Homeಮುಖಪುಟಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

ಕೊರೊನ ವೈರಸ್ ವಿರುದ್ದ ಭಾರತ ಮೊದಲೇ ಸಜ್ಜಾಗಿತ್ತು: ಕೇಂದ್ರ ಸರಕಾರ

- Advertisement -
- Advertisement -

ಕೊರೊನ ವೈರಸ್‌ಗೆ ಭಾರತದ ಪ್ರತಿಕ್ರಿಯೆ “ಪೂರ್ವಭಾವಿ, ಸಕ್ರಿಯ ಮತ್ತು ಶ್ರೇಣೀಕೃತ” ಎಂದು ಕೇಂದ್ರ ಸರ್ಕಾರ ಹೇಳಿದೆ. 21 ದಿನಗಳ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಅನ್ನು ಯಾವುದೇ ಯೋಜನೆ ಇಲ್ಲದೆ ಘೋಷಿಸಲಾಗಿದೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.

ಆದರೆ ರಾಷ್ಟ್ರವ್ಯಾಪಿ 21 ದಿನಗಳ ಕೊರೊನ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಗಳಾಗಿರುವ ಜನರು ತಮ್ಮ ಮನೆಗಳಿಗೆ ಸಾವಿರಾರು ಕಿಲೋಮೀಟರ್‌ ದೂರಕ್ಕೆ ಕಾಲ್ನಡಿಗೆಯಿಂದ ಹೊರಟಿರುವುದು ದೇಶದಾದ್ಯಂತ ವರದಿಯಾಗಿದೆ.

“ವಿಶ್ವ ಆರೋಗ್ಯ ಸಂಸ್ಥೆ ಕೊರೊನ ವೈರಸ್‌ ಅನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಮೊದಲೇ ಸರ್ಕಾರವು ಜನವರಿ 30 ರಂದು ದೇಶದ ಗಡಿಗಳಲ್ಲಿ, ಸಮಗ್ರ ಪ್ರತಿಕ್ರಿಯೆ ವ್ಯವಸ್ಥೆಯನ್ನು ಜಾರಿಗೆ ತಂದಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಜಾಗತಿಕವಾಗಿ ಸ್ಪೋಟಗೊಂಡ ಎರಡು ತಿಂಗಳ ನಂತರ ಆದ ಲಾಕ್‌ಡೌನ್ ಅನ್ನು ಹಠಾತ್ತನೆ ಮತ್ತು ಯೋಜನೆ ಇಲ್ಲದೆ ಘೋಷಿಸಲಾಗಿದೆ ಇದರಿಂದಾಗಿ ಲಕ್ಷಾಂತರ ಜನರು ಸಿಕ್ಕಿಹಾಕಿಕೊಂಡಿದ್ದಾರೆ ಹಾಗೂ ಆಹಾರ ಮತ್ತು ಮೂಲಭೂತ ಅವಶ್ಯಕತೆಗಳ ಬಗ್ಗೆ ಆತಂಕವನ್ನು ಉಂಟುಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಟೀಕೆಗಳನ್ನು ಮಾಡಲಾಗಿದೆ.

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರವು ಅಗತ್ಯವಾದವುಗಳನ್ನು ಹೊರತುಪಡಿಸಿ ಎಲ್ಲಾ ಚಟುವಟಿಕೆಗಳನ್ನು ನಿಷೇಧಿಸಿದೆ ಮತ್ತು ಸಾಮಾಜಿಕ ದೂರಕ್ಕಾಗಿ ಜನರು ಮನೆಯಲ್ಲಿಯೇ ಇರಬೇಕೆಂದು ಕೇಳಿಕೊಂಡಿದೆ.

ಸರ್ಕಾರವು ಪರಿಹಾರ ಕ್ರಮಗಳನ್ನು ಘೋಷಿಸಿದ್ದರೂ, ಅದು ಇನ್ನೂ ಹೆಚ್ಚು ಹಾನಿಗೊಳಗಾದ ಲಕ್ಷಾಂತರ ಜನರನ್ನು ತಲುಪಿಲ್ಲ.

