Homeಮುಖಪುಟಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

ಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

- Advertisement -
- Advertisement -

ಕೊರೊನ ವೈರಸ್‌ಗೆ ಭಾರತದ ಪ್ರತಿಕ್ರಿಯೆ “ಪೂರ್ವಭಾವಿ, ಸಕ್ರಿಯ ಮತ್ತು ಶ್ರೇಣೀಕೃತ” ಎಂದು ಕೇಂದ್ರ ಸರ್ಕಾರ ಹೇಳಿದೆ. 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ಯಾವುದೇ ಯೋಜನೆ ಇಲ್ಲದೆ ಘೋಷಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.

ಆದರೆ ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಕೊರೊನ ವೈರಸ್‌ ಅನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಮೊದಲೇ ಸರ್ಕಾರವು ಜನವರಿ 30 ರಂದು ದೇಶದ ಗಡಿಗಳಲ್ಲಿ, ಸಮಗ್ರ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತಂದಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕವಾಗಿ ಸ್ಪೋಟಗೊಂಡ ಎರಡು ತಿಂಗಳ ನಂತರ ಆದ ಲಾಕ್‌ಡೌನ್ ಅನ್ನು ಹಠಾತ್ತನೆ ಮತ್ತು ಯೋಜನೆ ಇಲ್ಲದೆ ಘೋಷಿಸಲಾಗಿದೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರೆ ಹಾಗೂ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳನ್ನು ಮಾಡಲಾಗಿದೆ.

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರವು ಅಗತ್ಯವಾದವುಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿದೆ ಮತ್ತು ಸಾಮಾಜಿಕ ದೂರಕ್ಕಾಗಿ ಜನರು ಮನೆಯಲ್ಲಿಯೇ ಇರಬೇಕೆಂದು ಕೇಳಿಕೊಂಡಿದೆ.

ಸರ್ಕಾರವು ಪರಿಹಾರ ಕ್ರಮಗಳನ್ನು ಘೋಷಿಸಿದ್ದರೂ, ಅದು ಇನ್ನೂ ಹೆಚ್ಚು ಹಾನಿಗೊಳಗಾದ ಲಕ್ಷಾಂತರ ಜನರನ್ನು ತಲುಪಿಲ್ಲ.

ಒಳಬರುವ ವಾಯು ಪ್ರಯಾಣಿಕರನ್ನು ತಪಾಸಣೆ ಮಾಡುವುದು, ನಂತರ ವೀಸಾಗಳನ್ನು ಅಮಾನತುಗೊಳಿಸುವುದು ಮತ್ತು ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಇತರ ದೇಶಗಳಿಗಿಂತ ಹೆಚ್ಚು ಭಾರತವೂ ಮುಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

“ಚೀನಾ ಮತ್ತು ಹಾಂಗ್‌ಕಾಂಗ್‌ನಿಂದ ಒಳಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಉಷ್ಣ ತಪಾಸಣೆಯನ್ನು, ಜನವರಿ 30 ರಂದು ಭಾರತದಲ್ಲಿ ಮೊದಲ ಕೊರೊನ ವೈರಸ್ ಪ್ರಕರಣ ಪತ್ತೆಯಾಗುವುದಕ್ಕಿಂತ ಮುಂಚೆಯೇ ಜನವರಿ 18 ರಂದು ಪ್ರಾರಂಭಿಸಲಾಯಿತು’ ಎಂದುಹೇಳಿದೆ.

ಮೊದಲು ವರದಿಯಾದ ಪ್ರಕರಣಗಳ ನಂತರ ಕ್ರಮವಾಗಿ 25 ದಿನಗಳು ಮತ್ತು 39 ದಿನಗಳ ನಂತರ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ ಇಟಲಿ ಮತ್ತು ಸ್ಪೇನ್‌ನ ಉದಾಹರಣೆಗಳನ್ನು ಉಲ್ಲೇಖಿಸಿ, ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅದು ಕೈಗೊಂಡ ಕ್ರಮಗಳ ಕಾಲಾನುಕ್ರಮವನ್ನು ಹಂಚಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

30 ವಿಮಾನ ನಿಲ್ದಾಣಗಳು, 12 ಪ್ರಮುಖ ಮತ್ತು 65 ಸಣ್ಣ ಬಂದರುಗಳಲ್ಲಿ ಮತ್ತು ಭೂ ಗಡಿಗಳಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಲಾಗಿದೆ, 36 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕವರೇಜ್ ಸಂಪೂರ್ಣವಾಗಿದೆ ಮತ್ತು ಯಾವುದೇ ಅಂತರಗಳಿಲ್ಲ ಎಂದು ಕಣ್ಗಾವಲು ವ್ಯವಸ್ಥೆಯನ್ನು ನಿರ್ವಹಿಸಲು ಮತ್ತು ಮತ್ತಷ್ಟು ಸುಧಾರಿಸಲು ರಾಜ್ಯಗಳನ್ನು ನಿಯಮಿತವಾಗಿ ವಿನಂತಿಸಲಾಗಿದೆ ಎಂದು ಅದು ಹೇಳಿದೆ.

“ಒಂದು ನಿಖರವಾದ ವ್ಯವಸ್ಥೆಯು ಕಣ್ಗಾವಲು ತಪ್ಪಿಸಲು ಪ್ರಯತ್ನಿಸಿದ ಅಥವಾ ಸಂಪರ್ಕತಡೆಯನ್ನು ಅನುಸರಿಸದ ವ್ಯಕ್ತಿಗಳನ್ನು ಪತ್ತೆಹಚ್ಚಲು ರಾಜ್ಯಗಳಿಗೆ ಅನುವು ಮಾಡಿಕೊಟ್ಟಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಶನಿವಾರ ಕೊರೊನ ಪ್ರಕರಣಗಳ ಸಂಖ್ಯೆ 873 ಕ್ಕೆ ಏರಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...