Homeಮುಖಪುಟ"ಒಬ್ಬ ಭಾರತೀಯ ಸೈನಿಕ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ"- ಅಮಿತ್‌ ಶಾ

“ಒಬ್ಬ ಭಾರತೀಯ ಸೈನಿಕ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ”- ಅಮಿತ್‌ ಶಾ

ಸೈನಿಕರು, ಬಾಲಾಕೋಟ್‌, ಪಾಕಿಸ್ತಾನ ಮತ್ತು ಕಾಶ್ಮೀರದ ವಿಷಯವನ್ನೇ ಪದೇ ಪದೇ ಉಲ್ಲೇಖಿಸಿ ಚುನಾವಣಾ ಭಾಷಣ ಮಾಡಿದ ಅಮಿತ್‌ ಶಾ...

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರದಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

“370 ನೇ ವಿಧಿಯನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಪ್ರಧಾನಿ ಮೋದಿ ತಂದಾಗ, ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ವಿರೋಧಿಸಿವೆ. ರಾಹುಲ್ ಗಾಂಧಿ ಮತ್ತು ಶರದ್ ಪವಾರ್ ಅವರು ಮಹಾರಾಷ್ಟ್ರದ ಜನರಿಗೆ 370 ನೇ ವಿಧಿಯನ್ನು ತೆಗೆದುಹಾಕಿದ್ದರೆ ಏಕೆ ವಿರೋಧ ಮಾಡಿದರು ಎಂದು ಉತ್ತರಿಸಬೇಕೆಂದು ನಾನು ಬಯಸುತ್ತೇನೆ”ಎಂದು ಸಾಂಗ್ಲಿ ಜಿಲ್ಲೆಯ ಜಾಟ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಅವರು ಹೇಳಿದ್ದಾರೆ.

ಈ ಎರಡೂ ಪಕ್ಷಗಳು ಕಾಶ್ಮೀರದ ವಿಷಯವನ್ನಿಟ್ಟುಕೊಂಡು ಓಟ್‌ಬ್ಯಾಂಕ್‌ ರಾಜಕಾರಣ ಮಾಡುತ್ತಿವೆ ಎಂದು ಅಮಿತ್‌ ಶಾ ಆರೋಪಿಸಿದ್ದಾರೆ.

“ಪ್ರಧಾನಿ ಮೋದಿ ಇತ್ತೀಚೆಗೆ ವಿಶ್ವಸಂಸ್ಥೆಯಿಂದ ಮರಳಿದ್ದಾರೆ. 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಇಡೀ ಜಗತ್ತು ಒಪ್ಪಿಕೊಂಡಿದೆ. ಮತ್ತೊಂದೆಡೆ, ಪಾಕಿಸ್ತಾನವು ಒಂದು ಮೂಲೆಯಲ್ಲಿ ಏಕಾಂಗಿಯಾಗಿ ನಿಂತಿದೆ” ಎಂದು ಶಾ ಚುನಾವಣಾ ರ್‍ಯಾಲಿಯಲ್ಲಿ ಮಾತಾಡಿದ್ದಾರೆ.

ಪ್ರಧಾನಿ ಮೋದಿಯವರ ಕಾವಲಿನಲ್ಲಿ, ಭಾರತದ ರಾಷ್ಟ್ರೀಯ ಭದ್ರತೆ ಬಲಗೊಂಡಿದೆ. “ಒಬ್ಬ ಭಾರತೀಯ ಸೈನಿಕ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ” ಎಂದು ಇಡೀ ಜಗತ್ತಿಗೆ ತಿಳಿದಿದೆ ಎಂದು ಅವರು ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಬಾಲಕೋಟ್ ವಾಯುದಾಳಿಯನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

1971 ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದ ನಂತರ ಭಾರತದ ವಿಜಯದ ಬಗ್ಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಅಭಿನಂದಿಸಿದ ಮೊದಲ ವ್ಯಕ್ತಿ ಅಟಲ್ ಬಿಹಾರಿ ವಾಜಪೇಯಿ ಎಂದು ಅವರು ಹೇಳಿದರು. “ನಾವು ಆಗ ವಿರೋಧ ಪಕ್ಷದಲ್ಲಿದ್ದೆವು, ಆದರೆ ನಮಗೆ ರಾಷ್ಟ್ರವು ಮೊದಲು ಬರುತ್ತದೆ” ಎಂದು ಅವರು ಹೇಳಿದ್ದಾರೆ.

ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಮ್ಮ ಗಡಿಯ ಮೂಲಕ ನಿಯಮಿತವಾಗಿ ಪ್ರವೇಶಿಸಿ ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದರು. “ಪ್ರಧಾನಿ ಮೋದಿ ರಾಷ್ಟ್ರವನ್ನು ರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 21 ರಂದು ಮಹಾರಾಷ್ಟ್ರ ಚುನಾವಣೆ ನಡೆಯಲಿದ್ದು ಮತ್ತು ಅಕ್ಟೋಬರ್ 24 ರಂದು ಫಲಿತಾಂಶ ಹೊರಬರಲಿದೆ.

ಇಂದಿನ ಅಮಿತ್‌ ಶಾರವರ ಭಾಷಣ ಕೇಳಿದರೆ ಸೈನಿಕರು, ಬಾಲಾಕೋಟ್‌, ಪಾಕಿಸ್ತಾನ ಮತ್ತು ಕಾಶ್ಮೀರದ ವಿಷಯವನ್ನೇ ಬಿಜೆಪಿ ಪದೇ ಪದೇ ಪ್ರಸ್ತಾಪ ಮಾಡುತ್ತದೆ ಎಂಬುದು ಗೋಚರಿಸುತ್ತಿದೆ. ಬಿಜೆಪಿಯ ಚುನಾವಣೆ ವಿಷಯ ಆರ್ಥಿಕತೆ, ನಿರುದ್ಯೋಗವಾಗಿರದೇ ಮೇಲಿನ ಅಂಶಗಳೇ ಆಗಿರುತ್ತವೆ ಎಂಬುದನ್ನು ಇದು ತೋರಿಸುತ್ತಿದೆ ಎಂದು ಪ್ರತಿಪಕ್ಷಗಳು ಆಪಾದಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...