Homeಅಂತರಾಷ್ಟ್ರೀಯಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ...

ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

- Advertisement -
- Advertisement -

| ಸಂಪಾದಕೀಯ |

ಜಗತ್ತಿನ ಒಟ್ಟು ಶುದ್ಧ ಕುಡಿಯುವ ನೀರಿನಲ್ಲಿ ಐದನೇ ಒಂದು ಭಾಗವನ್ನು ಪೂರೈಸುವ ಅಮೆಜಾನ್ (ನದಿ ಮತ್ತು ಕಾಡು)ಗೆ ಬೆಂಕಿ ಬಿದ್ದಿದೆ. ಕಳೆದ ತಿಂಗಳೊಂದರಲ್ಲೇ 26,000 ಕಡೆ ಬೆಂಕಿ ಬಿದ್ದಿದೆ. ವರ್ಷದ ಆರಂಭದಿಂದ ಲೆಕ್ಕಕ್ಕೆ ತೆಗೆದುಕೊಂಡರೆ 80,000 ಕಡೆ ಕಾಡಿಗೆ ಬೆಂಕಿ ಬಿದ್ದಿದೆ. ಇದು ಬಿದ್ದ ಬೆಂಕಿ ಅಲ್ಲ, ಹಚ್ಚಿದ ಬೆಂಕಿ ಮತ್ತು ಇದಕ್ಕೆ ಆ ದೇಶದ ಮುಖ್ಯಸ್ಥರ ಬೆಂಬಲವಿದೆ ಎಂಬುದೇ ಕಳವಳದ ಸಂಗತಿ. ಆ ದೇಶದ ಮುಖ್ಯಸ್ಥರ ಬೆಂಬಲವಷ್ಟೇ ಅಲ್ಲದೇ ಅಮೆರಿಕಾದ ಕೃಷಿ ವ್ಯವಹಾರಸ್ಥರ ಬೆಂಬಲವೂ ಇದೆ ಎಂದು ಹೇಳಲಾಗುತ್ತಿದೆ. ಬ್ರೆಜಿಲ್‍ನ ಈಗಿನ ಅಧ್ಯಕ್ಷ ಬೊಲ್ಸೆನಾರೋ ಚುನಾವಣೆಗೆ ಸ್ಪರ್ಧಿಸಿದ್ದಾಗ ನೀಡಿದ್ದ ಚುನಾವಣಾ ಭರವಸೆಯಲ್ಲೇ ಅಮೆಜಾನ್ ಕಾಡನ್ನು ರಕ್ಷಿಸುವ ಕಾಯ್ದೆಗಳನ್ನು ಸಡಿಲಿಸುವುದೂ ಸೇರಿತ್ತು.

ಆ ದೇಶದಲ್ಲಿ ಕಾಡೆಷ್ಟಿರಬೇಕು, ಅಲ್ಲಿ ವ್ಯವಸಾಯ ಮಾಡಲು ಬಯಸುವವರಿಗೆ ಭೂಮಿ ಒದಗಿಸಲು ಯಾವ ರೀತಿಯ ನೀತಿಯಿರಬೇಕು ಎಂಬುದನ್ನು ಅವರು ತಾನೇ ನಿರ್ಧರಿಸಬೇಕು? ಅದೇ ಮಾತನ್ನು ಬೊಲ್ಸೆನಾರೋ ಹೇಳುತ್ತಿರುವುದು. ಈ ಬೆಂಕಿಯನ್ನು ನಂದಿಸಿ ಕಾಡನ್ನು ರಕ್ಷಿಸಲು 20 ಮಿಲಿಯನ್ ಡಾಲರ್ ಕೊಡುತ್ತೇವೆಂದು ಜಿ 7 ರಾಷ್ಟ್ರಗಳ ಶೃಂಗಸಭೆ ಹೇಳಿದಾಗ, ‘ಅದರ ಅಗತ್ಯವಿಲ್ಲ. ಇದು ನಮ್ಮ ಆಂತರಿಕ ವಿಚಾರ’ ಎಂದು ಬೋಲ್ಸೆನಾರೋ ಹೇಳಿಯಾಗಿದೆ.

