Homeಅಂತರಾಷ್ಟ್ರೀಯಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ...

ಎಲ್ಲರೂ ಜೊತೆಗೂಡಿ ಆರಿಸಬೇಕಾದ ಅಮೆಜಾನ್ ಕಾಡಿನ ಬೆಂಕಿ…

- Advertisement -
- Advertisement -

| ಸಂಪಾದಕೀಯ |

ಜಗತ್ತಿನ ಒಟ್ಟು ಶುದ್ಧ ಕುಡಿಯುವ ನೀರಿನಲ್ಲಿ ಐದನೇ ಒಂದು ಭಾಗವನ್ನು ಪೂರೈಸುವ ಅಮೆಜಾನ್ (ನದಿ ಮತ್ತು ಕಾಡು)ಗೆ ಬೆಂಕಿ ಬಿದ್ದಿದೆ. ಕಳೆದ ತಿಂಗಳೊಂದರಲ್ಲೇ 26,000 ಕಡೆ ಬೆಂಕಿ ಬಿದ್ದಿದೆ. ವರ್ಷದ ಆರಂಭದಿಂದ ಲೆಕ್ಕಕ್ಕೆ ತೆಗೆದುಕೊಂಡರೆ 80,000 ಕಡೆ ಕಾಡಿಗೆ ಬೆಂಕಿ ಬಿದ್ದಿದೆ. ಇದು ಬಿದ್ದ ಬೆಂಕಿ ಅಲ್ಲ, ಹಚ್ಚಿದ ಬೆಂಕಿ ಮತ್ತು ಇದಕ್ಕೆ ಆ ದೇಶದ ಮುಖ್ಯಸ್ಥರ ಬೆಂಬಲವಿದೆ ಎಂಬುದೇ ಕಳವಳದ ಸಂಗತಿ. ಆ ದೇಶದ ಮುಖ್ಯಸ್ಥರ ಬೆಂಬಲವಷ್ಟೇ ಅಲ್ಲದೇ ಅಮೆರಿಕಾದ ಕೃಷಿ ವ್ಯವಹಾರಸ್ಥರ ಬೆಂಬಲವೂ ಇದೆ ಎಂದು ಹೇಳಲಾಗುತ್ತಿದೆ. ಬ್ರೆಜಿಲ್‍ನ ಈಗಿನ ಅಧ್ಯಕ್ಷ ಬೊಲ್ಸೆನಾರೋ ಚುನಾವಣೆಗೆ ಸ್ಪರ್ಧಿಸಿದ್ದಾಗ ನೀಡಿದ್ದ ಚುನಾವಣಾ ಭರವಸೆಯಲ್ಲೇ ಅಮೆಜಾನ್ ಕಾಡನ್ನು ರಕ್ಷಿಸುವ ಕಾಯ್ದೆಗಳನ್ನು ಸಡಿಲಿಸುವುದೂ ಸೇರಿತ್ತು.

ಆ ದೇಶದಲ್ಲಿ ಕಾಡೆಷ್ಟಿರಬೇಕು, ಅಲ್ಲಿ ವ್ಯವಸಾಯ ಮಾಡಲು ಬಯಸುವವರಿಗೆ ಭೂಮಿ ಒದಗಿಸಲು ಯಾವ ರೀತಿಯ ನೀತಿಯಿರಬೇಕು ಎಂಬುದನ್ನು ಅವರು ತಾನೇ ನಿರ್ಧರಿಸಬೇಕು? ಅದೇ ಮಾತನ್ನು ಬೊಲ್ಸೆನಾರೋ ಹೇಳುತ್ತಿರುವುದು. ಈ ಬೆಂಕಿಯನ್ನು ನಂದಿಸಿ ಕಾಡನ್ನು ರಕ್ಷಿಸಲು 20 ಮಿಲಿಯನ್ ಡಾಲರ್ ಕೊಡುತ್ತೇವೆಂದು ಜಿ 7 ರಾಷ್ಟ್ರಗಳ ಶೃಂಗಸಭೆ ಹೇಳಿದಾಗ, ‘ಅದರ ಅಗತ್ಯವಿಲ್ಲ. ಇದು ನಮ್ಮ ಆಂತರಿಕ ವಿಚಾರ’ ಎಂದು ಬೋಲ್ಸೆನಾರೋ ಹೇಳಿಯಾಗಿದೆ.

