Homeಅಂತರಾಷ್ಟ್ರೀಯಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ...

ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

- Advertisement -
- Advertisement -

| ಸಂಪಾದಕೀಯ |

ಜಗತ್ತಿನ ಒಟ್ಟು ಶುದ್ಧ ಕುಡಿಯುವ ನೀರಿನಲ್ಲಿ ಐದನೇ ಒಂದು ಭಾಗವನ್ನು ಪೂರೈಸುವ ಅಮೆಜಾನ್ (ನದಿ ಮತ್ತು ಕಾಡು)ಗೆ ಬೆಂಕಿ ಬಿದ್ದಿದೆ. ಕಳೆದ ತಿಂಗಳೊಂದರಲ್ಲೇ 26,000 ಕಡೆ ಬೆಂಕಿ ಬಿದ್ದಿದೆ. ವರ್ಷದ ಆರಂಭದಿಂದ ಲೆಕ್ಕಕ್ಕೆ ತೆಗೆದುಕೊಂಡರೆ 80,000 ಕಡೆ ಕಾಡಿಗೆ ಬೆಂಕಿ ಬಿದ್ದಿದೆ. ಇದು ಬಿದ್ದ ಬೆಂಕಿ ಅಲ್ಲ, ಹಚ್ಚಿದ ಬೆಂಕಿ ಮತ್ತು ಇದಕ್ಕೆ ಆ ದೇಶದ ಮುಖ್ಯಸ್ಥರ ಬೆಂಬಲವಿದೆ ಎಂಬುದೇ ಕಳವಳದ ಸಂಗತಿ. ಆ ದೇಶದ ಮುಖ್ಯಸ್ಥರ ಬೆಂಬಲವಷ್ಟೇ ಅಲ್ಲದೇ ಅಮೆರಿಕಾದ ಕೃಷಿ ವ್ಯವಹಾರಸ್ಥರ ಬೆಂಬಲವೂ ಇದೆ ಎಂದು ಹೇಳಲಾಗುತ್ತಿದೆ. ಬ್ರೆಜಿಲ್‍ನ ಈಗಿನ ಅಧ್ಯಕ್ಷ ಬೊಲ್ಸೆನಾರೋ ಚುನಾವಣೆಗೆ ಸ್ಪರ್ಧಿಸಿದ್ದಾಗ ನೀಡಿದ್ದ ಚುನಾವಣಾ ಭರವಸೆಯಲ್ಲೇ ಅಮೆಜಾನ್ ಕಾಡನ್ನು ರಕ್ಷಿಸುವ ಕಾಯ್ದೆಗಳನ್ನು ಸಡಿಲಿಸುವುದೂ ಸೇರಿತ್ತು.

ಆ ದೇಶದಲ್ಲಿ ಕಾಡೆಷ್ಟಿರಬೇಕು, ಅಲ್ಲಿ ವ್ಯವಸಾಯ ಮಾಡಲು ಬಯಸುವವರಿಗೆ ಭೂಮಿ ಒದಗಿಸಲು ಯಾವ ರೀತಿಯ ನೀತಿಯಿರಬೇಕು ಎಂಬುದನ್ನು ಅವರು ತಾನೇ ನಿರ್ಧರಿಸಬೇಕು? ಅದೇ ಮಾತನ್ನು ಬೊಲ್ಸೆನಾರೋ ಹೇಳುತ್ತಿರುವುದು. ಈ ಬೆಂಕಿಯನ್ನು ನಂದಿಸಿ ಕಾಡನ್ನು ರಕ್ಷಿಸಲು 20 ಮಿಲಿಯನ್ ಡಾಲರ್ ಕೊಡುತ್ತೇವೆಂದು ಜಿ 7 ರಾಷ್ಟ್ರಗಳ ಶೃಂಗಸಭೆ ಹೇಳಿದಾಗ, ‘ಅದರ ಅಗತ್ಯವಿಲ್ಲ. ಇದು ನಮ್ಮ ಆಂತರಿಕ ವಿಚಾರ’ ಎಂದು ಬೋಲ್ಸೆನಾರೋ ಹೇಳಿಯಾಗಿದೆ.