ಆ ದೇಶದಲ್ಲಿ ಪರಿಸರ ಪ್ರೇಮಿಗಳು ಮತ್ತು ‘ರೈತ ನಾಯಕರು ಹಾಗೂ ಉದ್ದಿಮೆದಾರರ’ ನಡುವೆ ಈ ಕುರಿತು ಒಮ್ಮತವಿಲ್ಲ. ಪರಿಸರವಾದಿಗಳು ಕಾಡನ್ನುಳಿಸೋಣ ಎಂದರೆ, ನಮ್ಮ ಜೀವನಕ್ಕೆ ಕಲ್ಲು ಹಾಕಲು ಬರಬೇಡಿ ಎಂದು ಇನ್ನೊಂದು ಪಕ್ಷ ಹೇಳುತ್ತಿದೆ. ‘ಅಮೆಜಾನ್ ಉಳಿಸಿ’ ಎಂಬ ಕೂಗನ್ನು ಬ್ರೆಜಿಲ್ಲೇತರ ಜನರು ಹೇಳಿದಾಗಲೆಲ್ಲಾ ಅಲ್ಲಿ ತಲ್ಲಣವುಂಟಾಗುತ್ತದೆ. ‘ನಮ್ಮ ದೇಶದ ಕಾಡಿನ ಮೇಲೆ ಅಧಿಕಾರ ಚಲಾಯಿಸಲು ಅವರ್ಯಾರು’ ಎಂಬ ಕೂಗು ಹಾಕುತ್ತಾರೆ. ‘ಇದೊಂಥರಾ ವಸಾಹತುಶಾಹಿ ಮನಸ್ಥಿತಿ. ತಮ್ಮ ದೇಶಗಳ ಪರಿಸರವನ್ನು ಪೂರಾ ಹಾಳುಗೆಡವಿಕೊಂಡಿರುವ ಇವರು, ಮಾಜಿ ವಸಾಹತುಗಳಾದ ನಮ್ಮ ಪರಿಸರವನ್ನು ಉಳಿಸಲು ಕರೆ ಕೊಡುವುದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ’ ಎಂದು ಅವರು ಹೇಳುತ್ತಾರೆ.

ಅಮೆಜಾನ್‍ಗೆ ಬೆಂಕಿ ಹಚ್ಚಿ ಅಮೂಲ್ಯವಾದ ಕಾಡನ್ನು ಹಾಳು ಮಾಡುತ್ತಿರುವುದಲ್ಲದೇ, ಅದನ್ನು ರಕ್ಷಿಸಲೂ ಮುಂದಾಗದ ಬ್ರೆಜಿಲ್‍ನ ಸರ್ಕಾರವನ್ನು ಮಣಿಸಲು ‘ಬ್ರೆಜಿಲ್ ಸರಕುಗಳನ್ನು ಬಹಿಷ್ಕರಿಸಿ, ಅಮೆಜಾನ್ ಉಳಿಸಿ’ ಎಂಬ ಘೋಷಣೆಯಡಿ ಒಂದು ರೀತಿಯ ಆಂದೋಲನಕ್ಕೂ ಕರೆ ನೀಡಲಾಗಿದೆ. ಹಾಗಾದರೆ, ಅಲ್ಲಿಂದ ಬಹುದೂರದಲ್ಲಿರುವ ಇನ್ನೊಂದು ಮಾಜಿ ವಸಾಹತಾದ ಭಾರತದ ನಾವು ತೆಗೆದುಕೊಳ್ಳಬೇಕಾದ ನಿಲುವೇನು?

