Homeಮುಖಪುಟರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

ರಾಹುಲ್ ಗಾಂಧಿ ಕುರಿತು ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು: ಟ್ಯಾಗ್ ಮಾಡಿದ ಟ್ವಿಟರ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇದೀಗ ರಾಜಸ್ಥಾನವನ್ನು ದಾಟಿ ಹರಿಯಾಣವನ್ನು ಪ್ರವೇಶಿಸಿದೆ. ಸಾಕಷ್ಟು ಜನಬೆಂಬಲ ಗಳಿಸಿರುವ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಕೇಂದ್ರ ಸಚಿವರೊಬ್ಬರ ಕೈಯಿಂದ ತಮ್ಮ ಶೂ ದಾರವನ್ನು ಕಟ್ಟಿಸಿಕೊಂಡಿದ್ದಾರೆ ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡಿ ಟೀಕಿಸಿದ್ದಾರೆ. ಈ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಾಡಿದ ಟ್ವೀಟ್ ಸುಳ್ಳು ಎಂದು ಟ್ವಿಟರ್ ಟ್ಯಾಗ್ ಮಾಡಿದೆ.

“ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರು ತಮಗಿಂತ ಕಿರಿಯರಾದ ರಾಹುಲ್ ಗಾಂಧಿ ಅವರ ಶೂ ಲೇಸ್ ಕಟ್ಟಿದ್ದಾರೆ. ಈ ರಾಹುಲ್ ಗಾಂಧಿ ತನ್ನ ಕೆಲಸ ತಾನು ಮಾಡಿಕೊಳ್ಳದ ದುರಂಕಾರಿ ಸಿಂಗ್ ಅವರ ತನ್ನ ಬೆನ್ನು ತಟ್ಟುತ್ತಾರೆ. ಕಾಂಗ್ರೆಸ್‌ನಲ್ಲಿ ಇಂತವರ ಕೊರತೆಯಿಲ್ಲ” ಎಂದು ಬರೆದು ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

 

ರಾಹುಲ್ ಗಾಂಧಿ ಅವರು ಈ ಕೂಡಲೇ ಜಿತೇಂದ್ರ ಸಿಂಗ್ ಅವರಿಗೆ ಕ್ಷಮೆ ಕೋರಬೇಕು. ಇಲ್ಲದೇ ಹೋದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಒತ್ತಾಯಿಸಿದ್ದಾರೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿತೇಂದ್ರ ಸಿಂಗ್‌ರವರು ತಾವು ತಮ್ಮ ಸ್ವಂತ ಶೂ ಲೇಸ್ ಅನ್ನು ಕಟ್ಟುತ್ತಿದ್ದುದಾಗಿ ಸ್ಪಷ್ಟಪಡಿಸಿದ್ದಾರೆ. ಮಾಳವಿಯಾ ವಿರುದ್ಧ ಕಿಡಿಕಾರಿದ ಅವರು, ನಿಮ್ಮ ಟ್ವೀಟ್ ಸಂಪೂರ್ಣ ಸುಳ್ಳಾಗಿದೆ ಹಾಗೂ ಮಾನಹಾನಿಕರವಾಗಿದೆ. ವಾಸ್ತವವಾಗಿ ನನ್ನ ಕೋರಿಕೆಯ ಮೇರೆಗೆ ರಾಹುಲ್ ಗಾಂಧಿಯವರು ಯಾತ್ರೆಯಲ್ಲಿ ನಡೆಯುತ್ತಿದ್ದುದನ್ನು ನಿಲ್ಲಿಸಿ, ನನ್ನ ಶೂ ಲೇಸ್‌ಗಳನ್ನು ಕಟ್ಟಲು ಅನುಮತಿ ನೀಡಿದ್ದರು ಎಂದು ಹೇಳಿದ್ದಾರೆ.

 

ಸುಳ್ಳು ಮಾಹಿತಿಯನ್ನು ಹರಡಿರುವ ನಿಮ್ಮ ಟ್ವೀಟ್ ಅನ್ನು ಅಳಿಸಿ ಹಾಗೂ ಕ್ಷಮೆಯಾಚಿಸಿ. ಇಲ್ಲದೇ ಹೋದಲ್ಲಿ ನೀವು ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಅವರು ಮಾಳವಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಮಾಜಿ ಕೇಂದ್ರ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಅವರಿಂದ ತಮ್ಮ ಶೂ ಲೇಸ್‌ ಅನ್ನು ಕಟ್ಟಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆದರೆ ಜಿತೇಂದ್ರ ಸಿಂಗ್ ಅವರು ರಾಹುಲ್ ಗಾಂಧಿಯವರ ಶೂ ಲೇಸ್‌ ಕಟ್ಟಿಲ್ಲ ತನ್ನದೇ ಶೂ ಲೇಸ್‌ ಕಟ್ಟಿಕೊಂಡ ಜಿತೇಂದ್ರ ಸಿಂಗ್ ವಿಡಿಯೋವನ್ನು BJP ಐಟಿ ಸೆಲ್ ತಪ್ಪಾಗಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಟ್ವಿಟರ್ ಈ ಮೀಡಿಯಾ ಸಂದರ್ಭಕ್ಕೆ ಹೊರತಾಗಿದೆ ಎಂದು ಎಚ್ಚರಿಕೆ ನೀಡಿದೆ.

ಈ ಕುರಿತು ವ್ಯಂಗ್ಯವಾಡಿರುವ ಖ್ಯಾತ ಫ್ಯಾಕ್ಟ್‌ಚೆಕ್ ಪತ್ರಕರ್ತ ಮೊಹಮ್ಮದ್ ಝುಬೇರ್, “ಟ್ವಿಟರ್ ನಿಮ್ಮ ವಿಡಿಯೋವನ್ನು ಸುಳ್ಳು ಸುದ್ದಿ ಎಂದು ಫ್ಲಾಗ್ ಮಾಡಿದೆ. ಟ್ವಿಟರ್‌ನಿಂದ ಈ ಗೌರವದ ಬ್ಯಾಡ್ಜ್ ಪಡೆದುದ್ದಕ್ಕಾಗಿ ಅಭಿನಂದನೆಗಳು” ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ:  Fact check: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....