Homeಅಂತರಾಷ್ಟ್ರೀಯಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ...

ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

- Advertisement -
- Advertisement -

| ಸಂಪಾದಕೀಯ |

ಜಗತ್ತಿನ ಒಟ್ಟು ಶುದ್ಧ ಕುಡಿಯುವ ನೀರಿನಲ್ಲಿ ಐದನೇ ಒಂದು ಭಾಗವನ್ನು ಪೂರೈಸುವ ಅಮೆಜಾನ್ (ನದಿ ಮತ್ತು ಕಾಡು)ಗೆ ಬೆಂಕಿ ಬಿದ್ದಿದೆ. ಕಳೆದ ತಿಂಗಳೊಂದರಲ್ಲೇ 26,000 ಕಡೆ ಬೆಂಕಿ ಬಿದ್ದಿದೆ. ವರ್ಷದ ಆರಂಭದಿಂದ ಲೆಕ್ಕಕ್ಕೆ ತೆಗೆದುಕೊಂಡರೆ 80,000 ಕಡೆ ಕಾಡಿಗೆ ಬೆಂಕಿ ಬಿದ್ದಿದೆ. ಇದು ಬಿದ್ದ ಬೆಂಕಿ ಅಲ್ಲ, ಹಚ್ಚಿದ ಬೆಂಕಿ ಮತ್ತು ಇದಕ್ಕೆ ಆ ದೇಶದ ಮುಖ್ಯಸ್ಥರ ಬೆಂಬಲವಿದೆ ಎಂಬುದೇ ಕಳವಳದ ಸಂಗತಿ. ಆ ದೇಶದ ಮುಖ್ಯಸ್ಥರ ಬೆಂಬಲವಷ್ಟೇ ಅಲ್ಲದೇ ಅಮೆರಿಕಾದ ಕೃಷಿ ವ್ಯವಹಾರಸ್ಥರ ಬೆಂಬಲವೂ ಇದೆ ಎಂದು ಹೇಳಲಾಗುತ್ತಿದೆ. ಬ್ರೆಜಿಲ್‍ನ ಈಗಿನ ಅಧ್ಯಕ್ಷ ಬೊಲ್ಸೆನಾರೋ ಚುನಾವಣೆಗೆ ಸ್ಪರ್ಧಿಸಿದ್ದಾಗ ನೀಡಿದ್ದ ಚುನಾವಣಾ ಭರವಸೆಯಲ್ಲೇ ಅಮೆಜಾನ್ ಕಾಡನ್ನು ರಕ್ಷಿಸುವ ಕಾಯ್ದೆಗಳನ್ನು ಸಡಿಲಿಸುವುದೂ ಸೇರಿತ್ತು.

ಆ ದೇಶದಲ್ಲಿ ಕಾಡೆಷ್ಟಿರಬೇಕು, ಅಲ್ಲಿ ವ್ಯವಸಾಯ ಮಾಡಲು ಬಯಸುವವರಿಗೆ ಭೂಮಿ ಒದಗಿಸಲು ಯಾವ ರೀತಿಯ ನೀತಿಯಿರಬೇಕು ಎಂಬುದನ್ನು ಅವರು ತಾನೇ ನಿರ್ಧರಿಸಬೇಕು? ಅದೇ ಮಾತನ್ನು ಬೊಲ್ಸೆನಾರೋ ಹೇಳುತ್ತಿರುವುದು. ಈ ಬೆಂಕಿಯನ್ನು ನಂದಿಸಿ ಕಾಡನ್ನು ರಕ್ಷಿಸಲು 20 ಮಿಲಿಯನ್ ಡಾಲರ್ ಕೊಡುತ್ತೇವೆಂದು ಜಿ 7 ರಾಷ್ಟ್ರಗಳ ಶೃಂಗಸಭೆ ಹೇಳಿದಾಗ, ‘ಅದರ ಅಗತ್ಯವಿಲ್ಲ. ಇದು ನಮ್ಮ ಆಂತರಿಕ ವಿಚಾರ’ ಎಂದು ಬೋಲ್ಸೆನಾರೋ ಹೇಳಿಯಾಗಿದೆ.