ನಮ್ಮೂರಿನ ನೀರನ್ನು ಹೇಗೆ ಬಳಸಬೇಕು, ಈ ನೆಲ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಬೇರ್ಯಾರೋ ದೊಣ್ಣೆನಾಯಕ ಹೇಳಬೇಕಿಲ್ಲ ಎಂಬುದೇನೋ ಸರಿ. ಆದರೆ, ಇನ್ಯಾರೋ ಕಾಳಜಿಯಿಂದ ಹೇಳುತ್ತಿರುವುದರಲ್ಲಿ ಅವರ ಹಿತಾಸಕ್ತಿ ಮಾತ್ರವಲ್ಲದೇ ನಮ್ಮ ಉಳಿವಿನ ಪ್ರಶ್ನೆಯೂ ಇದ್ದರೇ? ಇದು ಕೇವಲ ಇಷ್ಟೇ ಆಗಿಲ್ಲ. ವಾಸ್ತವವೇನೆಂದರೆ, ಬ್ರೆಜಿಲ್‍ನಲ್ಲಿ ಭೂರಹಿತರು ಉಳುಮೆ ಮಾಡಲು ಭೂಮಿಯಿಲ್ಲದೇ ಕಾಡನ್ನು ಸುಡುತ್ತಿರುವ ಸಂಗತಿ ಇದಾಗಿಲ್ಲ. ಎಲ್ಲೋ ಕೆಲವೆಡೆ ಅದೂ ಇರಬಹುದಾದರೂ, ಭಾರೀ ಪ್ರಮಾಣದಲ್ಲಿ ಕಾಡಿನ ನಾಶಕ್ಕೆ ಮುಂದಾಗಿರುವುದು ಯುಎಸ್‍ಎ (ಅಮೆರಿಕದ)ನ ದೊಡ್ಡ ಕಂಪೆನಿಗಳ ಹಿತಾಸಕ್ತಿಯನ್ನು ಕಾಯಲು. ದೊಡ್ಡ ಪ್ರಮಾಣದ ಉಳುಮೆ ಭೂಮಿಯನ್ನು ಬೀಳು ಬಿಟ್ಟಿರುವ ದೊಡ್ಡ ದೊಡ್ಡ ಭೂಮಾಲೀಕರು, ಕಂಪೆನಿಗಳು ಆ ದೇಶದಲ್ಲಿವೆ. ಅಂತಹ ಭೂಮಿಗೆ ಲಗ್ಗೆ ಹಾಕಿ, ಅಲ್ಲಿ ಬೆಳೆ ಬೆಳೆದು ತಮ್ಮದಾಗಿಸಿಕೊಳ್ಳುವ ಒಂದು ಮಹತ್ವದ ಚಳವಳಿ ಬ್ರೆಜಿಲ್‍ನಲ್ಲಿದೆ. ಎಂಎಸ್‍ಟಿ ಎಂಬ ಈ ಭೂರಹಿತರ ಸಂಘಟನೆಯ ಹೋರಾಟದ ಕಾರಣಕ್ಕೆ, ಅಂತಹ ಭೂಮಿಯನ್ನು ಆ ಭೂರಹಿತರಿಗೇ ಕಾನೂನುಬದ್ಧವಾಗಿ ನೀಡುವ ನೀತಿಯೂ ಜಾರಿಗೆ ಬಂದಿದೆ.

ಈ ಕೆಳಗಿನ ಅಂಕಿ-ಅಂಶಗಳನ್ನು ನೋಡಿದರೆ ಅಸಲೀ ಸಂಗತಿ ಸ್ಪಷ್ಟವಾಗುತ್ತದೆ. 21.12 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‍ನ ವಿಸ್ತಾರ 8.510 ಮಿಲಿಯನ್ ಚದರ ಕಿ.ಮೀ. 136.87 ಕೋಟಿ ಜನಸಂಖ್ಯೆಯುಳ್ಳ ಭಾರತದ ವಿಸ್ತಾರ 3.287 ಮಿಲಿಯನ್ ಚದರ ಕಿ.ಮೀ ಆಗಿದೆ. ಇದರ ಮಧ್ಯೆಯೂ ಕೃಷಿ ಪ್ರಧಾನವಾದ ದೇಶವೊಂದು ತಾನು ಹೆಚ್ಚಿನ ಪ್ರಮಾಣದ ಭೂಮಿಯನ್ನು ಕೃಷಿಗೆ ತೊಡಗಿಸುತ್ತೇನೆಂದು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತದೆ. ಆದರೆ ಇಲ್ಲಿ ಅಮೆರಿಕಾದ ಹಿತಾಸಕ್ತಿಗೆ ತಕ್ಕಂತೆ ಕುಣಿಯುತ್ತಿರುವ ಮತ್ತು ತನ್ನ ದೇಶದ ಜನರ ಹಿತಾಸಕ್ತಿಗೆ ವಿರುದ್ಧವಾಗಿಯೂ ವರ್ತಿಸುತ್ತಿರುವ ಅಧ್ಯಕ್ಷ ಮತ್ತು ಆತನ ಪಕ್ಷವು ನಾಶಕ್ಕೆ ಮುಂದಾಗಿದೆ.

ಆ ದೇಶದಲ್ಲಿ ಬೀಳುಬಿದ್ದಿರುವ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಜನರಿಗೆ ಹಂಚಲು ಯಾವ ಆಸಕ್ತಿ ಹೊಂದಿಲ್ಲದ ಸರ್ಕಾರ ಅದಾಗಿದೆ. ಭಾರತದಲ್ಲಿ ಮೋದಿ ಹೇಗೋ ಹಾಗೆಯೇ ಈ ಬೊಲ್ಸೆನಾರೋ ಸಹಾ ಭಾರೀ ಜನಬೆಂಬಲದೊಂದಿಗೆ ಗೆದ್ದು ಬಂದಿರುವುದು. ಹೀಗಾಗಿ ಪರಿಸ್ಥಿತಿ ಕ್ಲಿಷ್ಟವೂ, ಅಪಾಯಕಾರಿಯೂ ಆಗಿದೆ.

