Homeಮುಖಪುಟರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

ರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ಸಾಕಷ್ಟು ಜನಬೆಂಬಲ ಗಳಿಸಿರುವ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಕೇಂದ್ರ ಸಚಿವರೊಬ್ಬರ ಕೈಯಿಂದ ತಮ್ಮ ಶೂ ದಾರವನ್ನು ಕಟ್ಟಿಸಿಕೊಂಡಿದ್ದಾರೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು ಎಂದು ಟ್ವಿಟರ್ ಟ್ಯಾಗ್ ಮಾಡಿದೆ.

“ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ತಮಗಿಂತ ಕಿರಿಯರಾದ ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ರಾಹುಲ್ ಗಾಂಧಿ ತನ್ನ ಕೆಲಸ ತಾನು ಮಾಡಿಕೊಳ್ಳದ ದುರಂಕಾರಿ ಸಿಂಗ್ ಅವರ ತನ್ನ ಬೆನ್ನು ತಟ್ಟುತ್ತಾರೆ. ಕಾಂಗ್ರೆಸ್‌ನಲ್ಲಿ ಇಂತವರ ಕೊರತೆಯಿಲ್ಲ” ಎಂದು ಬರೆದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

 

ರಾಹುಲ್ ಗಾಂಧಿ ಅವರು ಈ ಕೂಡಲೇ ಜಿತೇಂದ್ರ ಸಿಂಗ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್‌ರವರು ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

 

ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರಿಂದ ತಮ್ಮ ಶೂ ಲೇಸ್‌ ಅನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೆ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿಯವರ ಶೂ ಲೇಸ್‌ ಕಟ್ಟಿಲ್ಲ ತನ್ನದೇ ಶೂ ಲೇಸ್‌ ಕಟ್ಟಿಕೊಂಡ ಜಿತೇಂದ್ರ ಸಿಂಗ್ ವಿಡಿಯೋವನ್ನು BJP ಐಟಿ ಸೆಲ್ ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಟ್ವಿಟರ್ ಈ ಮೀಡಿಯಾ ಸಂದರ್ಭಕ್ಕೆ ಹೊರತಾಗಿದೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಫ್ಯಾಕ್ಟ್‌ಚೆಕ್ ಪತ್ರಕರ್ತ ಮೊಹಮ್ಮದ್ ಝುಬೇರ್, “ಟ್ವಿಟರ್ ನಿಮ್ಮ ವಿಡಿಯೋವನ್ನು ಸುಳ್ಳು ಸುದ್ದಿ ಎಂದು ಫ್ಲಾಗ್ ಮಾಡಿದೆ. ಟ್ವಿಟರ್‌ನಿಂದ ಈ ಗೌರವದ ಬ್ಯಾಡ್ಜ್ ಪಡೆದುದ್ದಕ್ಕಾಗಿ ಅಭಿನಂದನೆಗಳು” ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ:  Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...