ಆ ದೇಶದಲ್ಲಿ ಪರಿಸರ ಪ್ರೇಮಿಗಳು ಮತ್ತು ‘ರೈತ ನಾಯಕರು ಹಾಗೂ ಉದ್ದಿಮೆದಾರರ’ ನಡುವೆ ಈ ಕುರಿತು ಒಮ್ಮತವಿಲ್ಲ. ಪರಿಸರವಾದಿಗಳು ಕಾಡನ್ನುಳಿಸೋಣ ಎಂದರೆ, ನಮ್ಮ ಜೀವನಕ್ಕೆ ಕಲ್ಲು ಹಾಕಲು ಬರಬೇಡಿ ಎಂದು ಇನ್ನೊಂದು ಪಕ್ಷ ಹೇಳುತ್ತಿದೆ. ‘ಅಮೆಜಾನ್ ಉಳಿಸಿ’ ಎಂಬ ಕೂಗನ್ನು ಬ್ರೆಜಿಲ್ಲೇತರ ಜನರು ಹೇಳಿದಾಗಲೆಲ್ಲಾ ಅಲ್ಲಿ ತಲ್ಲಣವುಂಟಾಗುತ್ತದೆ. ‘ನಮ್ಮ ದೇಶದ ಕಾಡಿನ ಮೇಲೆ ಅಧಿಕಾರ ಚಲಾಯಿಸಲು ಅವರ್ಯಾರು’ ಎಂಬ ಕೂಗು ಹಾಕುತ್ತಾರೆ. ‘ಇದೊಂಥರಾ ವಸಾಹತುಶಾಹಿ ಮನಸ್ಥಿತಿ. ತಮ್ಮ ದೇಶಗಳ ಪರಿಸರವನ್ನು ಪೂರಾ ಹಾಳುಗೆಡವಿಕೊಂಡಿರುವ ಇವರು, ಮಾಜಿ ವಸಾಹತುಗಳಾದ ನಮ್ಮ ಪರಿಸರವನ್ನು ಉಳಿಸಲು ಕರೆ ಕೊಡುವುದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ’ ಎಂದು ಅವರು ಹೇಳುತ್ತಾರೆ.

ಅಮೆಜಾನ್‍ಗೆ ಬೆಂಕಿ ಹಚ್ಚಿ ಅಮೂಲ್ಯವಾದ ಕಾಡನ್ನು ಹಾಳು ಮಾಡುತ್ತಿರುವುದಲ್ಲದೇ, ಅದನ್ನು ರಕ್ಷಿಸಲೂ ಮುಂದಾಗದ ಬ್ರೆಜಿಲ್‍ನ ಸರ್ಕಾರವನ್ನು ಮಣಿಸಲು ‘ಬ್ರೆಜಿಲ್ ಸರಕುಗಳನ್ನು ಬಹಿಷ್ಕರಿಸಿ, ಅಮೆಜಾನ್ ಉಳಿಸಿ’ ಎಂಬ ಘೋಷಣೆಯಡಿ ಒಂದು ರೀತಿಯ ಆಂದೋಲನಕ್ಕೂ ಕರೆ ನೀಡಲಾಗಿದೆ. ಹಾಗಾದರೆ, ಅಲ್ಲಿಂದ ಬಹುದೂರದಲ್ಲಿರುವ ಇನ್ನೊಂದು ಮಾಜಿ ವಸಾಹತಾದ ಭಾರತದ ನಾವು ತೆಗೆದುಕೊಳ್ಳಬೇಕಾದ ನಿಲುವೇನು?

