Homeಮುಖಪುಟರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

ರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ಸಾಕಷ್ಟು ಜನಬೆಂಬಲ ಗಳಿಸಿರುವ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಕೇಂದ್ರ ಸಚಿವರೊಬ್ಬರ ಕೈಯಿಂದ ತಮ್ಮ ಶೂ ದಾರವನ್ನು ಕಟ್ಟಿಸಿಕೊಂಡಿದ್ದಾರೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು ಎಂದು ಟ್ವಿಟರ್ ಟ್ಯಾಗ್ ಮಾಡಿದೆ.

“ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ತಮಗಿಂತ ಕಿರಿಯರಾದ ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ರಾಹುಲ್ ಗಾಂಧಿ ತನ್ನ ಕೆಲಸ ತಾನು ಮಾಡಿಕೊಳ್ಳದ ದುರಂಕಾರಿ ಸಿಂಗ್ ಅವರ ತನ್ನ ಬೆನ್ನು ತಟ್ಟುತ್ತಾರೆ. ಕಾಂಗ್ರೆಸ್‌ನಲ್ಲಿ ಇಂತವರ ಕೊರತೆಯಿಲ್ಲ” ಎಂದು ಬರೆದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

 

ರಾಹುಲ್ ಗಾಂಧಿ ಅವರು ಈ ಕೂಡಲೇ ಜಿತೇಂದ್ರ ಸಿಂಗ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್‌ರವರು ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

 

ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರಿಂದ ತಮ್ಮ ಶೂ ಲೇಸ್‌ ಅನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೆ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿಯವರ ಶೂ ಲೇಸ್‌ ಕಟ್ಟಿಲ್ಲ ತನ್ನದೇ ಶೂ ಲೇಸ್‌ ಕಟ್ಟಿಕೊಂಡ ಜಿತೇಂದ್ರ ಸಿಂಗ್ ವಿಡಿಯೋವನ್ನು BJP ಐಟಿ ಸೆಲ್ ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಟ್ವಿಟರ್ ಈ ಮೀಡಿಯಾ ಸಂದರ್ಭಕ್ಕೆ ಹೊರತಾಗಿದೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಫ್ಯಾಕ್ಟ್‌ಚೆಕ್ ಪತ್ರಕರ್ತ ಮೊಹಮ್ಮದ್ ಝುಬೇರ್, “ಟ್ವಿಟರ್ ನಿಮ್ಮ ವಿಡಿಯೋವನ್ನು ಸುಳ್ಳು ಸುದ್ದಿ ಎಂದು ಫ್ಲಾಗ್ ಮಾಡಿದೆ. ಟ್ವಿಟರ್‌ನಿಂದ ಈ ಗೌರವದ ಬ್ಯಾಡ್ಜ್ ಪಡೆದುದ್ದಕ್ಕಾಗಿ ಅಭಿನಂದನೆಗಳು” ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ:  Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...