ಆ ದೇಶದಲ್ಲಿ ಪರಿಸರ ಪ್ರೇಮಿಗಳು ಮತ್ತು ‘ರೈತ ನಾಯಕರು ಹಾಗೂ ಉದ್ದಿಮೆದಾರರ’ ನಡುವೆ ಈ ಕುರಿತು ಒಮ್ಮತವಿಲ್ಲ. ಪರಿಸರವಾದಿಗಳು ಕಾಡನ್ನುಳಿಸೋಣ ಎಂದರೆ, ನಮ್ಮ ಜೀವನಕ್ಕೆ ಕಲ್ಲು ಹಾಕಲು ಬರಬೇಡಿ ಎಂದು ಇನ್ನೊಂದು ಪಕ್ಷ ಹೇಳುತ್ತಿದೆ. ‘ಅಮೆಜಾನ್ ಉಳಿಸಿ’ ಎಂಬ ಕೂಗನ್ನು ಬ್ರೆಜಿಲ್ಲೇತರ ಜನರು ಹೇಳಿದಾಗಲೆಲ್ಲಾ ಅಲ್ಲಿ ತಲ್ಲಣವುಂಟಾಗುತ್ತದೆ. ‘ನಮ್ಮ ದೇಶದ ಕಾಡಿನ ಮೇಲೆ ಅಧಿಕಾರ ಚಲಾಯಿಸಲು ಅವರ್ಯಾರು’ ಎಂಬ ಕೂಗು ಹಾಕುತ್ತಾರೆ. ‘ಇದೊಂಥರಾ ವಸಾಹತುಶಾಹಿ ಮನಸ್ಥಿತಿ. ತಮ್ಮ ದೇಶಗಳ ಪರಿಸರವನ್ನು ಪೂರಾ ಹಾಳುಗೆಡವಿಕೊಂಡಿರುವ ಇವರು, ಮಾಜಿ ವಸಾಹತುಗಳಾದ ನಮ್ಮ ಪರಿಸರವನ್ನು ಉಳಿಸಲು ಕರೆ ಕೊಡುವುದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ’ ಎಂದು ಅವರು ಹೇಳುತ್ತಾರೆ.

ಅಮೆಜಾನ್‍ಗೆ ಬೆಂಕಿ ಹಚ್ಚಿ ಅಮೂಲ್ಯವಾದ ಕಾಡನ್ನು ಹಾಳು ಮಾಡುತ್ತಿರುವುದಲ್ಲದೇ, ಅದನ್ನು ರಕ್ಷಿಸಲೂ ಮುಂದಾಗದ ಬ್ರೆಜಿಲ್‍ನ ಸರ್ಕಾರವನ್ನು ಮಣಿಸಲು ‘ಬ್ರೆಜಿಲ್ ಸರಕುಗಳನ್ನು ಬಹಿಷ್ಕರಿಸಿ, ಅಮೆಜಾನ್ ಉಳಿಸಿ’ ಎಂಬ ಘೋಷಣೆಯಡಿ ಒಂದು ರೀತಿಯ ಆಂದೋಲನಕ್ಕೂ ಕರೆ ನೀಡಲಾಗಿದೆ. ಹಾಗಾದರೆ, ಅಲ್ಲಿಂದ ಬಹುದೂರದಲ್ಲಿರುವ ಇನ್ನೊಂದು ಮಾಜಿ ವಸಾಹತಾದ ಭಾರತದ ನಾವು ತೆಗೆದುಕೊಳ್ಳಬೇಕಾದ ನಿಲುವೇನು?

