Homeಮುಖಪುಟಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

ಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

- Advertisement -
- Advertisement -

ಏಮ್ಸ್ ಕೊಠಡಿ ಅಂದ ತಕ್ಷಣ, ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಯಾವುದೋ ಒಂದು ಕೊಠಡಿ ಬಗ್ಗೆ ಇರಬಹುದೇ? ಆ ಕೊಠಡಿ ಒಳಗೆ ಏನಿರಬಹುದು? ಯಾಕಿರಬಹುದು? ಅಂತೆಲ್ಲಾ ಊಹಿಸಿದಿರಾ! ಇದು ದೆಹಲಿಯ ಏಮ್ಸ್ ಕೊಠಡಿಯ ಬಗ್ಗೆ ಅಲ್ಲ. ಆದರೂ ಇದು ಏಮ್ಸ್ ಕೊಠಡಿ!

ಈ ಮೇಲಿನ ಎರಡು ಚಿತ್ರಗಳನ್ನು ಗಮನಿಸಿ. ಏನನ್ನಿಸಿತು? ಚಿತ್ರ (1)ರಲ್ಲಿ ಪುರುಷನು ಮಹಿಳೆಗಿಂತ ಎತ್ತರವಾಗಿದ್ದಾರೆ, ಅದೇ ಚಿತ್ರ (2)ರಲ್ಲಿ ಮಹಿಳೆ ಪುರುಷನಿಗಿಂತ ಎತ್ತರವಾಗಿದ್ದಾರೆ ಅಲ್ಲವೇ? ಆದರೆ, ಚಿತ್ರ (1) ಮತ್ತು (2)ಕ್ಕಿರುವ ಬದಲಾವಣೆಯೆಂದರೆ, ಇಬ್ಬರೂ ತಮ್ಮ ತಮ್ಮ ಸ್ಥಾನಗಳನ್ನು ಬದಲಾಯಿಸಿರುವರು ಅಷ್ಟೇ! ಅದೇ ಕೊಠಡಿ, ಅದೇ ಸ್ಥಳ! ಮತ್ತೊಮ್ಮೆ ಸೂಕ್ಷ್ಮವಾಗಿ ಚಿತ್ರಗಳನ್ನು ಗಮನಿಸಿ.

ಮೇಲಿನ ಚಿತ್ರಗಳಲ್ಲಿರುವ ಕೊಠಡಿಯು ಸಾಮಾನ್ಯ ಕೊಠಡಿಯಂತೆಯೇ ಕಾಣುತ್ತಿದೆ. ಹೇಳಿಕೊಳ್ಳುವಂತಹ ಯಾವ ಬದಲಾವಣೆಗಳೂ ಗೋಚರಿಸುತ್ತಿಲ್ಲ. ಅಲ್ಲದೆ, ವೀಕ್ಷಕರಿಂದ ಇಬ್ಬರೂ ಒಂದೇ ಅಂತರದಲ್ಲಿ ನಿಂತಿದ್ದಾರೆ. ಆದರೆ, ಒಂದು ಬದಿಯಲ್ಲಿ ನಿಂತಿರುವರು ಎತ್ತರವಾಗಿದ್ದಾರೆ. ಅವರೇ ಮತ್ತೊಂದು ಬದಿಗೆ ಹೋದರೆ ಅವರ ಎತ್ತರ ಕಡಿಮೆಯಾಗುತ್ತಿದೆ. ಅವರು ಒಂದು ಬದಿಯಿಂದ ಇನ್ನೊಂದು ಬದಿಗೆ ನಡೆದುಕೊಂಡು ಹೊಗುವ ವಿಡಿಯೋವನ್ನು ನೀವು ನೋಡಿದರೆ, ಎತ್ತರಗಳು ವ್ಯತ್ಯಾಸವಾಗುವುದನ್ನು ಗಮನಿಸಬಹುದು. ವಿಡಿಯೋ ನೋಡಲು QR ಕೋಡ್ ಸ್ಕ್ಯಾನ್ ಮಾಡಿ.

ಅರೆ, ಏನಿದು, ನಮ್ಮ ಕಣ್ಣಿಗೆ ಹೀಗೇಕೆ ಮೋಸವಾಗುತ್ತಿದೆ? ಇಂತಹ ಮೋಸಮಾಡುವ ಪ್ರಕ್ರಿಯೆಗಳನ್ನು ವೈಜ್ಞಾನಿಕವಾಗಿ ಭ್ರಮೆ (Illusion) ಎಂದು ಕರೆಯುತ್ತೇವೆ. ಮೇಲಿನ ಚಿತ್ರದಲ್ಲಿರುವ ಕೊಠಡಿಯು ಸಹ ಅಂತಹ ದೃಷ್ಟಿಭ್ರಮೆಗೆ ಒಂದು ಉದಾಹರಣೆ (Optical Illusion).

