Homeಮುಖಪುಟಟಿಎಂಸಿ INDIA ಮೈತ್ರಿಕೂಟದ ಜೊತೆ ಇರಲಿದೆ: ಸೀಟು ಹಂಚಿಕೆ ವಿವಾದದ ಮಧ್ಯೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

ಟಿಎಂಸಿ INDIA ಮೈತ್ರಿಕೂಟದ ಜೊತೆ ಇರಲಿದೆ: ಸೀಟು ಹಂಚಿಕೆ ವಿವಾದದ ಮಧ್ಯೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಭಿನ್ನಾಭಿಪ್ರಾಯದ ಬೆನ್ನಲ್ಲಿ ಟಿಎಂಸಿ ಮೈತ್ರಿಯಿಂದ ಹೊರ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ಬಗ್ಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದು, ಬಿಜೆಪಿ ವಿರುದ್ಧದ ಹೋರಾಟದಲ್ಲಿ INDIA ಬಣದ ಭಾಗವಾಗಿ ಉಳಿಯುವುದಾಗಿ ಹೇಳಿದ್ದಾರೆ.

ಟಿಎಂಸಿಯ ಪಶ್ಚಿಮ ಮಿಡ್ನಾಪುರ ಜಿಲ್ಲಾ ಘಟಕದ  ಟಿಎಂಸಿ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧದ ಹೋರಾಟದಲ್ಲಿ ಟಿಎಂಸಿ INDIA ಬಣದ ಜೊತೆಗೆ ಇರಲಿದೆ. ಸಿಪಿಐ(ಎಂ)ನ್ನು ಟೀಕಿಸಿದರೂ ಅವರು ಕಾಂಗ್ರೆಸ್ ವಿರುದ್ಧ ಒಂದೇ ಒಂದು ಮಾತನ್ನೂ ಹೇಳಲಿಲ್ಲ ಎಂದು ಸಭೆಯಲ್ಲಿದ್ದ ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಟಿಎಂಸಿ ಸೇರಿ INDIA ಮೈತ್ರಿಕೂಟದಲ್ಲಿ 28 ಪಕ್ಷಗಳಿವೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪಕ್ಷವು ಮುಕ್ತವಾಗಿದೆ, ಆದರೆ ಮಾತುಕತೆ ವಿಫಲವಾದರೆ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್‌ ಸಿದ್ಧವಾಗಿದೆ ಎಂದು ಟಿಎಂಸಿ ನಾಯಕ, ಸಂಸದ ಸುದೀಪ್ ಬಂಡೋಪಾಧ್ಯಾಯ ಅವರ ಇತ್ತೀಚಿಗೆ ಹೇಳಿಕೆಯನ್ನು ನೀಡಿದ್ದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಪಕ್ಷವು ಟಿಎಂಸಿಯಿಂದ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ ಎಂದು ಹೇಳಿದ ಎರಡು ದಿನಗಳ ಬಳಿಕ ಈ ಹೇಳಿಕೆ ಹೊರಬಿದ್ದಿತ್ತು. ಈ ವಿಷಯದ ಬಗ್ಗೆ ಮಾತನಾಡಲು ಅಧಿಕಾರವಿಲ್ಲ ಎಂದು ಹೆಸರಿಸಲು ನಿರಾಕರಿಸಿದ ಮತ್ತೊಬ್ಬ ಹಿರಿಯ ಟಿಎಂಸಿ ನಾಯಕ ಹೇಳಿದ್ದರು. ಪಶ್ಚಿಮ ಬಂಗಾಳದಲ್ಲಿ ಪಕ್ಷವು ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿದೆ ಆದರೆ ಅಗತ್ಯವಿದ್ದರೆ ಏಕಾಂಗಿಯಾಗಿ ಹೋಗಲು ಸಿದ್ಧವಾಗಿದೆ ಎಂದು ಹೇಳಿದ್ದರು.

ರಾಜ್ಯದ 42 ಲೋಕಸಭಾ ಸ್ಥಾನಗಳ ಪೈಕಿ 4 ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಟಿಎಂಸಿ ಚಿಂತನೆ ನಡೆಸಿತ್ತು. 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಟಿಎಂಸಿ 22 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 2 ಸ್ಥಾನಗಳನ್ನು ಗೆದ್ದಿತು ಮತ್ತು ಬಿಜೆಪಿ 18 ಸ್ಥಾನಗಳನ್ನು ಗಳಿಸಿತ್ತು. ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಅಧೀರ್ ರಂಜನ್ ಚೌಧರಿ ಅವರು ಮುರ್ಷಿದಾಬಾದ್ ಜಿಲ್ಲೆಯ ಬಹರಂಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಮಾಜಿ ಕೇಂದ್ರ ಸಚಿವರಾದ ಅಬು ಹಸೇಮ್ ಖಾನ್ ಚೌಧರಿ ಅವರು ಮಾಲ್ಡಾ ಜಿಲ್ಲೆಯ ಮಲ್ದಹಾ ದಕ್ಷಿಣ ಕ್ಷೇತ್ರದಿಂದ ಸತತ ಮೂರನೇ ಗೆಲುವು ಸಾಧಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಟಿಎಂಸಿ ಮುಖ್ಯಸ್ಥ ಬ್ಯಾನರ್ಜಿ ಈ ಹಿಂದೆ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಪ್ರಸ್ತಾವನೆಯನ್ನು ಸಿಪಿಐ(ಎಂ) ತಳ್ಳಿಹಾಕಿತ್ತು. ಈ ಮೊದಲು ಟಿಎಂಸಿ 2001ರ ವಿಧಾನಸಭೆ ಚುನಾವಣೆ, 2009ರ ಲೋಕಸಭೆ ಚುನಾವಣೆ ಮತ್ತು 2011ರ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಇದನ್ನು ಓದಿ: ‘ಶಾಸ್ತ್ರ’ಗಳಿಗೆ ವಿರುದ್ಧವಾಗಿ ‘ರಾಮಮಂದಿರ’ದ ಪ್ರಾಣ ಪ್ರತಿಷ್ಠಾನ: ಹಿಂದೂ ಮಠಾಧೀಶರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...