ನಮ್ಮೂರಿನ ನೀರನ್ನು ಹೇಗೆ ಬಳಸಬೇಕು, ಈ ನೆಲ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಬೇರ್ಯಾರೋ ದೊಣ್ಣೆನಾಯಕ ಹೇಳಬೇಕಿಲ್ಲ ಎಂಬುದೇನೋ ಸರಿ. ಆದರೆ, ಇನ್ಯಾರೋ ಕಾಳಜಿಯಿಂದ ಹೇಳುತ್ತಿರುವುದರಲ್ಲಿ ಅವರ ಹಿತಾಸಕ್ತಿ ಮಾತ್ರವಲ್ಲದೇ ನಮ್ಮ ಉಳಿವಿನ ಪ್ರಶ್ನೆಯೂ ಇದ್ದರೇ? ಇದು ಕೇವಲ ಇಷ್ಟೇ ಆಗಿಲ್ಲ. ವಾಸ್ತವವೇನೆಂದರೆ, ಬ್ರೆಜಿಲ್‍ನಲ್ಲಿ ಭೂರಹಿತರು ಉಳುಮೆ ಮಾಡಲು ಭೂಮಿಯಿಲ್ಲದೇ ಕಾಡನ್ನು ಸುಡುತ್ತಿರುವ ಸಂಗತಿ ಇದಾಗಿಲ್ಲ. ಎಲ್ಲೋ ಕೆಲವೆಡೆ ಅದೂ ಇರಬಹುದಾದರೂ, ಭಾರೀ ಪ್ರಮಾಣದಲ್ಲಿ ಕಾಡಿನ ನಾಶಕ್ಕೆ ಮುಂದಾಗಿರುವುದು ಯುಎಸ್‍ಎ (ಅಮೆರಿಕದ)ನ ದೊಡ್ಡ ಕಂಪೆನಿಗಳ ಹಿತಾಸಕ್ತಿಯನ್ನು ಕಾಯಲು. ದೊಡ್ಡ ಪ್ರಮಾಣದ ಉಳುಮೆ ಭೂಮಿಯನ್ನು ಬೀಳು ಬಿಟ್ಟಿರುವ ದೊಡ್ಡ ದೊಡ್ಡ ಭೂಮಾಲೀಕರು, ಕಂಪೆನಿಗಳು ಆ ದೇಶದಲ್ಲಿವೆ. ಅಂತಹ ಭೂಮಿಗೆ ಲಗ್ಗೆ ಹಾಕಿ, ಅಲ್ಲಿ ಬೆಳೆ ಬೆಳೆದು ತಮ್ಮದಾಗಿಸಿಕೊಳ್ಳುವ ಒಂದು ಮಹತ್ವದ ಚಳವಳಿ ಬ್ರೆಜಿಲ್‍ನಲ್ಲಿದೆ. ಎಂಎಸ್‍ಟಿ ಎಂಬ ಈ ಭೂರಹಿತರ ಸಂಘಟನೆಯ ಹೋರಾಟದ ಕಾರಣಕ್ಕೆ, ಅಂತಹ ಭೂಮಿಯನ್ನು ಆ ಭೂರಹಿತರಿಗೇ ಕಾನೂನುಬದ್ಧವಾಗಿ ನೀಡುವ ನೀತಿಯೂ ಜಾರಿಗೆ ಬಂದಿದೆ.

ಈ ಕೆಳಗಿನ ಅಂಕಿ-ಅಂಶಗಳನ್ನು ನೋಡಿದರೆ ಅಸಲೀ ಸಂಗತಿ ಸ್ಪಷ್ಟವಾಗುತ್ತದೆ. 21.12 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‍ನ ವಿಸ್ತಾರ 8.510 ಮಿಲಿಯನ್ ಚದರ ಕಿ.ಮೀ. 136.87 ಕೋಟಿ ಜನಸಂಖ್ಯೆಯುಳ್ಳ ಭಾರತದ ವಿಸ್ತಾರ 3.287 ಮಿಲಿಯನ್ ಚದರ ಕಿ.ಮೀ ಆಗಿದೆ. ಇದರ ಮಧ್ಯೆಯೂ ಕೃಷಿ ಪ್ರಧಾನವಾದ ದೇಶವೊಂದು ತಾನು ಹೆಚ್ಚಿನ ಪ್ರಮಾಣದ ಭೂಮಿಯನ್ನು ಕೃಷಿಗೆ ತೊಡಗಿಸುತ್ತೇನೆಂದು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತದೆ. ಆದರೆ ಇಲ್ಲಿ ಅಮೆರಿಕಾದ ಹಿತಾಸಕ್ತಿಗೆ ತಕ್ಕಂತೆ ಕುಣಿಯುತ್ತಿರುವ ಮತ್ತು ತನ್ನ ದೇಶದ ಜನರ ಹಿತಾಸಕ್ತಿಗೆ ವಿರುದ್ಧವಾಗಿಯೂ ವರ್ತಿಸುತ್ತಿರುವ ಅಧ್ಯಕ್ಷ ಮತ್ತು ಆತನ ಪಕ್ಷವು ನಾಶಕ್ಕೆ ಮುಂದಾಗಿದೆ.

ಆ ದೇಶದಲ್ಲಿ ಬೀಳುಬಿದ್ದಿರುವ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಜನರಿಗೆ ಹಂಚಲು ಯಾವ ಆಸಕ್ತಿ ಹೊಂದಿಲ್ಲದ ಸರ್ಕಾರ ಅದಾಗಿದೆ. ಭಾರತದಲ್ಲಿ ಮೋದಿ ಹೇಗೋ ಹಾಗೆಯೇ ಈ ಬೊಲ್ಸೆನಾರೋ ಸಹಾ ಭಾರೀ ಜನಬೆಂಬಲದೊಂದಿಗೆ ಗೆದ್ದು ಬಂದಿರುವುದು. ಹೀಗಾಗಿ ಪರಿಸ್ಥಿತಿ ಕ್ಲಿಷ್ಟವೂ, ಅಪಾಯಕಾರಿಯೂ ಆಗಿದೆ.