ಅಮೆರಿಕಾದ ಅಡೆಲ್ಬರ್ಟ್ ಏಮ್ಸ್ ಎಂಬ ಹೆಸರಿತ ನೇತ್ರ ತಜ್ಞ ಮೊದಲ ಬಾರಿಗೆ ಇಂತಹ ಕೊಠಡಿಯನ್ನು ವಿನ್ಯಾಸ ಮಾಡಿದರು. ಖ್ಯಾತ ಭೌತವಿಜ್ಞಾನಿಯಾದ ಹರ್ಮನ್ ಹೆಲ್ಮೋಲ್ಟ್ಸ್ (Hermann Helmholtz) ಅವರು ಮೊದಲ ಬಾರಿಗೆ ಇಂತಹ ಕೊಠಡಿಯ ಪರಿಕಲ್ಪನೆಯನ್ನು ವಿವರಿಸಿದ್ದರೂ, ಅದನ್ನು ಮೊಟ್ಟಮೊದಲ ಬಾರಿಗೆ ನಿರ್ಮಿಸಿದ್ದು ನೇತ್ರ ತಜ್ಞ ಏಮ್ಸ್. ಈ ಕೊಠಡಿಯಲ್ಲಿನ ವಿಶೇಷವೆಂದರೆ, ವಸ್ತುವು ನೋಡುಗರಿಂದ ಒಂದೇ ದೂರದಲ್ಲಿದ್ದರೂ, ಅದನ್ನು ಒಂದು ಬದಿಯಲ್ಲಿಟ್ಟರೆ ಅದು ದೈತ್ಯವಾಗಿ, ಮತ್ತೊಂದು ಬದಿಯಲ್ಲಿಟ್ಟರೆ ಕುಬ್ಜವಾಗಿರುವಂತೆ ಕಾಣುತ್ತದೆ.

ಏಮ್ಸ್ ಕೊಠಡಿಯ ವಿನ್ಯಾಸ

ಮೇಲಿನ ಚಿತ್ರಗಳು ಏಮ್ಸ್ ಕೊಠಡಿಯ ವಿನ್ಯಾಸದ top view ಮತ್ತು side viewಗಳನ್ನು ತೋರಿಸುತ್ತವೆ. ಸಾಮಾನ್ಯವಾಗಿ ನಾವು ಕೊಠಡಿ ಎಂದಾಕ್ಷಣಾ ಛಾವಣಿ ಮತ್ತು ನೆಲವು ಸಮಾನಾಂತರವಾಗಿದ್ದು, ಗೋಡೆಗಳು ನೇರವಾಗಿರುವಂತೆ ಗ್ರಹಿಸುತ್ತೇವೆ. ಹಾಗೆಯೇ, ಏಮ್ಸ್ ಕೊಠಡಿಯನ್ನು ಹೊರಗಿನಿಂದ ಕಂಡಾಗ, ಇದೇ ರೀತಿ ಗೋಚರಿಸುವಂತೆ ವಿನ್ಯಾಸ ಮಾಡಲಾಗಿರುತ್ತದೆ. ಆ ಕೊಠಡಿಯನ್ನು ಒಂದು ವೀಕ್ಷಣಾ ಕಿಂಡಿಯಿಂದ ಕಂಡಾಗ ಮಾತ್ರ ಅದರ ಮ್ಯಾಜಿಕ್ ಅನಾವರಣಗೊಂಡು ನಮ್ಮನ್ನು ಚಕಿತಗೊಳಿಸುತ್ತದೆ.

