Homeಅಂತರಾಷ್ಟ್ರೀಯಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

ಚೀನಾ-ತೈವಾನ್ ಬಿಕ್ಕಟ್ಟಿನ ಮಧ್ಯೆ, ತೈವಾನ್‌ನ ಉನ್ನತ ರಕ್ಷಣಾ ಅಧಿಕಾರಿ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆ

- Advertisement -
- Advertisement -

ತೈವಾನ್‌ಗೆ ಅಮೆರಿಕ ಸಂಸತ್ತಿನ ಸ್ಪೀಕರ್ ಸ್ಪೀಕರ್‌ ನ್ಯಾನ್ಸಿ ಪೆಲೋಸಿ ಭೇಟಿಯ ಹಿನ್ನಲೆಯಲ್ಲಿ ಚೀನಾ-ತೈವಾನ್ ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಿದೆ. ಈ ಮಧ್ಯೆ ತೈವಾನ್ ರಕ್ಷಣಾ ಸಚಿವಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ಉಪ ಮುಖ್ಯಸ್ಥ ಔ ಯಾಂಗ್ ಲಿ ಹಸಿಂಗ್ ಅವರು ಶನಿವಾರ ಬೆಳಿಗ್ಗೆ ದಕ್ಷಿಣ ತೈವಾನ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು CNA ವರದಿ ಮಾಡಿದೆ. ಅಧಿಕಾರಿಗಳು ಅವರ ಸಾವಿನ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಔ ಯಾಂಗ್ ಅವರು ವಿವಿಧ ಕ್ಷಿಪಣಿ ಉತ್ಪಾದನಾ ಯೋಜನೆಗಳ ಮೇಲ್ವಿಚಾರಣೆಗಾಗಿ ಈ ವರ್ಷದ ಆರಂಭದಲ್ಲಿ ಮಿಲಿಟರಿ ಒಡೆತನದ ನ್ಯಾಷನಲ್ ಚುಂಗ್-ಶಾನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಉಪ ಮುಖ್ಯಸ್ಥರಾಗಿ ತಮ್ಮ ಹುದ್ದೆಯನ್ನು ವಹಿಸಿಕೊಂಡಿದ್ದರು. ಪ್ರಸ್ತುತ ಅವರು ವ್ಯಾಪಾರದ ಉದ್ದೇಶಗಳಿಗಾಗಿ ಪ್ರವಾಸದಲ್ಲಿದ್ದರು ಎಂದು ಸಿಎನ್‌ಎ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ನಂತರ ಚೀನಾ ಮತ್ತು ತೈವಾನ್ ನಡುವಿನ ಉದ್ವಿಗ್ನತೆಯ ನಡುವೆ ಅವರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಲಡಾಖ್: ಪಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವ ಚೀನಾ!

ಚೀನಾ ಮತ್ತು ತೈವಾನ್ ನಡುವೆ ಉದ್ವಿಗ್ನತೆ

ತೈವಾನ್‌ಗೆ ನ್ಯಾನ್ಸಿ ಪೆಲೋಸಿಯನ್ನು ಚೀನಾ ವಿರೋಧಿಸಿದ್ದು, “ತನ್ನ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ದೃಢವಾಗಿ ರಕ್ಷಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹೇಳಿದೆ. ಆಗಸ್ಟ್ 2 ರಂದು ನ್ಯಾನ್ಸಿ ತೈವಾನ್‌ಗೆ ಭೇಟಿ ನೀಡಿದ್ದು, ಅಮೆರಿಕದ ಚುನಾಯಿತ ಪ್ರತಿನಿಧಿಯೊಬ್ಬರು ಕಳೆದ 25 ವರ್ಷಗಳಲ್ಲೆ ಇದು ಮೊದಲ ಬಾರಿಯಾಗಿದೆ.

ಪೆಲೋಸಿ ತೈವಾನ್‌ಗೆ ಆಗಮಿಸುವ ಮುಂಚೆಯೇ, ಚೀನಾ ‘ಯುದ್ಧಕ್ಕೆ ಸಿದ್ಧರಾಗಲು’ ತನ್ನ ಮಿಲಿಟರಿಗೆ ಎಚ್ಚರಿಕೆ ನೀಡಿತ್ತು. ಅವರ ಭೇಟಿಯ ದಿನದಂದು, ಚೀನಾದ ಯುದ್ಧನೌಕೆಗಳು ತೈವಾನ್ ತೀರದ ಕಡೆಗೆ ಚಲಿಸಲು ಪ್ರಾರಂಭಿಸಿದವು. ಚೀನಾದ ವಿಮಾನವಾಹಕ ನೌಕೆ ಶಾಂಡೊಂಗ್ (CV-17) ಸನ್ಯಾ ಮತ್ತು ಲಿಯಾನಿಂಗ್-001 ನೌಕಾನೆಲೆಯನ್ನು ತೊರೆದಿದ್ದವು.

27 ಚೀನಾದ ಫೈಟರ್ ಜೆಟ್‌ಗಳು ತೈವಾನ್‌ ವಾಯು ರಕ್ಷಣಾ ವಲಯವನ್ನು ಪ್ರವೇಶಿಸಿದೆ ಎಂದು ಪೆಲೋಸಿ ಭೇಟಿಯ ಒಂದು ದಿನದ ನಂತರ ತೈವಾನ್‌ನ ರಕ್ಷಣಾ ಸಚಿವಾಲಯ ಹೇಳಿದೆ. ವಾಯು ರಕ್ಷಣಾ ವಲಯ ಪ್ರವೇಶಿದ ಫೈಟರ್ ಜೆಟ್‌ಗಳಲ್ಲಿ ಚೀನಾದ ನೌಕಾಪಡೆಯ ಆರು ಜೆ-11 ಯುದ್ಧವಿಮಾನಗಳು, ಐದು ಜೆ-16 ಫೈಟರ್ ಜೆಟ್‌ಗಳು ಮತ್ತು 16 ಎಸ್‌ಯು-30 ಫೈಟರ್ ಜೆಟ್‌ಗಳನ್ನು ಒಳಗೊಂಡಿತ್ತು ಎಂದು ಅದು ಹೇಳಿದೆ.

ಇದನ್ನೂ ಓದಿ: ಚೀನಾವೂ ಭಾರತಕ್ಕೆ ಸೇರಿತ್ತು; ಪಠ್ಯಕ್ಕೆ ನುಸುಳಿದೆ ‘ಆರ್‌ಎಸ್‌ಎಸ್‌ ಅಖಂಡ ಭಾರತ!’

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತನ್ನ ‘ಅತಿದೊಡ್ಡ’ ಮಿಲಿಟರಿ ಅಭ್ಯಾಸವನ್ನು ಪ್ರಾರಂಭಿಸಿದ ನಂತರ ತೈವಾನ್ ಜಲಸಂಧಿಯಲ್ಲಿ ‘ನಿಖರವಾದ ಕ್ಷಿಪಣಿ ದಾಳಿ’ ನಡೆಸಿ ಸಮರಾಭ್ಯಾಸ ನಡೆಸಿದೆ ಎಂದು ಚೀನಾ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....