Homeರೈತ ಹೋರಾಟಲೋಕಸಭೆಯಲ್ಲಿ ಚರ್ಚೆಯಿಲ್ಲದೆ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ಚರ್ಚೆಯಿಲ್ಲದೆ ಕೃಷಿ ಕಾಯ್ದೆಗಳ ರದ್ದತಿ ಮಸೂದೆ ಅಂಗೀಕಾರ

- Advertisement -
- Advertisement -

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದೆ. ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡನೆ ಮಾಡಿದ ಸರ್ಕಾರ ಯಾವುದೇ ಚರ್ಚೆ ನಡೆಸದೆ ಅಂಗೀಕಾರ ಮಾಡಿದೆ. ವಿರೋಧ ಪಕ್ಷಗಳು ಕೃಷಿ ಕಾಯ್ದೆಗಳ ಅಪಾಯಗಳು ಬಗ್ಗೆ ಚರ್ಚೆ ಮಾಡಲು ಬಯಸಿದ್ದರು. ಅದಕ್ಕಾಗಿ ಪ್ರತಿಭಟನೆ ನಡೆಸಿದರು. ಅದರಿಂದ ಒಂದು ಗಂಟೆಗೂ ಹೆಚ್ಚು ಕಾಲ ಅಧಿವೇಶನವನ್ನು ಮುಂದೂಡಲಾಗಿತ್ತು. ಮಸೂದೆ ಕುರಿತು ಅವಕಾಶ ನೀಡದ ಸ್ಪೀಕರ್ ಓಂ ಬಿರ್ಲಾರವರು ಲೋಕಸಭೆಯಲ್ಲಿ ಅಂಗೀಕರಿಸಿದ್ದಾರೆ.

ರಾಜ್ಯಸಭೆಯ ಅಧಿವೇಶನದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್‌ರವರಿಗೆ ಶ್ರಧ್ಧಾಂಜಲಿ ಸಲ್ಲಿಸುವ ವಿಚಾರವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕಾರಣದಿಂದಾಗಿ ಅಧಿವೇಶನವನ್ನು ಮುಂದೂಡಲಾಗಿದೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ರವರು ಕೃಷಿ ಕಾಯ್ದೆಗಳನ್ನು ಅಂಗೀಕರಿಸುವ ಮಸೂದೆಯನ್ನು ಮಂಡಿಸಿದ್ದಾರೆ. ಕೇವಲ ನಾಲ್ಕು ನಿಮಿಷಗಳಲ್ಲಿ ಅದನ್ನು ಅಂಗೀಕರಿಸಲಾಯಿತು. ಈ ಕುರಿತು ಒಕ್ಕೂಟ ಸರ್ಕಾರದೊಂದಿಗೆ ಕೃಷಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ಪಕ್ಷವನ್ನು ಸಜ್ಜುಗೊಳಿಸಿದ್ದರು. ತಮ್ಮ ಸಂಸದರಿಗೆ ಇಂದು ಕಡ್ಡಾಯವಾಗಿ ಹಾಜರಾಗುವಂತೆ ಪ್ರತಿಪಕ್ಷ ಕಾಂಗ್ರೆಸ್ ವಿಪ್ ಜಾರಿಗೊಳಿಸಿತ್ತು. ಆದರೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡದೆ ಪಾಸ್ ಮಾಡಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆಯವರೆಗೆ ಅಧಿವೇಶನವನ್ನು ಮುಂದೂಡಿದ್ದಾರೆ.

ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ರ ಮೇಲೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸುವುದರೊಂದಿಗೆ, ಸರ್ಕಾರ ತಾವು ರೈತರ ಪರ ಎಂದು ತೋರಿಕೆಗೆ ಮುಂದಾಗಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ 25 ದಿನಗಳ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 36 ಮಸೂದೆಗಳನ್ನು ಅಂಗೀಕರಿಸುವ ನಿರೀಕ್ಷೆಯಿದೆ. ಕ್ರಿಪ್ಟೋಕರೆನ್ಸಿ ಮಸೂದೆಯು ಸಹ ಪಟ್ಟಿಯಲ್ಲಿದೆ. ಪೆಗಾಸಸ್ ಕಣ್ಗಾವಲು ಪ್ರಕರಣ ಮತ್ತು ಬೆಲೆ ಏರಿಕೆ ಸೇರಿ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.


ಇದನ್ನೂ ಓದಿ: ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...