾಡಿ, ಬಣ್ಣ ಬಳಿದು ಏಮ್ಸ್ ಕೊಠಡಿಯನ್ನು ಶಾಲೆ, ಕಾಲೇಜು ಅಥವಾ ಮ್ಯೂಸಿಯಂಗಳಲ್ಲಿ ನಿರ್ಮಿಸಬಹುದು. ಬೆಂಗಳೂರಿನ ಜವಾಹಾರಲಾಲ್ ನೆಹರೂ ತಾರಾಲಯದಲ್ಲಿ ದೊಡ್ಡದಾದ ಏಮ್ಸ್ ಕೊಠಡಿಯನ್ನೇ ನಿರ್ಮಿಸಿದ್ದಾರೆ. ಒಮ್ಮೆ ಅಲ್ಲಿಗೆ ಭೇಟಿ ನೀಡಿದಾಗ, ಖಗೋಳ ಪ್ರದರ್ಶನದ ಜೊತೆಗೆ, ಏಮ್ಸ್ ಕೊಠಡಿ ಒಳಗೂ ಒಂದು ವಾಕ್ ಮಾಡಿ ಬನ್ನಿ.


ಇದನ್ನೂ ಓದಿ: ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...