Homeಮುಖಪುಟಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

- Advertisement -
- Advertisement -

ಚುನಾಯಿತ ಸರ್ಕಾರಕ್ಕಿಂತ ಕೇಂದ್ರದ ಪ್ರತಿನಿಧಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌‌‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾಪವಿರುವ ವಿವಾದಾತ್ಮಕ ಮಸೂದೆಯನ್ನು ಬುಧವಾರ ರಾಜ್ಯಸಭೆಯು ಅಂಗೀಕರಿಸಲಾಯಿತು.
ಗೌಜು-ಗದ್ದಲಗಳ ನಡುವೆ ಮಸುದೆ ಅಂಗೀಕಾರ ಪಡೆಯಿತು.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು.
ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಮದ ಹೊರ ನಡೆದಿದ್ದವು.

ಇದನ್ನೂ ಓದಿ: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

ಈ ಮಸೂದೆ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ, ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದರೊಂದಿಗೆ ದೆಹಲಿಯಲ್ಲಿ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, “ರಾಜ್ಯಸಭೆ ಜಿಎನ್‌ಸಿಟಿಡಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ. ಜನರ ಅಧಿಕಾರವನ್ನು ಪುನಃಸ್ಥಾಪಿಸುವ ನಮ್ಮ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಅಡೆತಡೆಗಳು ಏನೇ ಇರಲಿ, ನಾವು ಉತ್ತಮ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕೆಲಸವೂ ನಿಲ್ಲುವುದಿಲ್ಲ ಅಥವಾ ನಿಧಾನಗೊಳ್ಳುವುದಿಲ್ಲ…’ ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು, ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...