Homeಮುಖಪುಟರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

ರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ಸಾಕಷ್ಟು ಜನಬೆಂಬಲ ಗಳಿಸಿರುವ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಕೇಂದ್ರ ಸಚಿವರೊಬ್ಬರ ಕೈಯಿಂದ ತಮ್ಮ ಶೂ ದಾರವನ್ನು ಕಟ್ಟಿಸಿಕೊಂಡಿದ್ದಾರೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು ಎಂದು ಟ್ವಿಟರ್ ಟ್ಯಾಗ್ ಮಾಡಿದೆ.

“ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ತಮಗಿಂತ ಕಿರಿಯರಾದ ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ರಾಹುಲ್ ಗಾಂಧಿ ತನ್ನ ಕೆಲಸ ತಾನು ಮಾಡಿಕೊಳ್ಳದ ದುರಂಕಾರಿ ಸಿಂಗ್ ಅವರ ತನ್ನ ಬೆನ್ನು ತಟ್ಟುತ್ತಾರೆ. ಕಾಂಗ್ರೆಸ್‌ನಲ್ಲಿ ಇಂತವರ ಕೊರತೆಯಿಲ್ಲ” ಎಂದು ಬರೆದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

 

ರಾಹುಲ್ ಗಾಂಧಿ ಅವರು ಈ ಕೂಡಲೇ ಜಿತೇಂದ್ರ ಸಿಂಗ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್‌ರವರು ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

 

ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರಿಂದ ತಮ್ಮ ಶೂ ಲೇಸ್‌ ಅನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೆ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿಯವರ ಶೂ ಲೇಸ್‌ ಕಟ್ಟಿಲ್ಲ ತನ್ನದೇ ಶೂ ಲೇಸ್‌ ಕಟ್ಟಿಕೊಂಡ ಜಿತೇಂದ್ರ ಸಿಂಗ್ ವಿಡಿಯೋವನ್ನು BJP ಐಟಿ ಸೆಲ್ ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಟ್ವಿಟರ್ ಈ ಮೀಡಿಯಾ ಸಂದರ್ಭಕ್ಕೆ ಹೊರತಾಗಿದೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಫ್ಯಾಕ್ಟ್‌ಚೆಕ್ ಪತ್ರಕರ್ತ ಮೊಹಮ್ಮದ್ ಝುಬೇರ್, “ಟ್ವಿಟರ್ ನಿಮ್ಮ ವಿಡಿಯೋವನ್ನು ಸುಳ್ಳು ಸುದ್ದಿ ಎಂದು ಫ್ಲಾಗ್ ಮಾಡಿದೆ. ಟ್ವಿಟರ್‌ನಿಂದ ಈ ಗೌರವದ ಬ್ಯಾಡ್ಜ್ ಪಡೆದುದ್ದಕ್ಕಾಗಿ ಅಭಿನಂದನೆಗಳು” ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ:  Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...