ಒಳಬರುವ ವಾಯು ಪ್ರಯಾಣಿಕರನ್ನು ತಪಾಸಣೆ ಮಾಡುವುದು, ನಂತರ ವೀಸಾಗಳನ್ನು ಅಮಾನತುಗೊಳಿಸುವುದು ಮತ್ತು ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಇತರ ದೇಶಗಳಿಗಿಂತ ಹೆಚ್ಚು ಭಾರತವೂ ಮುಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

“ಚೀನಾ ಮತ್ತು ಹಾಂಗ್‌ಕಾಂಗ್‌ನಿಂದ ಒಳಬರುವ ಅಂತರರಾಷ್ಟ್ರೀಯ ಪ್ರಯಾಣಿಕರ ಉಷ್ಣ ತಪಾಸಣೆಯನ್ನು, ಜನವರಿ 30 ರಂದು ಭಾರತದಲ್ಲಿ ಮೊದಲ ಕೊರೊನ ವೈರಸ್ ಪ್ರಕರಣ ಪತ್ತೆಯಾಗುವುದಕ್ಕಿಂತ ಮುಂಚೆಯೇ ಜನವರಿ 18 ರಂದು ಪ್ರಾರಂಭಿಸಲಾಯಿತು’ ಎಂದುಹೇಳಿದೆ.

ಮೊದಲು ವರದಿಯಾದ ಪ್ರಕರಣಗಳ ನಂತರ ಕ್ರಮವಾಗಿ 25 ದಿನಗಳು ಮತ್ತು 39 ದಿನಗಳ ನಂತರ ಪ್ರಯಾಣಿಕರನ್ನು ಪರೀಕ್ಷಿಸಲು ಪ್ರಾರಂಭಿಸಿದ ಇಟಲಿ ಮತ್ತು ಸ್ಪೇನ್‌ನ ಉದಾಹರಣೆಗಳನ್ನು ಉಲ್ಲೇಖಿಸಿ, ಸರ್ಕಾರವು ಹಲವಾರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅದು ಕೈಗೊಂಡ ಕ್ರಮಗಳ ಕಾಲಾನುಕ್ರಮವನ್ನು ಹಂಚಿಕೊಂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

30 ವಿಮಾನ ನಿಲ್ದಾಣಗಳು, 12 ಪ್ರಮುಖ ಮತ್ತು 65 ಸಣ್ಣ ಬಂದರುಗಳಲ್ಲಿ ಮತ್ತು ಭೂ ಗಡಿಗಳಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಲಾಗಿದೆ, 36 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕವರೇಜ್ ಸಂಪೂರ್ಣವಾಗಿದೆ ಮತ್ತು ಯಾವುದೇ ಅಂತರಗಳಿಲ್ಲ ಎಂದು ಕಣ್ಗಾವಲು ವ್ಯವಸ್ಥೆಯನ್ನು ನಿರ್ವಹಿಸಲು ಮತ್ತು ಮತ್ತಷ್ಟು ಸುಧಾರಿಸಲು ರಾಜ್ಯಗಳನ್ನು ನಿಯಮಿತವಾಗಿ ವಿನಂತಿಸಲಾಗಿದೆ ಎಂದು ಅದು ಹೇಳಿದೆ.

“ಒಂದು ನಿಖರವಾದ ವ್ಯವಸ್ಥೆಯು ಕಣ್ಗಾವಲು ತಪ್ಪಿಸಲು ಪ್ರಯತ್ನಿಸಿದ ಅಥವಾ ಸಂಪರ್ಕತಡೆಯನ್ನು ಅನುಸರಿಸದ ವ್ಯಕ್ತಿಗಳನ್ನು ಪತ್ತೆಹಚ್ಚಲು ರಾಜ್ಯಗಳಿಗೆ ಅನುವು ಮಾಡಿಕೊಟ್ಟಿದೆ” ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಶನಿವಾರ ಕೊರೊನ ಪ್ರಕರಣಗಳ ಸಂಖ್ಯೆ 873 ಕ್ಕೆ ಏರಿದ್ದು, ಸಾವಿನ ಸಂಖ್ಯೆ 19 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...