ನಮ್ಮೂರಿನ ನೀರನ್ನು ಹೇಗೆ ಬಳಸಬೇಕು, ಈ ನೆಲ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಬೇರ್ಯಾರೋ ದೊಣ್ಣೆನಾಯಕ ಹೇಳಬೇಕಿಲ್ಲ ಎಂಬುದೇನೋ ಸರಿ. ಆದರೆ, ಇನ್ಯಾರೋ ಕಾಳಜಿಯಿಂದ ಹೇಳುತ್ತಿರುವುದರಲ್ಲಿ ಅವರ ಹಿತಾಸಕ್ತಿ ಮಾತ್ರವಲ್ಲದೇ ನಮ್ಮ ಉಳಿವಿನ ಪ್ರಶ್ನೆಯೂ ಇದ್ದರೇ? ಇದು ಕೇವಲ ಇಷ್ಟೇ ಆಗಿಲ್ಲ. ವಾಸ್ತವವೇನೆಂದರೆ, ಬ್ರೆಜಿಲ್‍ನಲ್ಲಿ ಭೂರಹಿತರು ಉಳುಮೆ ಮಾಡಲು ಭೂಮಿಯಿಲ್ಲದೇ ಕಾಡನ್ನು ಸುಡುತ್ತಿರುವ ಸಂಗತಿ ಇದಾಗಿಲ್ಲ. ಎಲ್ಲೋ ಕೆಲವೆಡೆ ಅದೂ ಇರಬಹುದಾದರೂ, ಭಾರೀ ಪ್ರಮಾಣದಲ್ಲಿ ಕಾಡಿನ ನಾಶಕ್ಕೆ ಮುಂದಾಗಿರುವುದು ಯುಎಸ್‍ಎ (ಅಮೆರಿಕದ)ನ ದೊಡ್ಡ ಕಂಪೆನಿಗಳ ಹಿತಾಸಕ್ತಿಯನ್ನು ಕಾಯಲು. ದೊಡ್ಡ ಪ್ರಮಾಣದ ಉಳುಮೆ ಭೂಮಿಯನ್ನು ಬೀಳು ಬಿಟ್ಟಿರುವ ದೊಡ್ಡ ದೊಡ್ಡ ಭೂಮಾಲೀಕರು, ಕಂಪೆನಿಗಳು ಆ ದೇಶದಲ್ಲಿವೆ. ಅಂತಹ ಭೂಮಿಗೆ ಲಗ್ಗೆ ಹಾಕಿ, ಅಲ್ಲಿ ಬೆಳೆ ಬೆಳೆದು ತಮ್ಮದಾಗಿಸಿಕೊಳ್ಳುವ ಒಂದು ಮಹತ್ವದ ಚಳವಳಿ ಬ್ರೆಜಿಲ್‍ನಲ್ಲಿದೆ. ಎಂಎಸ್‍ಟಿ ಎಂಬ ಈ ಭೂರಹಿತರ ಸಂಘಟನೆಯ ಹೋರಾಟದ ಕಾರಣಕ್ಕೆ, ಅಂತಹ ಭೂಮಿಯನ್ನು ಆ ಭೂರಹಿತರಿಗೇ ಕಾನೂನುಬದ್ಧವಾಗಿ ನೀಡುವ ನೀತಿಯೂ ಜಾರಿಗೆ ಬಂದಿದೆ.

ಈ ಕೆಳಗಿನ ಅಂಕಿ-ಅಂಶಗಳನ್ನು ನೋಡಿದರೆ ಅಸಲೀ ಸಂಗತಿ ಸ್ಪಷ್ಟವಾಗುತ್ತದೆ. 21.12 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‍ನ ವಿಸ್ತಾರ 8.510 ಮಿಲಿಯನ್ ಚದರ ಕಿ.ಮೀ. 136.87 ಕೋಟಿ ಜನಸಂಖ್ಯೆಯುಳ್ಳ ಭಾರತದ ವಿಸ್ತಾರ 3.287 ಮಿಲಿಯನ್ ಚದರ ಕಿ.ಮೀ ಆಗಿದೆ. ಇದರ ಮಧ್ಯೆಯೂ ಕೃಷಿ ಪ್ರಧಾನವಾದ ದೇಶವೊಂದು ತಾನು ಹೆಚ್ಚಿನ ಪ್ರಮಾಣದ ಭೂಮಿಯನ್ನು ಕೃಷಿಗೆ ತೊಡಗಿಸುತ್ತೇನೆಂದು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತದೆ. ಆದರೆ ಇಲ್ಲಿ ಅಮೆರಿಕಾದ ಹಿತಾಸಕ್ತಿಗೆ ತಕ್ಕಂತೆ ಕುಣಿಯುತ್ತಿರುವ ಮತ್ತು ತನ್ನ ದೇಶದ ಜನರ ಹಿತಾಸಕ್ತಿಗೆ ವಿರುದ್ಧವಾಗಿಯೂ ವರ್ತಿಸುತ್ತಿರುವ ಅಧ್ಯಕ್ಷ ಮತ್ತು ಆತನ ಪಕ್ಷವು ನಾಶಕ್ಕೆ ಮುಂದಾಗಿದೆ.

ಆ ದೇಶದಲ್ಲಿ ಬೀಳುಬಿದ್ದಿರುವ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಜನರಿಗೆ ಹಂಚಲು ಯಾವ ಆಸಕ್ತಿ ಹೊಂದಿಲ್ಲದ ಸರ್ಕಾರ ಅದಾಗಿದೆ. ಭಾರತದಲ್ಲಿ ಮೋದಿ ಹೇಗೋ ಹಾಗೆಯೇ ಈ ಬೊಲ್ಸೆನಾರೋ ಸಹಾ ಭಾರೀ ಜನಬೆಂಬಲದೊಂದಿಗೆ ಗೆದ್ದು ಬಂದಿರುವುದು. ಹೀಗಾಗಿ ಪರಿಸ್ಥಿತಿ ಕ್ಲಿಷ್ಟವೂ, ಅಪಾಯಕಾರಿಯೂ ಆಗಿದೆ.

