Homeಮುಖಪುಟಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

ಬೆಳ್ಳಿ ಚುಕ್ಕಿ; ಏಮ್ಸ್ ಕೊಠಡಿ!

- Advertisement -
- Advertisement -

ಏಮ್ಸ್ ಕೊಠಡಿ ಅಂದ ತಕ್ಷಣ, ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯ ಯಾವುದೋ ಒಂದು ಕೊಠಡಿ ಬಗ್ಗೆ ಇರಬಹುದೇ? ಆ ಕೊಠಡಿ ಒಳಗೆ ಏನಿರಬಹುದು? ಯಾಕಿರಬಹುದು? ಅಂತೆಲ್ಲಾ ಊಹಿಸಿದಿರಾ! ಇದು ದೆಹಲಿಯ ಏಮ್ಸ್ ಕೊಠಡಿಯ ಬಗ್ಗೆ ಅಲ್ಲ. ಆದರೂ ಇದು ಏಮ್ಸ್ ಕೊಠಡಿ!

ಈ ಮೇಲಿನ ಎರಡು ಚಿತ್ರಗಳನ್ನು ಗಮನಿಸಿ. ಏನನ್ನಿಸಿತು? ಚಿತ್ರ (1)ರಲ್ಲಿ ಪುರುಷನು ಮಹಿಳೆಗಿಂತ ಎತ್ತರವಾಗಿದ್ದಾರೆ, ಅದೇ ಚಿತ್ರ (2)ರಲ್ಲಿ ಮಹಿಳೆ ಪುರುಷನಿಗಿಂತ ಎತ್ತರವಾಗಿದ್ದಾರೆ ಅಲ್ಲವೇ? ಆದರೆ, ಚಿತ್ರ (1) ಮತ್ತು (2)ಕ್ಕಿರುವ ಬದಲಾವಣೆಯೆಂದರೆ, ಇಬ್ಬರೂ ತಮ್ಮ ತಮ್ಮ ಸ್ಥಾನಗಳನ್ನು ಬದಲಾಯಿಸಿರುವರು ಅಷ್ಟೇ! ಅದೇ ಕೊಠಡಿ, ಅದೇ ಸ್ಥಳ! ಮತ್ತೊಮ್ಮೆ ಸೂಕ್ಷ್ಮವಾಗಿ ಚಿತ್ರಗಳನ್ನು ಗಮನಿಸಿ.

ಮೇಲಿನ ಚಿತ್ರಗಳಲ್ಲಿರುವ ಕೊಠಡಿಯು ಸಾಮಾನ್ಯ ಕೊಠಡಿಯಂತೆಯೇ ಕಾಣುತ್ತಿದೆ. ಹೇಳಿಕೊಳ್ಳುವಂತಹ ಯಾವ ಬದಲಾವಣೆಗಳೂ ಗೋಚರಿಸುತ್ತಿಲ್ಲ. ಅಲ್ಲದೆ, ವೀಕ್ಷಕರಿಂದ ಇಬ್ಬರೂ ಒಂದೇ ಅಂತರದಲ್ಲಿ ನಿಂತಿದ್ದಾರೆ. ಆದರೆ, ಒಂದು ಬದಿಯಲ್ಲಿ ನಿಂತಿರುವರು ಎತ್ತರವಾಗಿದ್ದಾರೆ. ಅವರೇ ಮತ್ತೊಂದು ಬದಿಗೆ ಹೋದರೆ ಅವರ ಎತ್ತರ ಕಡಿಮೆಯಾಗುತ್ತಿದೆ. ಅವರು ಒಂದು ಬದಿಯಿಂದ ಇನ್ನೊಂದು ಬದಿಗೆ ನಡೆದುಕೊಂಡು ಹೊಗುವ ವಿಡಿಯೋವನ್ನು ನೀವು ನೋಡಿದರೆ, ಎತ್ತರಗಳು ವ್ಯತ್ಯಾಸವಾಗುವುದನ್ನು ಗಮನಿಸಬಹುದು. ವಿಡಿಯೋ ನೋಡಲು QR ಕೋಡ್ ಸ್ಕ್ಯಾನ್ ಮಾಡಿ.

ಅರೆ, ಏನಿದು, ನಮ್ಮ ಕಣ್ಣಿಗೆ ಹೀಗೇಕೆ ಮೋಸವಾಗುತ್ತಿದೆ? ಇಂತಹ ಮೋಸಮಾಡುವ ಪ್ರಕ್ರಿಯೆಗಳನ್ನು ವೈಜ್ಞಾನಿಕವಾಗಿ ಭ್ರಮೆ (Illusion) ಎಂದು ಕರೆಯುತ್ತೇವೆ. ಮೇಲಿನ ಚಿತ್ರದಲ್ಲಿರುವ ಕೊಠಡಿಯು ಸಹ ಅಂತಹ ದೃಷ್ಟಿಭ್ರಮೆಗೆ ಒಂದು ಉದಾಹರಣೆ (Optical Illusion).

