Homeಕರ್ನಾಟಕಗೊಂದಲಗಳ ನಡುವೆ ‘5 ವರ್ಷ LLB’ಯ 2ನೇ & 4ನೇ ಸೆಮಿಸ್ಟರ್‌ ಪರೀಕ್ಷೆ ಪ್ರಾರಂಭ!

ಗೊಂದಲಗಳ ನಡುವೆ ‘5 ವರ್ಷ LLB’ಯ 2ನೇ & 4ನೇ ಸೆಮಿಸ್ಟರ್‌ ಪರೀಕ್ಷೆ ಪ್ರಾರಂಭ!

ಗೊಂದಲದಿಂದಾಗಿ ಹಲವಾರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಮೂರು ವರ್ಷದ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ 2 ನೇ ಮತ್ತು 4 ಸೆಮಿಸ್ಟರ್‌ ಪರೀಕ್ಷೆಯನ್ನು ಮಂಗಳವಾರ ಹೈಕೋರ್ಟ್‌ ವಜಾಮಾಡಿದೆ. ಆದರೆ ಐದು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆ ಇಂದು ಪ್ರಾರಂಭವಾಗಿದೆ. ಆದರೆ ಈ ಪರೀಕ್ಷೆಯ ಬಗ್ಗೆ ಇಂದು ಹೈಕೋರ್ಟ್‌ ತೀರ್ಪು ನೀಡಲಿದೆ!.

ಈ ನಡುವೆ, ಮೂರು ವರ್ಷ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆಗಳು ರದ್ದಾಗಿರುವ ಬಗ್ಗೆ ಕೆಲವು ಪತ್ರಿಕೆಗಳು ಗೊಂದಲಕಾರಿಯಾಗಿ ವರದಿ ಮಾಡಿವೆ. ಇದು ವಿದ್ಯಾರ್ಥಿಗಳನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದ್ದು, ಐದು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಇಂದಿನ ಪರೀಕ್ಷೆಗೆ ತಯಾರಾಗುವುದೇ ಅಥವಾ ಬೇಡವೇ ಎಂಬ ಗೊಂದಲಲ್ಲಿ ಬಿದ್ದಿದ್ದರು.

ಇದನ್ನೂ ಓದಿ:ಪ್ರಶ್ನೆ ಪತ್ರಿಕೆ ಸೋರಿಕೆ: 20 ಲಕ್ಷ ಜನರು ಬರೆಯಬೇಕಿದ್ದ ‘ಉತ್ತರ ಪ್ರದೇಶ TET’ ಪರೀಕ್ಷೆ ರದ್ದು!

ವಿಶ್ವವಿದ್ಯಾಲಯವು ಇಂದು ಮಧ್ಯಾಹ್ನ 2 ಗಂಟೆಗೆ ಐದು ವರ್ಷ ಕಾನೂನು ವ್ಯಾಸಂಗ ಮಾಡುವ 2ನೇ ಮತ್ತು 4 ನೇ ಸೆಮಿಸ್ಟರ್‌ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಿದೆ ಎಂದು ಈ ಹಿಂದೆಯೆ ಹೇಳಿತ್ತು. ಅದರಂತೆ ಇಂದು ಈ ಪರೀಕ್ಷೆ ನಡೆಯಲಿದೆ. ಆದರೆ ಗೊಂದಲದಿಂದಾಗಿ ಹಲವಾರು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದಿಲ್ಲ ಎಂದು ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂ ಹೇಳಿದ್ದಾರೆ.

ಐದು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆ ಇಂದು ನಡೆಯಲಿದೆ ಎಂದು ವಿದ್ಯಾರ್ಥಿ ಕಾರ್ಯಕರ್ತ ಚಿಕ್ಕಮಾರನಹಳ್ಳಿ ಅನಂತ್ ಅವರು ಹೇಳಿದ್ದಾರೆ. ಆದರೆ ಈ ಪರೀಕ್ಷೆಯ ಬಗ್ಗೆ ಹೈಕೋರ್ಟ್ ಇಂದು ತೀರ್ಪು ನೀಡಲಿದೆ ಎಂದು ಅವರು ಹೇಳಿದ್ದಾರೆ. ಆದರೆ ಹೈಕೋರ್ಟ್‌ನಲ್ಲಿ ವಿಚಾರಣೆ ಇನ್ನೂ ನಡೆಯುತ್ತಿದ್ದು, ಪರೀಕ್ಷೆ ಸ್ವಲ್ಪಹೊತ್ತಿನಲ್ಲೇ ಪ್ರಾರಂಭವಾಗುತ್ತದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅನಂತ್‌, “ಮೂರು ವರ್ಷಗಳ ಕಾನೂನು ವ್ಯಾಸಂಗ ಮಾಡುವ 2 ನೇ ಮತ್ತು 4ನೇ ಸೆಮಿಸ್ಟರ್‌ ಪರೀಕ್ಷೆಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಆದರೆ, ಐದು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಪರೀಕ್ಷೆ ಇಂದು ನಡೆಯಲಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಶಾಲಾ ಶುಲ್ಕ ಕಟ್ಟಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಪೂರಕ ಪರೀಕ್ಷೆಯಲ್ಲಿ ಟಾಪರ್‌‌

“ಆದರೆ ವಿಶ್ವವಿದ್ಯಾಲಯವು ಸರಿಯಾಗಿ ಸಂವಹನ ನಡೆಸುತ್ತಿಲ್ಲ. ಐದು ವರ್ಷ ಮತ್ತು ಮೂರು ವರ್ಷ ಕಾನೂನು ವ್ಯಾಸಂಗ ಮಾಡುವ ವಿದ್ಯಾರ್ಥಿಗಳದ್ದು ಸಾಮಾನ್ಯವಾಗಿ ಒಂದೇ ರೀತಿಯ ಪಠ್ಯಕ್ರಮವಿರುತ್ತದೆ. ಆದರೆ ಮೂರು ವರ್ಷಗಳ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಇರುವಾಗ, ಐದು ವರ್ಷಗಳ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದರೆ ಅನ್ಯಾಯವಲ್ಲವೆ” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...