Homeಮುಖಪುಟಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

- Advertisement -
- Advertisement -

ಚುನಾಯಿತ ಸರ್ಕಾರಕ್ಕಿಂತ ಕೇಂದ್ರದ ಪ್ರತಿನಿಧಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌‌‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾಪವಿರುವ ವಿವಾದಾತ್ಮಕ ಮಸೂದೆಯನ್ನು ಬುಧವಾರ ರಾಜ್ಯಸಭೆಯು ಅಂಗೀಕರಿಸಲಾಯಿತು.
ಗೌಜು-ಗದ್ದಲಗಳ ನಡುವೆ ಮಸುದೆ ಅಂಗೀಕಾರ ಪಡೆಯಿತು.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು.
ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಮದ ಹೊರ ನಡೆದಿದ್ದವು.

ಇದನ್ನೂ ಓದಿ: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

ಈ ಮಸೂದೆ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ, ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದರೊಂದಿಗೆ ದೆಹಲಿಯಲ್ಲಿ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, “ರಾಜ್ಯಸಭೆ ಜಿಎನ್‌ಸಿಟಿಡಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ. ಜನರ ಅಧಿಕಾರವನ್ನು ಪುನಃಸ್ಥಾಪಿಸುವ ನಮ್ಮ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಅಡೆತಡೆಗಳು ಏನೇ ಇರಲಿ, ನಾವು ಉತ್ತಮ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕೆಲಸವೂ ನಿಲ್ಲುವುದಿಲ್ಲ ಅಥವಾ ನಿಧಾನಗೊಳ್ಳುವುದಿಲ್ಲ…’ ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು, ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...