ಆ ದೇಶದಲ್ಲಿ ಪರಿಸರ ಪ್ರೇಮಿಗಳು ಮತ್ತು ‘ರೈತ ನಾಯಕರು ಹಾಗೂ ಉದ್ದಿಮೆದಾರರ’ ನಡುವೆ ಈ ಕುರಿತು ಒಮ್ಮತವಿಲ್ಲ. ಪರಿಸರವಾದಿಗಳು ಕಾಡನ್ನುಳಿಸೋಣ ಎಂದರೆ, ನಮ್ಮ ಜೀವನಕ್ಕೆ ಕಲ್ಲು ಹಾಕಲು ಬರಬೇಡಿ ಎಂದು ಇನ್ನೊಂದು ಪಕ್ಷ ಹೇಳುತ್ತಿದೆ. ‘ಅಮೆಜಾನ್ ಉಳಿಸಿ’ ಎಂಬ ಕೂಗನ್ನು ಬ್ರೆಜಿಲ್ಲೇತರ ಜನರು ಹೇಳಿದಾಗಲೆಲ್ಲಾ ಅಲ್ಲಿ ತಲ್ಲಣವುಂಟಾಗುತ್ತದೆ. ‘ನಮ್ಮ ದೇಶದ ಕಾಡಿನ ಮೇಲೆ ಅಧಿಕಾರ ಚಲಾಯಿಸಲು ಅವರ್ಯಾರು’ ಎಂಬ ಕೂಗು ಹಾಕುತ್ತಾರೆ. ‘ಇದೊಂಥರಾ ವಸಾಹತುಶಾಹಿ ಮನಸ್ಥಿತಿ. ತಮ್ಮ ದೇಶಗಳ ಪರಿಸರವನ್ನು ಪೂರಾ ಹಾಳುಗೆಡವಿಕೊಂಡಿರುವ ಇವರು, ಮಾಜಿ ವಸಾಹತುಗಳಾದ ನಮ್ಮ ಪರಿಸರವನ್ನು ಉಳಿಸಲು ಕರೆ ಕೊಡುವುದನ್ನು ನಾವು ಒಪ್ಪಲು ಸಾಧ್ಯವೇ ಇಲ್ಲ’ ಎಂದು ಅವರು ಹೇಳುತ್ತಾರೆ.

ಅಮೆಜಾನ್‍ಗೆ ಬೆಂಕಿ ಹಚ್ಚಿ ಅಮೂಲ್ಯವಾದ ಕಾಡನ್ನು ಹಾಳು ಮಾಡುತ್ತಿರುವುದಲ್ಲದೇ, ಅದನ್ನು ರಕ್ಷಿಸಲೂ ಮುಂದಾಗದ ಬ್ರೆಜಿಲ್‍ನ ಸರ್ಕಾರವನ್ನು ಮಣಿಸಲು ‘ಬ್ರೆಜಿಲ್ ಸರಕುಗಳನ್ನು ಬಹಿಷ್ಕರಿಸಿ, ಅಮೆಜಾನ್ ಉಳಿಸಿ’ ಎಂಬ ಘೋಷಣೆಯಡಿ ಒಂದು ರೀತಿಯ ಆಂದೋಲನಕ್ಕೂ ಕರೆ ನೀಡಲಾಗಿದೆ. ಹಾಗಾದರೆ, ಅಲ್ಲಿಂದ ಬಹುದೂರದಲ್ಲಿರುವ ಇನ್ನೊಂದು ಮಾಜಿ ವಸಾಹತಾದ ಭಾರತದ ನಾವು ತೆಗೆದುಕೊಳ್ಳಬೇಕಾದ ನಿಲುವೇನು?