ಏಮ್ಸ್ ಕೊಠಡಿ, ಹೊರಗಿನಿಂದ ಸಾಮಾನ್ಯ ಕೊಠಡಿಯಾಗಿದ್ದರೂ, ಅದನ್ನು trapezoidal shapeನಲ್ಲಿ (ವಿಷಮ ಸಮಾನಾಂತರ ಚತುರ್ಭುಜ) ವಿನ್ಯಾಸ ಮಾಡಿರುತ್ತಾರೆ. ಈ ಕೊಠಡಿಯಲ್ಲಿ ಯಾವ ಗೋಡೆಗಳೂ ಸಮಾನಾಂತರವಾಗಿರುವುದಿಲ್ಲ, ಎಲ್ಲವೂ ಒಂದಕ್ಕೊಂದು ಓರೆಯಾಗಿರುತ್ತದೆ. ನೆಲ ಮತ್ತು ಛಾವಣಿಯೂ ಕೂಡ ಸಮಾನಾಂತರವಾಗಿರದೆ, ಛಾವಣಿಯು ಇಳಿಜಾರಾಗಿರುತ್ತದೆ. ಏಮ್ಸ್ ಕೊಠಡಿಯ ಒಳಗೆ ವೀಕ್ಷಿಸಲು ನಿರ್ದಿಷ್ಟ ಜಾಗವನ್ನು ಅಥವಾ ವೀಕ್ಷಣಾ ಕಿಂಡಿಯನ್ನು ಕಲ್ಪಿಸಿರುತ್ತಾರೆ. ಅಲ್ಲಿಂದಲೇ ಒಳಗೆ ನಡೆಯುವ ಕ್ರಿಯೆಯನ್ನು ನೋಡಬೇಕು. ಈ ವೀಕ್ಷಣಾ ಕಿಂಡಿಯಿಂದ ನೋಡಿದಾಗ ಮಾತ್ರ ಒಂದು ಬದಿ ಹತ್ತಿರವಿರುವಂತೆ, ಮತ್ತೊಂದು ಬದಿ ದೂರವಿರುವಂತೆ ಕಾಣುತ್ತದೆ. ಮೇಲಿನ ಚಿತ್ರಗಳಲ್ಲಿ ಅದನ್ನು ನೋಡಬಹುದು. ಆದರೆ, ನೋಡುಗರಿಗೆ ಇದ್ಯಾವುದು ಗೊತ್ತಾಗದ ರೀತಿಯಲ್ಲಿ ಏಮ್ಸ್ ಕೊಠಡಿಯು ಒಳಗೆ ನೆಲ, ಛಾವಣಿ ಮತ್ತು ಗೋಡೆಗಳ ಮೇಲೆ ಚಿತ್ರ ಅಥವಾ ವಿನ್ಯಾಸಗಳನ್ನು ರಚಿಸಲಾಗಿರುತ್ತದೆ. ಈ ಚಿತ್ರಗಳು ಈ ಕೊಠಡಿ ಒಂದು ಸಾಮಾನ್ಯ ಕೊಠಡಿಯಂತೆಯೇ ಇದೆ ಎನ್ನುವ ಭ್ರಮೆಯನ್ನು ನಮ್ಮ ಕಣ್ಣಿನಲ್ಲಿ ಬಿಂಬಿಸುತ್ತಲೇ ಇರುತ್ತದೆ. ಆದರೆ, ಕೊಠಡಿಯೊಳಗೆ ಒಂದು ಬದಿಯಿಂದ ಇನ್ನೊಂದು ಬದಿಗೆ ಯಾರಾದರೂ ನಡೆದರೆ ಅಥವಾ ವಸ್ತುಗಳ ಸ್ಥಾನವನ್ನು ಬದಲಾಯಿಸಿದರೆ, ಅರೆ ಏನಿದು, ಏನಾಯಿತು, ಹೇಗೆ ಆ ವಸ್ತು ಚಿಕ್ಕದಾಯ್ತು, ದೊಡ್ಡದಾಯ್ತು ಎನ್ನುವ ಪ್ರಶ್ನೆಗಳು ಮೂಡುತ್ತವೆ. ಇದೇ ದೃಷ್ಟಿ ಭ್ರಮೆ! ಮನುಷ್ಯನ ಮೆದುಳು ವಸ್ತುವಿನ ಗಾತ್ರವನ್ನು ಹೇಗೆ ಕಂಡುಕೊಳ್ಳುತ್ತದೆ ಎನ್ನುವ ಆಂಶವನ್ನು ತಿಳಿಯಲು ಇಂತಹ ದೃಷ್ಟಿ ಭ್ರಮೆಯ ಪ್ರಯೋಗಗಳನ್ನು ಕೈಗೊಂಡು ಮನಶಾಸ್ತಜ್ಞರು ಅಧ್ಯಯನ ನಡೆಸುತ್ತಾರೆ.

ಅಂದಹಾಗೆ ಮೇಲಿನ ವಿನ್ಯಾಸದಂತೆ ಈ ಏಮ್ಸ್ ಕೊಠಡಿಯನ್ನು ನೀವು ಕಟ್ಟಿಸಬಹುದು, ಅಥವಾ ದೊಡ್ಡದಾದ ಕಾರ್ಡ್‌ಬೋರ್ಡ್‌ಗಳಲ್ಲಿ, ಗೋಡೆ, ಛಾವಣಿ ಮತ್ತು ನೆಲಹಾಸುಗಳನ್ನು ಮಾಡಿ, ಬಣ್ಣ ಬಳಿದು ಏಮ್ಸ್ ಕೊಠಡಿಯನ್ನು ಶಾಲೆ, ಕಾಲೇಜು ಅಥವಾ ಮ್ಯೂಸಿಯಂಗಳಲ್ಲಿ ನಿರ್ಮಿಸಬಹುದು. ಬೆಂಗಳೂರಿನ ಜವಾಹಾರಲಾಲ್ ನೆಹರೂ ತಾರಾಲಯದಲ್ಲಿ ದೊಡ್ಡದಾದ ಏಮ್ಸ್ ಕೊಠಡಿಯನ್ನೇ ನಿರ್ಮಿಸಿದ್ದಾರೆ. ಒಮ್ಮೆ ಅಲ್ಲಿಗೆ ಭೇಟಿ ನೀಡಿದಾಗ, ಖಗೋಳ ಪ್ರದರ್ಶನದ ಜೊತೆಗೆ, ಏಮ್ಸ್ ಕೊಠಡಿ ಒಳಗೂ ಒಂದು ವಾಕ್ ಮಾಡಿ ಬನ್ನಿ.


ಇದನ್ನೂ ಓದಿ: ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...