ಇಂತಹ ಸಂದರ್ಭದಲ್ಲಿ ಬ್ರೆಜಿಲ್ ಒಳಗಿನ ವಿವೇಕದ ದನಿಗಳಿಗೆ, ಎಂಎಸ್‍ಟಿಯಂತಹ ಸಂಘಟನೆಗಳು ಹೇಳುವ ಸಂಗತಿಗಳಿಗೆ ನಮ್ಮ ಬೆಂಬಲ ಕೊಡುವುದು ಜಗತ್ತಿನ ಎಲ್ಲರ ಕರ್ತವ್ಯವಾಗಿದೆ. ಏಕೆಂದರೆ, ಸದರಿ ಅಮೆಜಾನ್ ಕಾಡುಗಳಲ್ಲಿನ ಆದಿವಾಸಿಗಳನ್ನು ಅಲ್ಲಿಂದ ಒದ್ದೋಡಿಸಿ, ಕಾಡನ್ನು ವಶಪಡಿಸಿಕೊಳ್ಳಬೇಕು ಎಂದು ಬಹಿರಂಗವಾಗಿ ಘೋಷಿಸಿದ್ದ ವ್ಯಕ್ತಿ ಬೊಲ್ಸೆನಾರೋ; ಇದೇ ವ್ಯಕ್ತಿ ಪಾರ್ಲಿಮೆಂಟಿನಲ್ಲೇ ಈ ಹಿಂದೆ ಜನಸಾಮಾನ್ಯರ ಪರವಾಗಿ ದನಿಯೆತ್ತಿದ್ದ ಸಂಸದೆಯೊಬ್ಬರಿಗೆ ‘ನಿನ್ನನ್ನು ನಾನು ರೇಪ್ ಮಾಡುವುದೂ ಇಲ್ಲ. ಅದಕ್ಕೂ ನೀನು ಅರ್ಹಳಲ್ಲ’ ಎಂದು ಹೇಳಿದ್ದನಲ್ಲದೇ, ಸ್ವತಃ ತನ್ನ ಬಗ್ಗೆಯೇ ‘ನನಗೆ ಐದು ಮಕ್ಕಳು. ಮೊದಲ ನಾಲ್ವರು ಹುಡುಗರು. ನಂತರ ನಾನು ದುರ್ಬಲನಾದೆ. ಹಾಗಾಗಿ ಮಗಳು ಜನಿಸಿದಳು’ ಎಂದಿದ್ದ.

ಈ ಪ್ರಕರಣದಲ್ಲೂ ಫ್ರೆಂಚ್ ಅಧ್ಯಕ್ಷ ಮ್ಯಾಕ್ರೋನ್ ಅಮೆಜಾನ್ ಕಾಡಿನ ಕುರಿತು ಕಾಳಜಿ ವ್ಯಕ್ತಪಡಿಸಿದಾಗ, ಮ್ಯಾಕ್ರೋನ್ ಪತ್ನಿಯ ಕುರಿತು ಕೀಳು ಅಭಿರುಚಿಯ ಟ್ವಿಟ್ಟರ್ ಕಾಮೆಂಟ್ ಮಾಡಿದ್ದು ಇದೇ ಬ್ರೆಜಿಲ್ ಅಧ್ಯಕ್ಷ. ಬಡವರು, ದುರ್ಬಲರು, ಕಪ್ಪುವರ್ಣೀಯರು, ಆದಿವಾಸಿಗಳು, ಮಹಿಳೆಯರ ಕುರಿತಾಗಿ ಈತನ ದ್ವೇಷಪೂರಿತ ಮನೋಭಾವವೇ ಪರಿಸರದ ಕುರಿತೂ ವ್ಯಕ್ತವಾಗುತ್ತಿದೆ. ಜಗತ್ತಿನೆಲ್ಲೆಡೆ ಮನುಷ್ಯ ಕುಲದ ವಿನಾಶಕ್ಕೆ ನಿಂತಿರುವ ಬೊಲ್ಸೆನಾರೋಗಳ ವಿರುದ್ಧ ಜಗತ್ತಿನೆಲ್ಲೆಡೆಯ ಜನರೂ ಒಂದಾಗಿ ದನಿಯೆತ್ತಬೇಕಾದ ದಿನಗಳು ಬಂದಿವೆ. ಅಮೆಜಾನ್‍ಗೆ ಬಿದ್ದಿರುವ ಬೆಂಕಿ ಭಾರತವನ್ನೂ ಸುಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...