ಅಮೆರಿಕಾದ ಅಡೆಲ್ಬರ್ಟ್ ಏಮ್ಸ್ ಎಂಬ ಹೆಸರಿತ ನೇತ್ರ ತಜ್ಞ ಮೊದಲ ಬಾರಿಗೆ ಇಂತಹ ಕೊಠಡಿಯನ್ನು ವಿನ್ಯಾಸ ಮಾಡಿದರು. ಖ್ಯಾತ ಭೌತವಿಜ್ಞಾನಿಯಾದ ಹರ್ಮನ್ ಹೆಲ್ಮೋಲ್ಟ್ಸ್ (Hermann Helmholtz) ಅವರು ಮೊದಲ ಬಾರಿಗೆ ಇಂತಹ ಕೊಠಡಿಯ ಪರಿಕಲ್ಪನೆಯನ್ನು ವಿವರಿಸಿದ್ದರೂ, ಅದನ್ನು ಮೊಟ್ಟಮೊದಲ ಬಾರಿಗೆ ನಿರ್ಮಿಸಿದ್ದು ನೇತ್ರ ತಜ್ಞ ಏಮ್ಸ್. ಈ ಕೊಠಡಿಯಲ್ಲಿನ ವಿಶೇಷವೆಂದರೆ, ವಸ್ತುವು ನೋಡುಗರಿಂದ ಒಂದೇ ದೂರದಲ್ಲಿದ್ದರೂ, ಅದನ್ನು ಒಂದು ಬದಿಯಲ್ಲಿಟ್ಟರೆ ಅದು ದೈತ್ಯವಾಗಿ, ಮತ್ತೊಂದು ಬದಿಯಲ್ಲಿಟ್ಟರೆ ಕುಬ್ಜವಾಗಿರುವಂತೆ ಕಾಣುತ್ತದೆ.

ಏಮ್ಸ್ ಕೊಠಡಿಯ ವಿನ್ಯಾಸ

ಮೇಲಿನ ಚಿತ್ರಗಳು ಏಮ್ಸ್ ಕೊಠಡಿಯ ವಿನ್ಯಾಸದ top view ಮತ್ತು side viewಗಳನ್ನು ತೋರಿಸುತ್ತವೆ. ಸಾಮಾನ್ಯವಾಗಿ ನಾವು ಕೊಠಡಿ ಎಂದಾಕ್ಷಣಾ ಛಾವಣಿ ಮತ್ತು ನೆಲವು ಸಮಾನಾಂತರವಾಗಿದ್ದು, ಗೋಡೆಗಳು ನೇರವಾಗಿರುವಂತೆ ಗ್ರಹಿಸುತ್ತೇವೆ. ಹಾಗೆಯೇ, ಏಮ್ಸ್ ಕೊಠಡಿಯನ್ನು ಹೊರಗಿನಿಂದ ಕಂಡಾಗ, ಇದೇ ರೀತಿ ಗೋಚರಿಸುವಂತೆ ವಿನ್ಯಾಸ ಮಾಡಲಾಗಿರುತ್ತದೆ. ಆ ಕೊಠಡಿಯನ್ನು ಒಂದು ವೀಕ್ಷಣಾ ಕಿಂಡಿಯಿಂದ ಕಂಡಾಗ ಮಾತ್ರ ಅದರ ಮ್ಯಾಜಿಕ್ ಅನಾವರಣಗೊಂಡು ನಮ್ಮನ್ನು ಚಕಿತಗೊಳಿಸುತ್ತದೆ.

