Homeಮುಖಪುಟರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

ರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ಸಾಕಷ್ಟು ಜನಬೆಂಬಲ ಗಳಿಸಿರುವ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಕೇಂದ್ರ ಸಚಿವರೊಬ್ಬರ ಕೈಯಿಂದ ತಮ್ಮ ಶೂ ದಾರವನ್ನು ಕಟ್ಟಿಸಿಕೊಂಡಿದ್ದಾರೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು ಎಂದು ಟ್ವಿಟರ್ ಟ್ಯಾಗ್ ಮಾಡಿದೆ.

“ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ತಮಗಿಂತ ಕಿರಿಯರಾದ ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ರಾಹುಲ್ ಗಾಂಧಿ ತನ್ನ ಕೆಲಸ ತಾನು ಮಾಡಿಕೊಳ್ಳದ ದುರಂಕಾರಿ ಸಿಂಗ್ ಅವರ ತನ್ನ ಬೆನ್ನು ತಟ್ಟುತ್ತಾರೆ. ಕಾಂಗ್ರೆಸ್‌ನಲ್ಲಿ ಇಂತವರ ಕೊರತೆಯಿಲ್ಲ” ಎಂದು ಬರೆದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

 

ರಾಹುಲ್ ಗಾಂಧಿ ಅವರು ಈ ಕೂಡಲೇ ಜಿತೇಂದ್ರ ಸಿಂಗ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್‌ರವರು ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

 

ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರಿಂದ ತಮ್ಮ ಶೂ ಲೇಸ್‌ ಅನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೆ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿಯವರ ಶೂ ಲೇಸ್‌ ಕಟ್ಟಿಲ್ಲ ತನ್ನದೇ ಶೂ ಲೇಸ್‌ ಕಟ್ಟಿಕೊಂಡ ಜಿತೇಂದ್ರ ಸಿಂಗ್ ವಿಡಿಯೋವನ್ನು BJP ಐಟಿ ಸೆಲ್ ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಟ್ವಿಟರ್ ಈ ಮೀಡಿಯಾ ಸಂದರ್ಭಕ್ಕೆ ಹೊರತಾಗಿದೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಫ್ಯಾಕ್ಟ್‌ಚೆಕ್ ಪತ್ರಕರ್ತ ಮೊಹಮ್ಮದ್ ಝುಬೇರ್, “ಟ್ವಿಟರ್ ನಿಮ್ಮ ವಿಡಿಯೋವನ್ನು ಸುಳ್ಳು ಸುದ್ದಿ ಎಂದು ಫ್ಲಾಗ್ ಮಾಡಿದೆ. ಟ್ವಿಟರ್‌ನಿಂದ ಈ ಗೌರವದ ಬ್ಯಾಡ್ಜ್ ಪಡೆದುದ್ದಕ್ಕಾಗಿ ಅಭಿನಂದನೆಗಳು” ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ:  Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....