Homeಮುಖಪುಟಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

- Advertisement -
- Advertisement -

ಚುನಾಯಿತ ಸರ್ಕಾರಕ್ಕಿಂತ ಕೇಂದ್ರದ ಪ್ರತಿನಿಧಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌‌‌ಗೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾಪವಿರುವ ವಿವಾದಾತ್ಮಕ ಮಸೂದೆಯನ್ನು ಬುಧವಾರ ರಾಜ್ಯಸಭೆಯು ಅಂಗೀಕರಿಸಲಾಯಿತು.
ಗೌಜು-ಗದ್ದಲಗಳ ನಡುವೆ ಮಸುದೆ ಅಂಗೀಕಾರ ಪಡೆಯಿತು.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು.
ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಮದ ಹೊರ ನಡೆದಿದ್ದವು.

ಇದನ್ನೂ ಓದಿ: ನಾಲ್ಕು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ಉದ್ಯೋಗ ಖಾತ್ರಿಯ ವೇತನ ನೀಡಿದ ಇಲಾಖೆ!

ಈ ಮಸೂದೆ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ, ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದರೊಂದಿಗೆ ದೆಹಲಿಯಲ್ಲಿ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, “ರಾಜ್ಯಸಭೆ ಜಿಎನ್‌ಸಿಟಿಡಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ. ಜನರ ಅಧಿಕಾರವನ್ನು ಪುನಃಸ್ಥಾಪಿಸುವ ನಮ್ಮ ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಅಡೆತಡೆಗಳು ಏನೇ ಇರಲಿ, ನಾವು ಉತ್ತಮ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕೆಲಸವೂ ನಿಲ್ಲುವುದಿಲ್ಲ ಅಥವಾ ನಿಧಾನಗೊಳ್ಳುವುದಿಲ್ಲ…’ ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು, ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...