Homeಮುಖಪುಟಅಜ್ಮೀರ್ ಉರೂಸ್‌ಗೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ

ಅಜ್ಮೀರ್ ಉರೂಸ್‌ಗೆ ಚಾದರ್ ಅರ್ಪಿಸಿದ ಪ್ರಧಾನಿ ಮೋದಿ

ಹಿಂದುತ್ವ ಗುಂಪು ಅಜ್ಮೀರ್ ದರ್ಗಾ ದೇವಸ್ಥಾನವೆಂದು ಕೋರ್ಟ್ ಮೆಟ್ಟಿಲೇರಿದೆ

- Advertisement -
- Advertisement -

ಭಾರತದ ಪ್ರಸಿದ್ದ ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿ ಅವರ ಅಜ್ಮೀರ್‌ ದರ್ಗಾ ಶರೀಫ್‌ನ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸಿದ್ದಾರೆ.

ಪ್ರತಿವರ್ಷ ಉರೂಸ್‌ಗೆ ಕೇಂದ್ರ ಸರ್ಕಾರದಿಂದ ಚಾದರ್ ಅರ್ಪಿಸುವುದು ಸಂಪ್ರದಾಯ. ಈ ವರ್ಷ 813ನೇ ಉರೂಸ್ ಸಮಾರಂಭಕ್ಕೆ ಚಾದರ್ ಅರ್ಪಿಸುವ ಮೂಲಕ ಪ್ರಧಾನಿ ಮೋದಿ ಅದನ್ನು ಮುಂದುವರಿಸಿದ್ದಾರೆ.

ಈ ಹಿಂದೆ ದೇಶದ ಎಲ್ಲಾ ಪ್ರಧಾನ ಮಂತ್ರಿಗಳು ಅಜ್ಮೀರ್ ದರ್ಗಾದ ಉರೂಸ್‌ಗೆ ಚಾದರ್ ಅರ್ಪಿಸಿದ್ದಾರೆ. 2014ರಲ್ಲಿ ಮೋದಿಯವರು ಪ್ರಧಾನಿಯಾದ ಬಳಿಕವೂ ಆ ಸಂಪ್ರದಾಯ ಮುಂದುವರೆದಿದೆ.

ಆದರೆ, ಈ ಬಾರಿ ಮೋದಿ ಚಾದರ್ ಅರ್ಪಿಸಿರುವುದು ಬಹಳ ಮಹತ್ವ ವಿಷಯವಾಗಿದೆ. ಏಕೆಂದರೆ, ಮೋದಿಯವರ ಬಿಜೆಪಿ ಪಕ್ಷವನ್ನು ಬೆಂಬಲಿಸುವ ಹಿಂದುತ್ವ ಗುಂಪು ‘ಹಿಂದೂ ಸೇನೆ’ ಅಜ್ಮೀರ್ ದರ್ಗಾವನ್ನು ದೇವಸ್ಥಾನವೆಂದು ಪ್ರತಿಪಾದಿಸಿ ಕೋರ್ಟ್ ಮೆಟ್ಟಿಲೇರಿದೆ.

ಆ ಪ್ರಕರಣ ಅಜ್ಮೀರ್ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ನಡುವೆ ಮೋದಿ ಚಾದರ್ ಅರ್ಪಿಸಿ, ಉರೂಸ್ ಸಮಾರಂಭಕ್ಕೆ ಶುಭ ಕೋರಿರುವುದು ಗಮನಾರ್ಹವಾಗಿದೆ.

ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮೂಲಕ ಪ್ರಧಾನಿ ಮೋದಿ ಅಜ್ಮೀರ್ ಉರೂಸ್‌ಗೆ ಚಾದರ್ ನೀಡಿದ್ದಾರೆ. ಈ ವಿಚಾರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಿರಣ್ ರಿಜಿಜು ಅವರು ” ಅಜ್ಮೀರ್ ದರ್ಗಾದ ಉರೂಸ್‌ ಸಮಾರಂಭಕ್ಕೆ ಪ್ರಧಾನಿ ಮೋದಿ ಚಾದರ್ ಅರ್ಪಿಸಿದ್ದಾರೆ. ಪ್ರಧಾನಿಯ ಈ ನಡೆ ಭಾರತದ ಶ್ರೀಮಂತ ಆಧ್ಯಾತ್ಮಿಕ ಪರಂಪರೆ ಮತ್ತು ಸಾಮರಸ್ಯಕ್ಕೆ ಅವರು ನೀಡುವ ಗೌರವವನ್ನು ಪ್ರತಿಬಿಂಬಿಸುತ್ತದೆ” ಎಂದು ಬರೆದುಕೊಂಡಿದ್ದಾರೆ.

ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ” ಖ್ವಾಜಾ ಮುಈನುದ್ದೀನ್ ಚಿಸ್ತಿಯವರ ಉರೂಸ್‌ಗೆ ಶುಭಾಷಯಗಳು. ಈ ಸಂದರ್ಭ ಪ್ರತಿಯೊಬ್ಬರ ಜೀವನದಲ್ಲಿ ಸುಖ, ಶಾಂತಿಯನ್ನು ತರಲಿ” ಎಂದು ಹಾರೈಸಿದ್ದಾರೆ.

ಹಿಂದುತ್ವ ಸಂಘಟನೆ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ಅಜ್ಮೀರ್ ದರ್ಗಾವನ್ನು ಶಿವ ಮಂದಿರವೆಂದು ಘೋಷಿಸುವಂತೆ ಕೋರಿ ಅಜ್ಮೀರ್‌ನ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ 2024ರ ನವೆಂಬರ್‌ನಲ್ಲಿ ನ್ಯಾಯಾಲಯ ಒಪ್ಪಿಕೊಂಡಿದೆ. ಅರ್ಜಿ ಸಂಬಂಧ ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ಸಮನ್ಸ್ ನೀಡುವಂತೆ ಸೂಚಿಸಿದೆ.

ಮೇಲೆ ಉಲ್ಲೇಖಿಸಿದ ಪ್ರತಿವಾದಿಗಳಿಗೆ ನ್ಯಾಯಾಲದಿಂದ ಸಮನ್ಸ್ ನೀಡಲಾಗಿದೆಯಾ? ಎಂಬುವುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ನಿಗದಿಪಡಿಸಿತ್ತು.

ಆದರೆ, ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ದೇಶದ ಎಲ್ಲಾ ನ್ಯಾಯಾಲಯಗಳಿಗೆ ಸೂಚಿಸಿದೆ.

ಇದನ್ನೂ ಓದಿ : ಆರಾಧನಾ ಸ್ಥಳಗಳ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕೋರಿ ಓವೈಸಿ ಅರ್ಜಿ : ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...