Homeಅಂತರಾಷ್ಟ್ರೀಯಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

ಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ತೈವಾನ್‌ಗೆ ಅಮೆರಿಕ ಸಂಸತ್ತಿನ ಸ್ಪೀಕರ್ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಭೇಟಿಯ ಹಿನ್ನಲೆಯಲ್ಲಿ ಚೀನಾ-ತೈವಾನ್ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದೆ. ಈ ಮಧ್ಯೆ ತೈವಾನ್ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಔ ಯಾಂಗ್ ಲಿ ಹಸಿಂಗ್ ಅವರು ಶನಿವಾರ ಬೆಳಿಗ್ಗೆ ದಕ್ಷಿಣ ತೈವಾನ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು CNA ವರದಿ ಮಾಡಿದೆ. ಅಧಿಕಾರಿಗಳು ಅವರ ಸಾವಿನ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಮಿಲಿಟರಿ ಒಡೆತನದ ನ್ಯಾಷನಲ್ ಚುಂಗ್-ಶಾನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥರಾಗಿ ತಮ್ಮ ಹುದ್ದೆಯನ್ನು ವಹಿಸಿಕೊಂಡಿದ್ದರು. ಪ್ರಸ್ತುತ ಅವರು ವ್ಯಾಪಾರದ ಉದ್ದೇಶಗಳಿಗಾಗಿ ಪ್ರವಾಸದಲ್ಲಿದ್ದರು ಎಂದು ಸಿಎನ್‌ಎ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ನಂತರ ಚೀನಾ ಮತ್ತು ತೈವಾನ್ ನಡುವಿನ ಉದ್ವಿಗ್ನತೆಯ ನಡುವೆ ಅವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಚೀನಾ ಮತ್ತು ತೈವಾನ್ ನಡುವೆ ಉದ್ವಿಗ್ನತೆ

ತೈವಾನ್‌ಗೆ ನ್ಯಾನ್ಸಿ ಪೆಲೋಸಿಯನ್ನು ಚೀನಾ ವಿರೋಧಿಸಿದ್ದು, “ತನ್ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ದೃಢವಾಗಿ ರಕ್ಷಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದೆ. ಆಗಸ್ಟ್ 2 ರಂದು ನ್ಯಾನ್ಸಿ ತೈವಾನ್‌ಗೆ ಭೇಟಿ ನೀಡಿದ್ದು, ಅಮೆರಿಕದ ಚುನಾಯಿತ ಪ್ರತಿನಿಧಿಯೊಬ್ಬರು ಕಳೆದ 25 ವರ್ಷಗಳಲ್ಲೆ ಇದು ಮೊದಲ ಬಾರಿಯಾಗಿದೆ.

ಪೆಲೋಸಿ ತೈವಾನ್‌ಗೆ ಆಗಮಿಸುವ ಮುಂಚೆಯೇ, ಚೀನಾ ‘ಯುದ್ಧಕ್ಕೆ ಸಿದ್ಧರಾಗಲು’ ತನ್ನ ಮಿಲಿಟರಿಗೆ ಎಚ್ಚರಿಕೆ ನೀಡಿತ್ತು. ಅವರ ಭೇಟಿಯ ದಿನದಂದು, ಚೀನಾದ ಯುದ್ಧನೌಕೆಗಳು ತೈವಾನ್ ತೀರದ ಕಡೆಗೆ ಚಲಿಸಲು ಪ್ರಾರಂಭಿಸಿದವು. ಚೀನಾದ ವಿಮಾನವಾಹಕ ನೌಕೆ ಶಾಂಡೊಂಗ್ (CV-17) ಸನ್ಯಾ ಮತ್ತು ಲಿಯಾನಿಂಗ್-001 ನೌಕಾನೆಲೆಯನ್ನು ತೊರೆದಿದ್ದವು.

27 ಚೀನಾದ ಫೈಟರ್ ಜೆಟ್‌ಗಳು ತೈವಾನ್‌ ವಾಯು ರಕ್ಷಣಾ ವಲಯವನ್ನು ಪ್ರವೇಶಿಸಿದೆ ಎಂದು ಪೆಲೋಸಿ ಭೇಟಿಯ ಒಂದು ದಿನದ ನಂತರ ತೈವಾನ್‌ನ ರಕ್ಷಣಾ ಸಚಿವಾಲಯ ಹೇಳಿದೆ. ವಾಯು ರಕ್ಷಣಾ ವಲಯ ಪ್ರವೇಶಿದ ಫೈಟರ್ ಜೆಟ್‌ಗಳಲ್ಲಿ ಚೀನಾದ ನೌಕಾಪಡೆಯ ಆರು ಜೆ-11 ಯುದ್ಧವಿಮಾನಗಳು, ಐದು ಜೆ-16 ಫೈಟರ್ ಜೆಟ್‌ಗಳು ಮತ್ತು 16 ಎಸ್‌ಯು-30 ಫೈಟರ್ ಜೆಟ್‌ಗಳನ್ನು ಒಳಗೊಂಡಿತ್ತು ಎಂದು ಅದು ಹೇಳಿದೆ.

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತನ್ನ ‘ಅತಿದೊಡ್ಡ’ ಮಿಲಿಟರಿ ಅಭ್ಯಾಸವನ್ನು ಪ್ರಾರಂಭಿಸಿದ ನಂತರ ತೈವಾನ್ ಜಲಸಂಧಿಯಲ್ಲಿ ‘ನಿಖರವಾದ ಕ್ಷಿಪಣಿ ದಾಳಿ’ ನಡೆಸಿ ಸಮರಾಭ್ಯಾಸ ನಡೆಸಿದೆ ಎಂದು ಚೀನಾ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...