Homeಮುಖಪುಟ"ಒಬ್ಬ ಭಾರತೀಯ ಸೈನಿಕ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ"- ಅಮಿತ್‌ ಶಾ

“ಒಬ್ಬ ಭಾರತೀಯ ಸೈನಿಕ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ”- ಅಮಿತ್‌ ಶಾ

ಸೈನಿಕರು, ಬಾಲಾಕೋಟ್‌, ಪಾಕಿಸ್ತಾನ ಮತ್ತು ಕಾಶ್ಮೀರದ ವಿಷಯವನ್ನೇ ಪದೇ ಪದೇ ಉಲ್ಲೇಖಿಸಿ ಚುನಾವಣಾ ಭಾಷಣ ಮಾಡಿದ ಅಮಿತ್‌ ಶಾ...

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರದಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

“370 ನೇ ವಿಧಿಯನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಪ್ರಧಾನಿ ಮೋದಿ ತಂದಾಗ, ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ವಿರೋಧಿಸಿವೆ. ರಾಹುಲ್ ಗಾಂಧಿ ಮತ್ತು ಶರದ್ ಪವಾರ್ ಅವರು ಮಹಾರಾಷ್ಟ್ರದ ಜನರಿಗೆ 370 ನೇ ವಿಧಿಯನ್ನು ತೆಗೆದುಹಾಕಿದ್ದರೆ ಏಕೆ ವಿರೋಧ ಮಾಡಿದರು ಎಂದು ಉತ್ತರಿಸಬೇಕೆಂದು ನಾನು ಬಯಸುತ್ತೇನೆ”ಎಂದು ಸಾಂಗ್ಲಿ ಜಿಲ್ಲೆಯ ಜಾಟ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಅವರು ಹೇಳಿದ್ದಾರೆ.

ಈ ಎರಡೂ ಪಕ್ಷಗಳು ಕಾಶ್ಮೀರದ ವಿಷಯವನ್ನಿಟ್ಟುಕೊಂಡು ಓಟ್‌ಬ್ಯಾಂಕ್‌ ರಾಜಕಾರಣ ಮಾಡುತ್ತಿವೆ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ.

“ಪ್ರಧಾನಿ ಮೋದಿ ಇತ್ತೀಚೆಗೆ ವಿಶ್ವಸಂಸ್ಥೆಯಿಂದ ಮರಳಿದ್ದಾರೆ. 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಇಡೀ ಜಗತ್ತು ಒಪ್ಪಿಕೊಂಡಿದೆ. ಮತ್ತೊಂದೆಡೆ, ಪಾಕಿಸ್ತಾನವು ಒಂದು ಮೂಲೆಯಲ್ಲಿ ಏಕಾಂಗಿಯಾಗಿ ನಿಂತಿದೆ” ಎಂದು ಶಾ ಚುನಾವಣಾ ರ್‍ಯಾಲಿಯಲ್ಲಿ ಮಾತಾಡಿದ್ದಾರೆ.

ಪ್ರಧಾನಿ ಮೋದಿಯವರ ಕಾವಲಿನಲ್ಲಿ, ಭಾರತದ ರಾಷ್ಟ್ರೀಯ ಭದ್ರತೆ ಬಲಗೊಂಡಿದೆ. “ಒಬ್ಬ ಭಾರತೀಯ ಸೈನಿಕ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ” ಎಂದು ಇಡೀ ಜಗತ್ತಿಗೆ ತಿಳಿದಿದೆ ಎಂದು ಅವರು ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಬಾಲಕೋಟ್ ವಾಯುದಾಳಿಯನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

1971 ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ನಂತರ ಭಾರತದ ವಿಜಯದ ಬಗ್ಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಅಭಿನಂದಿಸಿದ ಮೊದಲ ವ್ಯಕ್ತಿ ಅಟಲ್ ಬಿಹಾರಿ ವಾಜಪೇಯಿ ಎಂದು ಅವರು ಹೇಳಿದರು. “ನಾವು ಆಗ ವಿರೋಧ ಪಕ್ಷದಲ್ಲಿದ್ದೆವು, ಆದರೆ ನಮಗೆ ರಾಷ್ಟ್ರವು ಮೊದಲು ಬರುತ್ತದೆ” ಎಂದು ಅವರು ಹೇಳಿದ್ದಾರೆ.

ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಗಡಿಯ ಮೂಲಕ ನಿಯಮಿತವಾಗಿ ಪ್ರವೇಶಿಸಿ ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದರು. “ಪ್ರಧಾನಿ ಮೋದಿ ರಾಷ್ಟ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 21 ರಂದು ಮಹಾರಾಷ್ಟ್ರ ಚುನಾವಣೆ ನಡೆಯಲಿದ್ದು ಮತ್ತು ಅಕ್ಟೋಬರ್ 24 ರಂದು ಫಲಿತಾಂಶ ಹೊರಬರಲಿದೆ.

ಇಂದಿನ ಅಮಿತ್‌ ಶಾರವರ ಭಾಷಣ ಕೇಳಿದರೆ ಸೈನಿಕರು, ಬಾಲಾಕೋಟ್‌, ಪಾಕಿಸ್ತಾನ ಮತ್ತು ಕಾಶ್ಮೀರದ ವಿಷಯವನ್ನೇ ಬಿಜೆಪಿ ಪದೇ ಪದೇ ಪ್ರಸ್ತಾಪ ಮಾಡುತ್ತದೆ ಎಂಬುದು ಗೋಚರಿಸುತ್ತಿದೆ. ಬಿಜೆಪಿಯ ಚುನಾವಣೆ ವಿಷಯ ಆರ್ಥಿಕತೆ, ನಿರುದ್ಯೋಗವಾಗಿರದೇ ಮೇಲಿನ ಅಂಶಗಳೇ ಆಗಿರುತ್ತವೆ ಎಂಬುದನ್ನು ಇದು ತೋರಿಸುತ್ತಿದೆ ಎಂದು ಪ್ರತಿಪಕ್ಷಗಳು ಆಪಾದಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...