Homeಅಂತರಾಷ್ಟ್ರೀಯಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

ಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ತೈವಾನ್‌ಗೆ ಅಮೆರಿಕ ಸಂಸತ್ತಿನ ಸ್ಪೀಕರ್ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಭೇಟಿಯ ಹಿನ್ನಲೆಯಲ್ಲಿ ಚೀನಾ-ತೈವಾನ್ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದೆ. ಈ ಮಧ್ಯೆ ತೈವಾನ್ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಔ ಯಾಂಗ್ ಲಿ ಹಸಿಂಗ್ ಅವರು ಶನಿವಾರ ಬೆಳಿಗ್ಗೆ ದಕ್ಷಿಣ ತೈವಾನ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು CNA ವರದಿ ಮಾಡಿದೆ. ಅಧಿಕಾರಿಗಳು ಅವರ ಸಾವಿನ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಮಿಲಿಟರಿ ಒಡೆತನದ ನ್ಯಾಷನಲ್ ಚುಂಗ್-ಶಾನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥರಾಗಿ ತಮ್ಮ ಹುದ್ದೆಯನ್ನು ವಹಿಸಿಕೊಂಡಿದ್ದರು. ಪ್ರಸ್ತುತ ಅವರು ವ್ಯಾಪಾರದ ಉದ್ದೇಶಗಳಿಗಾಗಿ ಪ್ರವಾಸದಲ್ಲಿದ್ದರು ಎಂದು ಸಿಎನ್‌ಎ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ನಂತರ ಚೀನಾ ಮತ್ತು ತೈವಾನ್ ನಡುವಿನ ಉದ್ವಿಗ್ನತೆಯ ನಡುವೆ ಅವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಚೀನಾ ಮತ್ತು ತೈವಾನ್ ನಡುವೆ ಉದ್ವಿಗ್ನತೆ

ತೈವಾನ್‌ಗೆ ನ್ಯಾನ್ಸಿ ಪೆಲೋಸಿಯನ್ನು ಚೀನಾ ವಿರೋಧಿಸಿದ್ದು, “ತನ್ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ದೃಢವಾಗಿ ರಕ್ಷಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದೆ. ಆಗಸ್ಟ್ 2 ರಂದು ನ್ಯಾನ್ಸಿ ತೈವಾನ್‌ಗೆ ಭೇಟಿ ನೀಡಿದ್ದು, ಅಮೆರಿಕದ ಚುನಾಯಿತ ಪ್ರತಿನಿಧಿಯೊಬ್ಬರು ಕಳೆದ 25 ವರ್ಷಗಳಲ್ಲೆ ಇದು ಮೊದಲ ಬಾರಿಯಾಗಿದೆ.

ಪೆಲೋಸಿ ತೈವಾನ್‌ಗೆ ಆಗಮಿಸುವ ಮುಂಚೆಯೇ, ಚೀನಾ ‘ಯುದ್ಧಕ್ಕೆ ಸಿದ್ಧರಾಗಲು’ ತನ್ನ ಮಿಲಿಟರಿಗೆ ಎಚ್ಚರಿಕೆ ನೀಡಿತ್ತು. ಅವರ ಭೇಟಿಯ ದಿನದಂದು, ಚೀನಾದ ಯುದ್ಧನೌಕೆಗಳು ತೈವಾನ್ ತೀರದ ಕಡೆಗೆ ಚಲಿಸಲು ಪ್ರಾರಂಭಿಸಿದವು. ಚೀನಾದ ವಿಮಾನವಾಹಕ ನೌಕೆ ಶಾಂಡೊಂಗ್ (CV-17) ಸನ್ಯಾ ಮತ್ತು ಲಿಯಾನಿಂಗ್-001 ನೌಕಾನೆಲೆಯನ್ನು ತೊರೆದಿದ್ದವು.

27 ಚೀನಾದ ಫೈಟರ್ ಜೆಟ್‌ಗಳು ತೈವಾನ್‌ ವಾಯು ರಕ್ಷಣಾ ವಲಯವನ್ನು ಪ್ರವೇಶಿಸಿದೆ ಎಂದು ಪೆಲೋಸಿ ಭೇಟಿಯ ಒಂದು ದಿನದ ನಂತರ ತೈವಾನ್‌ನ ರಕ್ಷಣಾ ಸಚಿವಾಲಯ ಹೇಳಿದೆ. ವಾಯು ರಕ್ಷಣಾ ವಲಯ ಪ್ರವೇಶಿದ ಫೈಟರ್ ಜೆಟ್‌ಗಳಲ್ಲಿ ಚೀನಾದ ನೌಕಾಪಡೆಯ ಆರು ಜೆ-11 ಯುದ್ಧವಿಮಾನಗಳು, ಐದು ಜೆ-16 ಫೈಟರ್ ಜೆಟ್‌ಗಳು ಮತ್ತು 16 ಎಸ್‌ಯು-30 ಫೈಟರ್ ಜೆಟ್‌ಗಳನ್ನು ಒಳಗೊಂಡಿತ್ತು ಎಂದು ಅದು ಹೇಳಿದೆ.

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತನ್ನ ‘ಅತಿದೊಡ್ಡ’ ಮಿಲಿಟರಿ ಅಭ್ಯಾಸವನ್ನು ಪ್ರಾರಂಭಿಸಿದ ನಂತರ ತೈವಾನ್ ಜಲಸಂಧಿಯಲ್ಲಿ ‘ನಿಖರವಾದ ಕ್ಷಿಪಣಿ ದಾಳಿ’ ನಡೆಸಿ ಸಮರಾಭ್ಯಾಸ ನಡೆಸಿದೆ ಎಂದು ಚೀನಾ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...