ಇಂತಹ ಸಂದರ್ಭದಲ್ಲಿ ಬ್ರೆಜಿಲ್ ಒಳಗಿನ ವಿವೇಕದ ದನಿಗಳಿಗೆ, ಎಂಎಸ್‍ಟಿಯಂತಹ ಸಂಘಟನೆಗಳು ಹೇಳುವ ಸಂಗತಿಗಳಿಗೆ ನಮ್ಮ ಬೆಂಬಲ ಕೊಡುವುದು ಜಗತ್ತಿನ ಎಲ್ಲರ ಕರ್ತವ್ಯವಾಗಿದೆ. ಏಕೆಂದರೆ, ಸದರಿ ಅಮೆಜಾನ್ ಕಾಡುಗಳಲ್ಲಿನ ಆದಿವಾಸಿಗಳನ್ನು ಅಲ್ಲಿಂದ ಒದ್ದೋಡಿಸಿ, ಕಾಡನ್ನು ವಶಪಡಿಸಿಕೊಳ್ಳಬೇಕು ಎಂದು ಬಹಿರಂಗವಾಗಿ ಘೋಷಿಸಿದ್ದ ವ್ಯಕ್ತಿ ಬೊಲ್ಸೆನಾರೋ; ಇದೇ ವ್ಯಕ್ತಿ ಪಾರ್ಲಿಮೆಂಟಿನಲ್ಲೇ ಈ ಹಿಂದೆ ಜನಸಾಮಾನ್ಯರ ಪರವಾಗಿ ದನಿಯೆತ್ತಿದ್ದ ಸಂಸದೆಯೊಬ್ಬರಿಗೆ ‘ನಿನ್ನನ್ನು ನಾನು ರೇಪ್ ಮಾಡುವುದೂ ಇಲ್ಲ. ಅದಕ್ಕೂ ನೀನು ಅರ್ಹಳಲ್ಲ’ ಎಂದು ಹೇಳಿದ್ದನಲ್ಲದೇ, ಸ್ವತಃ ತನ್ನ ಬಗ್ಗೆಯೇ ‘ನನಗೆ ಐದು ಮಕ್ಕಳು. ಮೊದಲ ನಾಲ್ವರು ಹುಡುಗರು. ನಂತರ ನಾನು ದುರ್ಬಲನಾದೆ. ಹಾಗಾಗಿ ಮಗಳು ಜನಿಸಿದಳು’ ಎಂದಿದ್ದ.

ಈ ಪ್ರಕರಣದಲ್ಲೂ ಫ್ರೆಂಚ್ ಅಧ್ಯಕ್ಷ ಮ್ಯಾಕ್ರೋನ್ ಅಮೆಜಾನ್ ಕಾಡಿನ ಕುರಿತು ಕಾಳಜಿ ವ್ಯಕ್ತಪಡಿಸಿದಾಗ, ಮ್ಯಾಕ್ರೋನ್ ಪತ್ನಿಯ ಕುರಿತು ಕೀಳು ಅಭಿರುಚಿಯ ಟ್ವಿಟ್ಟರ್ ಕಾಮೆಂಟ್ ಮಾಡಿದ್ದು ಇದೇ ಬ್ರೆಜಿಲ್ ಅಧ್ಯಕ್ಷ. ಬಡವರು, ದುರ್ಬಲರು, ಕಪ್ಪುವರ್ಣೀಯರು, ಆದಿವಾಸಿಗಳು, ಮಹಿಳೆಯರ ಕುರಿತಾಗಿ ಈತನ ದ್ವೇಷಪೂರಿತ ಮನೋಭಾವವೇ ಪರಿಸರದ ಕುರಿತೂ ವ್ಯಕ್ತವಾಗುತ್ತಿದೆ. ಜಗತ್ತಿನೆಲ್ಲೆಡೆ ಮನುಷ್ಯ ಕುಲದ ವಿನಾಶಕ್ಕೆ ನಿಂತಿರುವ ಬೊಲ್ಸೆನಾರೋಗಳ ವಿರುದ್ಧ ಜಗತ್ತಿನೆಲ್ಲೆಡೆಯ ಜನರೂ ಒಂದಾಗಿ ದನಿಯೆತ್ತಬೇಕಾದ ದಿನಗಳು ಬಂದಿವೆ. ಅಮೆಜಾನ್‍ಗೆ ಬಿದ್ದಿರುವ ಬೆಂಕಿ ಭಾರತವನ್ನೂ ಸುಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...