Homeಮುಖಪುಟನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಸರ್ಕಾರ

ನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ವಶಕ್ಕೆ ಪಡೆದ ಜಮ್ಮು ಕಾಶ್ಮೀರ ಸರ್ಕಾರ

- Advertisement -
- Advertisement -

ಪ್ರತಿಪಕ್ಷಗಳ ವಿರೋಧದ ನಡುವೆಯೂ ಜಮ್ಮು ಕಾಶ್ಮೀರ ಸರ್ಕಾರ ನಿಷೇಧಿತ ಜಮಾತೆ ಇಸ್ಲಾಮಿಗೆ ಸಂಬಂಧಿಸಿದ 215 ಶಾಲೆಗಳನ್ನು ತನ್ನ ವಶಕ್ಕೆ ಪಡೆದಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕಾಶ್ಮೀರ ಕಣಿವೆಯ 10 ಜಿಲ್ಲೆಗಳ ಶಾಲೆಗಳ ಕಾರ್ಯನಿರ್ವಹಣೆಯನ್ನು ಕಂದಾಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಸರ್ಕಾರಿ ಶಾಲೆಗಳ ಪ್ರಾಂಶುಪಾಲರನ್ನು ಒಳಗೊಂಡ ವಿಶೇಷ ತಂಡ ವಹಿಸಿಕೊಂಡಿವೆ ಎಂದು ವರದಿ ಹೇಳಿದೆ.

ಜಮಾತೆ ಇಸ್ಲಾಮಿ ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಯಾದ ಫಲಾಹ್-ಎ-ಆಮ್ ಟ್ರಸ್ಟ್ ನಡೆಸುತ್ತಿದ್ದ ಶಾಲೆಗಳನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಸರ್ಕಾರ ಶುಕ್ರವಾರ ಘೋಷಿಸಿತ್ತು.

ಕೇಂದ್ರಾಡಳಿತ ಪ್ರದೇಶದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದೆ ಎಂಬ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಮಾತೆ ಇಸ್ಲಾಮಿ ಜಮ್ಮು ಕಾಶ್ಮೀರವನ್ನು 2019ರಲ್ಲಿ ನಿಷೇಧಿಸಲಾಗಿದೆ. (ಜಮಾತೆ ಇಸ್ಲಾಮಿ ಹಿಂದ್ ಭಾರತದಲ್ಲಿ ನಿಷೇಧಿಸಲ್ಪಟ್ಟಿಲ್ಲ ಎರಡೂ ಸಂಘಟನೆಗಳಿಗೆ ವ್ಯತ್ಯಾಸಗಳಿವೆ)

215 ಶಾಲೆಗಳ ವ್ಯವಸ್ಥಾಪಕ ಸಮಿತಿಯ ಸಿಂಧುತ್ವವು ಮುಕ್ತಾಯಗೊಂಡಿದ್ದು, ಆ ಸಂಸ್ಥೆಗಳ ವಿರುದ್ಧ ಗುಪ್ತಚರ ಸಂಸ್ಥೆಗಳು ಪ್ರತಿಕೂಲ ವರದಿ ನೀಡಿವೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ ಎಂದು ದಿ ಹಿಂದೂ ವರದಿ ವಿವರಿಸಿದೆ.

“ಈ ಶಾಲೆಗಳಲ್ಲಿ ದಾಖಲಾದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡುವ ಸಲುವಾಗಿ 215 ಶಾಲೆಗಳ ವ್ಯವಸ್ಥಾಪಕ ಸಮಿತಿಯನ್ನು ಸಂಬಂಧಪಟ್ಟ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಉಪ ಆಯುಕ್ತರು ವಹಿಸಿಕೊಳ್ಳಬೇಕೆಂದು ಈ ಮೂಲಕ ಆದೇಶಿಸಲಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶವನ್ನು ದಿ ಹಿಂದೂ ವರದಿ ಉಲ್ಲೇಖಿಸಿದೆ ತಿಳಿಸಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಅಥವಾ ಜಿಲ್ಲಾಧಿಕಾರಿಗಳು ಹೊಸ ವ್ಯವಸ್ಥಾಪಕ ಸಮಿತಿಯನ್ನು ಪ್ರಸ್ತಾಪಿಸುತ್ತಾರೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.

ಆದರೆ, ಜಮ್ಮು ಕಾಶ್ಮೀರದ ಶಿಕ್ಷಣ ಸಚಿವೆ ಸಕೀನಾ ಇಟ್ಟೂ ಅವರು, ಈ ಶಾಲೆಗಳನ್ನು ಜಿಲ್ಲಾಧಿಕಾರಿಗಳಲ್ಲ, ಸರ್ಕಾರಿ ಶಾಲೆಗಳ ಪ್ರಾಂಶುಪಾಲರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ಟೀಕೆಗಳ ನಡುವೆ ಶಾಲೆಗಳ ಸ್ವಾಧೀನ “ತಾತ್ಕಾಲಿಕ” ಎಂದು ಇಟ್ಟೂ ತಿಳಿಸಿದ್ದಾರೆ.

“ಸರ್ಕಾರ ಸ್ವಾಧೀನಪಡಿಸಿಕೊಂಡ ಶಾಲೆಗಳ ಸಿಬ್ಬಂದಿ ಮುಂದುವರಿಯುತ್ತಾರೆ. ಸಿಐಡಿ ಪರಿಶೀಲನೆಯ ನಂತರ ಹೊಸ ನಿರ್ವಹಣಾ ಸಮಿತಿಗಳನ್ನು ರಚಿಸಲಾಗುವುದು. ಮೂರು ತಿಂಗಳ ನಂತರ ಪ್ರಕ್ರಿಯೆಯನ್ನು ಪರಿಶೀಲಿಸಲಾಗುವುದು” ಎಂದು ಸಚಿವೆ ಇಟ್ಟೂ ಹೇಳಿದ್ಧಾರೆ.

ಶಾಲೆಗಳ ಸ್ವಾಧೀನದ ಬಗ್ಗೆ ಪ್ರತಿಕ್ರಿಯಿಸಿದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, “ಕಾಶ್ಮೀರಿಗಳು ತಮ್ಮ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಕಳೆದ ವರ್ಷ ನ್ಯಾಷನಲ್ ಕಾನ್ಫರೆನ್ಸ್‌ಗೆ ಮತ ಹಾಕಿದ್ದರು. ಆದರೆ, ನ್ಯಾಷನಲ್ ಕಾನ್ಫರೆನ್ಸ್ ಕೇಂದ್ರಾಡಳಿತ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಶಾಲೆಗಳನ್ನು ಗುರಿಯಾಗಿಸಿಕೊಂಡಿದೆ” ಎಂದು ಅವರು ಆರೋಪಿಸಿದ್ದಾರೆ.

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...