ನಮ್ಮೂರಿನ ನೀರನ್ನು ಹೇಗೆ ಬಳಸಬೇಕು, ಈ ನೆಲ ಪರಿಸರವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ಬೇರ್ಯಾರೋ ದೊಣ್ಣೆನಾಯಕ ಹೇಳಬೇಕಿಲ್ಲ ಎಂಬುದೇನೋ ಸರಿ. ಆದರೆ, ಇನ್ಯಾರೋ ಕಾಳಜಿಯಿಂದ ಹೇಳುತ್ತಿರುವುದರಲ್ಲಿ ಅವರ ಹಿತಾಸಕ್ತಿ ಮಾತ್ರವಲ್ಲದೇ ನಮ್ಮ ಉಳಿವಿನ ಪ್ರಶ್ನೆಯೂ ಇದ್ದರೇ? ಇದು ಕೇವಲ ಇಷ್ಟೇ ಆಗಿಲ್ಲ. ವಾಸ್ತವವೇನೆಂದರೆ, ಬ್ರೆಜಿಲ್‍ನಲ್ಲಿ ಭೂರಹಿತರು ಉಳುಮೆ ಮಾಡಲು ಭೂಮಿಯಿಲ್ಲದೇ ಕಾಡನ್ನು ಸುಡುತ್ತಿರುವ ಸಂಗತಿ ಇದಾಗಿಲ್ಲ. ಎಲ್ಲೋ ಕೆಲವೆಡೆ ಅದೂ ಇರಬಹುದಾದರೂ, ಭಾರೀ ಪ್ರಮಾಣದಲ್ಲಿ ಕಾಡಿನ ನಾಶಕ್ಕೆ ಮುಂದಾಗಿರುವುದು ಯುಎಸ್‍ಎ (ಅಮೆರಿಕದ)ನ ದೊಡ್ಡ ಕಂಪೆನಿಗಳ ಹಿತಾಸಕ್ತಿಯನ್ನು ಕಾಯಲು. ದೊಡ್ಡ ಪ್ರಮಾಣದ ಉಳುಮೆ ಭೂಮಿಯನ್ನು ಬೀಳು ಬಿಟ್ಟಿರುವ ದೊಡ್ಡ ದೊಡ್ಡ ಭೂಮಾಲೀಕರು, ಕಂಪೆನಿಗಳು ಆ ದೇಶದಲ್ಲಿವೆ. ಅಂತಹ ಭೂಮಿಗೆ ಲಗ್ಗೆ ಹಾಕಿ, ಅಲ್ಲಿ ಬೆಳೆ ಬೆಳೆದು ತಮ್ಮದಾಗಿಸಿಕೊಳ್ಳುವ ಒಂದು ಮಹತ್ವದ ಚಳವಳಿ ಬ್ರೆಜಿಲ್‍ನಲ್ಲಿದೆ. ಎಂಎಸ್‍ಟಿ ಎಂಬ ಈ ಭೂರಹಿತರ ಸಂಘಟನೆಯ ಹೋರಾಟದ ಕಾರಣಕ್ಕೆ, ಅಂತಹ ಭೂಮಿಯನ್ನು ಆ ಭೂರಹಿತರಿಗೇ ಕಾನೂನುಬದ್ಧವಾಗಿ ನೀಡುವ ನೀತಿಯೂ ಜಾರಿಗೆ ಬಂದಿದೆ.

ಈ ಕೆಳಗಿನ ಅಂಕಿ-ಅಂಶಗಳನ್ನು ನೋಡಿದರೆ ಅಸಲೀ ಸಂಗತಿ ಸ್ಪಷ್ಟವಾಗುತ್ತದೆ. 21.12 ಕೋಟಿ ಜನಸಂಖ್ಯೆಯುಳ್ಳ ಬ್ರೆಜಿಲ್‍ನ ವಿಸ್ತಾರ 8.510 ಮಿಲಿಯನ್ ಚದರ ಕಿ.ಮೀ. 136.87 ಕೋಟಿ ಜನಸಂಖ್ಯೆಯುಳ್ಳ ಭಾರತದ ವಿಸ್ತಾರ 3.287 ಮಿಲಿಯನ್ ಚದರ ಕಿ.ಮೀ ಆಗಿದೆ. ಇದರ ಮಧ್ಯೆಯೂ ಕೃಷಿ ಪ್ರಧಾನವಾದ ದೇಶವೊಂದು ತಾನು ಹೆಚ್ಚಿನ ಪ್ರಮಾಣದ ಭೂಮಿಯನ್ನು ಕೃಷಿಗೆ ತೊಡಗಿಸುತ್ತೇನೆಂದು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತದೆ. ಆದರೆ ಇಲ್ಲಿ ಅಮೆರಿಕಾದ ಹಿತಾಸಕ್ತಿಗೆ ತಕ್ಕಂತೆ ಕುಣಿಯುತ್ತಿರುವ ಮತ್ತು ತನ್ನ ದೇಶದ ಜನರ ಹಿತಾಸಕ್ತಿಗೆ ವಿರುದ್ಧವಾಗಿಯೂ ವರ್ತಿಸುತ್ತಿರುವ ಅಧ್ಯಕ್ಷ ಮತ್ತು ಆತನ ಪಕ್ಷವು ನಾಶಕ್ಕೆ ಮುಂದಾಗಿದೆ.

ಆ ದೇಶದಲ್ಲಿ ಬೀಳುಬಿದ್ದಿರುವ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಜನರಿಗೆ ಹಂಚಲು ಯಾವ ಆಸಕ್ತಿ ಹೊಂದಿಲ್ಲದ ಸರ್ಕಾರ ಅದಾಗಿದೆ. ಭಾರತದಲ್ಲಿ ಮೋದಿ ಹೇಗೋ ಹಾಗೆಯೇ ಈ ಬೊಲ್ಸೆನಾರೋ ಸಹಾ ಭಾರೀ ಜನಬೆಂಬಲದೊಂದಿಗೆ ಗೆದ್ದು ಬಂದಿರುವುದು. ಹೀಗಾಗಿ ಪರಿಸ್ಥಿತಿ ಕ್ಲಿಷ್ಟವೂ, ಅಪಾಯಕಾರಿಯೂ ಆಗಿದೆ.