ಏಮ್ಸ್ ಕೊಠಡಿ, ಹೊರಗಿನಿಂದ ಸಾಮಾನ್ಯ ಕೊಠಡಿಯಾಗಿದ್ದರೂ, ಅದನ್ನು trapezoidal shapeನಲ್ಲಿ (ವಿಷಮ ಸಮಾನಾಂತರ ಚತುರ್ಭುಜ) ವಿನ್ಯಾಸ ಮಾಡಿರುತ್ತಾರೆ. ಈ ಕೊಠಡಿಯಲ್ಲಿ ಯಾವ ಗೋಡೆಗಳೂ ಸಮಾನಾಂತರವಾಗಿರುವುದಿಲ್ಲ, ಎಲ್ಲವೂ ಒಂದಕ್ಕೊಂದು ಓರೆಯಾಗಿರುತ್ತದೆ. ನೆಲ ಮತ್ತು ಛಾವಣಿಯೂ ಕೂಡ ಸಮಾನಾಂತರವಾಗಿರದೆ, ಛಾವಣಿಯು ಇಳಿಜಾರಾಗಿರುತ್ತದೆ. ಏಮ್ಸ್ ಕೊಠಡಿಯ ಒಳಗೆ ವೀಕ್ಷಿಸಲು ನಿರ್ದಿಷ್ಟ ಜಾಗವನ್ನು ಅಥವಾ ವೀಕ್ಷಣಾ ಕಿಂಡಿಯನ್ನು ಕಲ್ಪಿಸಿರುತ್ತಾರೆ. ಅಲ್ಲಿಂದಲೇ ಒಳಗೆ ನಡೆಯುವ ಕ್ರಿಯೆಯನ್ನು ನೋಡಬೇಕು. ಈ ವೀಕ್ಷಣಾ ಕಿಂಡಿಯಿಂದ ನೋಡಿದಾಗ ಮಾತ್ರ ಒಂದು ಬದಿ ಹತ್ತಿರವಿರುವಂತೆ, ಮತ್ತೊಂದು ಬದಿ ದೂರವಿರುವಂತೆ ಕಾಣುತ್ತದೆ. ಮೇಲಿನ ಚಿತ್ರಗಳಲ್ಲಿ ಅದನ್ನು ನೋಡಬಹುದು. ಆದರೆ, ನೋಡುಗರಿಗೆ ಇದ್ಯಾವುದು ಗೊತ್ತಾಗದ ರೀತಿಯಲ್ಲಿ ಏಮ್ಸ್ ಕೊಠಡಿಯು ಒಳಗೆ ನೆಲ, ಛಾವಣಿ ಮತ್ತು ಗೋಡೆಗಳ ಮೇಲೆ ಚಿತ್ರ ಅಥವಾ ವಿನ್ಯಾಸಗಳನ್ನು ರಚಿಸಲಾಗಿರುತ್ತದೆ. ಈ ಚಿತ್ರಗಳು ಈ ಕೊಠಡಿ ಒಂದು ಸಾಮಾನ್ಯ ಕೊಠಡಿಯಂತೆಯೇ ಇದೆ ಎನ್ನುವ ಭ್ರಮೆಯನ್ನು ನಮ್ಮ ಕಣ್ಣಿನಲ್ಲಿ ಬಿಂಬಿಸುತ್ತಲೇ ಇರುತ್ತದೆ. ಆದರೆ, ಕೊಠಡಿಯೊಳಗೆ ಒಂದು ಬದಿಯಿಂದ ಇನ್ನೊಂದು ಬದಿಗೆ ಯಾರಾದರೂ ನಡೆದರೆ ಅಥವಾ ವಸ್ತುಗಳ ಸ್ಥಾನವನ್ನು ಬದಲಾಯಿಸಿದರೆ, ಅರೆ ಏನಿದು, ಏನಾಯಿತು, ಹೇಗೆ ಆ ವಸ್ತು ಚಿಕ್ಕದಾಯ್ತು, ದೊಡ್ಡದಾಯ್ತು ಎನ್ನುವ ಪ್ರಶ್ನೆಗಳು ಮೂಡುತ್ತವೆ. ಇದೇ ದೃಷ್ಟಿ ಭ್ರಮೆ! ಮನುಷ್ಯನ ಮೆದುಳು ವಸ್ತುವಿನ ಗಾತ್ರವನ್ನು ಹೇಗೆ ಕಂಡುಕೊಳ್ಳುತ್ತದೆ ಎನ್ನುವ ಆಂಶವನ್ನು ತಿಳಿಯಲು ಇಂತಹ ದೃಷ್ಟಿ ಭ್ರಮೆಯ ಪ್ರಯೋಗಗಳನ್ನು ಕೈಗೊಂಡು ಮನಶಾಸ್ತಜ್ಞರು ಅಧ್ಯಯನ ನಡೆಸುತ್ತಾರೆ.

ಅಂದಹಾಗೆ ಮೇಲಿನ ವಿನ್ಯಾಸದಂತೆ ಈ ಏಮ್ಸ್ ಕೊಠಡಿಯನ್ನು ನೀವು ಕಟ್ಟಿಸಬಹುದು, ಅಥವಾ ದೊಡ್ಡದಾದ ಕಾರ್ಡ್‌ಬೋರ್ಡ್‌ಗಳಲ್ಲಿ, ಗೋಡೆ, ಛಾವಣಿ ಮತ್ತು ನೆಲಹಾಸುಗಳನ್ನು ಮಾಡಿ, ಬಣ್ಣ ಬಳಿದು ಏಮ್ಸ್ ಕೊಠಡಿಯನ್ನು ಶಾಲೆ, ಕಾಲೇಜು ಅಥವಾ ಮ್ಯೂಸಿಯಂಗಳಲ್ಲಿ ನಿರ್ಮಿಸಬಹುದು. ಬೆಂಗಳೂರಿನ ಜವಾಹಾರಲಾಲ್ ನೆಹರೂ ತಾರಾಲಯದಲ್ಲಿ ದೊಡ್ಡದಾದ ಏಮ್ಸ್ ಕೊಠಡಿಯನ್ನೇ ನಿರ್ಮಿಸಿದ್ದಾರೆ. ಒಮ್ಮೆ ಅಲ್ಲಿಗೆ ಭೇಟಿ ನೀಡಿದಾಗ, ಖಗೋಳ ಪ್ರದರ್ಶನದ ಜೊತೆಗೆ, ಏಮ್ಸ್ ಕೊಠಡಿ ಒಳಗೂ ಒಂದು ವಾಕ್ ಮಾಡಿ ಬನ್ನಿ.


ಇದನ್ನೂ ಓದಿ: ಐದು ಶತಮಾನಗಳಲ್ಲೇ ಅತ್ಯಂತ ದೀರ್ಘವಾದ ಭಾಗಶಃ ಚಂದ್ರ ಗ್ರಹಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...