ಇಂತಹ ಸಂದರ್ಭದಲ್ಲಿ ಬ್ರೆಜಿಲ್ ಒಳಗಿನ ವಿವೇಕದ ದನಿಗಳಿಗೆ, ಎಂಎಸ್‍ಟಿಯಂತಹ ಸಂಘಟನೆಗಳು ಹೇಳುವ ಸಂಗತಿಗಳಿಗೆ ನಮ್ಮ ಬೆಂಬಲ ಕೊಡುವುದು ಜಗತ್ತಿನ ಎಲ್ಲರ ಕರ್ತವ್ಯವಾಗಿದೆ. ಏಕೆಂದರೆ, ಸದರಿ ಅಮೆಜಾನ್ ಕಾಡುಗಳಲ್ಲಿನ ಆದಿವಾಸಿಗಳನ್ನು ಅಲ್ಲಿಂದ ಒದ್ದೋಡಿಸಿ, ಕಾಡನ್ನು ವಶಪಡಿಸಿಕೊಳ್ಳಬೇಕು ಎಂದು ಬಹಿರಂಗವಾಗಿ ಘೋಷಿಸಿದ್ದ ವ್ಯಕ್ತಿ ಬೊಲ್ಸೆನಾರೋ; ಇದೇ ವ್ಯಕ್ತಿ ಪಾರ್ಲಿಮೆಂಟಿನಲ್ಲೇ ಈ ಹಿಂದೆ ಜನಸಾಮಾನ್ಯರ ಪರವಾಗಿ ದನಿಯೆತ್ತಿದ್ದ ಸಂಸದೆಯೊಬ್ಬರಿಗೆ ‘ನಿನ್ನನ್ನು ನಾನು ರೇಪ್ ಮಾಡುವುದೂ ಇಲ್ಲ. ಅದಕ್ಕೂ ನೀನು ಅರ್ಹಳಲ್ಲ’ ಎಂದು ಹೇಳಿದ್ದನಲ್ಲದೇ, ಸ್ವತಃ ತನ್ನ ಬಗ್ಗೆಯೇ ‘ನನಗೆ ಐದು ಮಕ್ಕಳು. ಮೊದಲ ನಾಲ್ವರು ಹುಡುಗರು. ನಂತರ ನಾನು ದುರ್ಬಲನಾದೆ. ಹಾಗಾಗಿ ಮಗಳು ಜನಿಸಿದಳು’ ಎಂದಿದ್ದ.

ಈ ಪ್ರಕರಣದಲ್ಲೂ ಫ್ರೆಂಚ್ ಅಧ್ಯಕ್ಷ ಮ್ಯಾಕ್ರೋನ್ ಅಮೆಜಾನ್ ಕಾಡಿನ ಕುರಿತು ಕಾಳಜಿ ವ್ಯಕ್ತಪಡಿಸಿದಾಗ, ಮ್ಯಾಕ್ರೋನ್ ಪತ್ನಿಯ ಕುರಿತು ಕೀಳು ಅಭಿರುಚಿಯ ಟ್ವಿಟ್ಟರ್ ಕಾಮೆಂಟ್ ಮಾಡಿದ್ದು ಇದೇ ಬ್ರೆಜಿಲ್ ಅಧ್ಯಕ್ಷ. ಬಡವರು, ದುರ್ಬಲರು, ಕಪ್ಪುವರ್ಣೀಯರು, ಆದಿವಾಸಿಗಳು, ಮಹಿಳೆಯರ ಕುರಿತಾಗಿ ಈತನ ದ್ವೇಷಪೂರಿತ ಮನೋಭಾವವೇ ಪರಿಸರದ ಕುರಿತೂ ವ್ಯಕ್ತವಾಗುತ್ತಿದೆ. ಜಗತ್ತಿನೆಲ್ಲೆಡೆ ಮನುಷ್ಯ ಕುಲದ ವಿನಾಶಕ್ಕೆ ನಿಂತಿರುವ ಬೊಲ್ಸೆನಾರೋಗಳ ವಿರುದ್ಧ ಜಗತ್ತಿನೆಲ್ಲೆಡೆಯ ಜನರೂ ಒಂದಾಗಿ ದನಿಯೆತ್ತಬೇಕಾದ ದಿನಗಳು ಬಂದಿವೆ. ಅಮೆಜಾನ್‍ಗೆ ಬಿದ್ದಿರುವ ಬೆಂಕಿ ಭಾರತವನ್ನೂ ಸುಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...