ಇಂತಹ ಸಂದರ್ಭದಲ್ಲಿ ಬ್ರೆಜಿಲ್ ಒಳಗಿನ ವಿವೇಕದ ದನಿಗಳಿಗೆ, ಎಂಎಸ್‍ಟಿಯಂತಹ ಸಂಘಟನೆಗಳು ಹೇಳುವ ಸಂಗತಿಗಳಿಗೆ ನಮ್ಮ ಬೆಂಬಲ ಕೊಡುವುದು ಜಗತ್ತಿನ ಎಲ್ಲರ ಕರ್ತವ್ಯವಾಗಿದೆ. ಏಕೆಂದರೆ, ಸದರಿ ಅಮೆಜಾನ್ ಕಾಡುಗಳಲ್ಲಿನ ಆದಿವಾಸಿಗಳನ್ನು ಅಲ್ಲಿಂದ ಒದ್ದೋಡಿಸಿ, ಕಾಡನ್ನು ವಶಪಡಿಸಿಕೊಳ್ಳಬೇಕು ಎಂದು ಬಹಿರಂಗವಾಗಿ ಘೋಷಿಸಿದ್ದ ವ್ಯಕ್ತಿ ಬೊಲ್ಸೆನಾರೋ; ಇದೇ ವ್ಯಕ್ತಿ ಪಾರ್ಲಿಮೆಂಟಿನಲ್ಲೇ ಈ ಹಿಂದೆ ಜನಸಾಮಾನ್ಯರ ಪರವಾಗಿ ದನಿಯೆತ್ತಿದ್ದ ಸಂಸದೆಯೊಬ್ಬರಿಗೆ ‘ನಿನ್ನನ್ನು ನಾನು ರೇಪ್ ಮಾಡುವುದೂ ಇಲ್ಲ. ಅದಕ್ಕೂ ನೀನು ಅರ್ಹಳಲ್ಲ’ ಎಂದು ಹೇಳಿದ್ದನಲ್ಲದೇ, ಸ್ವತಃ ತನ್ನ ಬಗ್ಗೆಯೇ ‘ನನಗೆ ಐದು ಮಕ್ಕಳು. ಮೊದಲ ನಾಲ್ವರು ಹುಡುಗರು. ನಂತರ ನಾನು ದುರ್ಬಲನಾದೆ. ಹಾಗಾಗಿ ಮಗಳು ಜನಿಸಿದಳು’ ಎಂದಿದ್ದ.

ಈ ಪ್ರಕರಣದಲ್ಲೂ ಫ್ರೆಂಚ್ ಅಧ್ಯಕ್ಷ ಮ್ಯಾಕ್ರೋನ್ ಅಮೆಜಾನ್ ಕಾಡಿನ ಕುರಿತು ಕಾಳಜಿ ವ್ಯಕ್ತಪಡಿಸಿದಾಗ, ಮ್ಯಾಕ್ರೋನ್ ಪತ್ನಿಯ ಕುರಿತು ಕೀಳು ಅಭಿರುಚಿಯ ಟ್ವಿಟ್ಟರ್ ಕಾಮೆಂಟ್ ಮಾಡಿದ್ದು ಇದೇ ಬ್ರೆಜಿಲ್ ಅಧ್ಯಕ್ಷ. ಬಡವರು, ದುರ್ಬಲರು, ಕಪ್ಪುವರ್ಣೀಯರು, ಆದಿವಾಸಿಗಳು, ಮಹಿಳೆಯರ ಕುರಿತಾಗಿ ಈತನ ದ್ವೇಷಪೂರಿತ ಮನೋಭಾವವೇ ಪರಿಸರದ ಕುರಿತೂ ವ್ಯಕ್ತವಾಗುತ್ತಿದೆ. ಜಗತ್ತಿನೆಲ್ಲೆಡೆ ಮನುಷ್ಯ ಕುಲದ ವಿನಾಶಕ್ಕೆ ನಿಂತಿರುವ ಬೊಲ್ಸೆನಾರೋಗಳ ವಿರುದ್ಧ ಜಗತ್ತಿನೆಲ್ಲೆಡೆಯ ಜನರೂ ಒಂದಾಗಿ ದನಿಯೆತ್ತಬೇಕಾದ ದಿನಗಳು ಬಂದಿವೆ. ಅಮೆಜಾನ್‍ಗೆ ಬಿದ್ದಿರುವ ಬೆಂಕಿ ಭಾರತವನ್ನೂ ಸುಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...